![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 11, 2023, 11:22 AM IST
ಶಿರ್ವ: ಮೂಡುಬೆಳ್ಳೆ ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವು ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ|ಫಾ| ಜಾರ್ಜ್ ಥಾಮಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ಜೂ. 10 ರಂದು ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ನ್ಯಾಯವಾದಿ ವಿಲ್ಫ್ರೆಡ್ ಡಿಮೆಲ್ಲೋ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿ ಶಿಸ್ತು, ಸಮಯಪಾಲನೆ, ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಮತ್ತು ಕಠಿಣ ಪರಿಶ್ರಮದೊಂದಿಗೆ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕು ಎಂದು ಹೇಳಿದರು.
ಉನ್ನತ ಶ್ರೇಣಿಯಲ್ಲಿ ಪಾಸಾದ ಪಿಯುಸಿಯ 15 ಮತ್ತು ಎಸ್ಸೆಸ್ಸೆಲ್ಸಿಯ 14 ವಿದ್ಯಾರ್ಥಿಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ 1ರಿಂದ 9ನೇ ತರಗತಿವರೆಗಿನ ಪ್ರಥಮ,ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರೀತಿಶ್ ಡೇಸಾ, ಹಿರಿಯರಾದ ಮುಕುಂದ ಕಾಮತ್, ಪ.ಪೂ. ಕಾಲೇಜಿನ ಹಿರಿಯ ಉಪನ್ಯಾಸಕಿ ಜೆಸಿಂತಾ ಲೋಬೋ ವೇದಿಕೆಯಲ್ಲಿದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 618 ಅಂಕದೊಂದಿಗೆ ಪ್ರಥಮ ಸ್ಥಾನ ಗಳಿಸಿದ ತ್ರಿಷಾ ಅವರಿಗೆ ದುಬೈನ ಉದ್ಯಮಿ ಕ್ಲೆಮೆಂಟ್ ಲೋಬೋ ನೀಡಿದ 50 ಸಾವಿರ ನಗದು ಪುರಸ್ಕಾರವನ್ನು ನೀಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಬ್ರ|ಫಿಲಿಪ್ ನೊರೊನ್ಹಾ ಸ್ವಾಗತಿಸಿದರು. ಶಿಕ್ಷಕಿಯರಾದ ಜಾಯ್ಸ ಜೆನಿಫರ್ ಡೇಸಾ ಮತ್ತು ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಬಾಲಕೃಷ್ಣರಾವ್ ವಂದಿಸಿದರು.
You seem to have an Ad Blocker on.
To continue reading, please turn it off or whitelist Udayavani.