Politics: ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಕೂಗು
ಲೋಕಸಭಾ ಟಿಕೆಟ್ ನೀಡಿಕೆಗೆ ಬಿಜೆಪಿ ಚುನಾವಣಾ ಸಿದ್ಧತಾ ಸಭೆಯಲ್ಲಿ ವಿರೋಧ
Team Udayavani, Jan 11, 2024, 12:37 AM IST
ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಈ ಬಾರಿ ಟಿಕೆಟ್ ಕೊಡಬಾರದು ಎಂಬ ಕೂಗು ಬಿಜೆಪಿ ಚುನಾವಣಾ ಸಿದ್ಧತ ಸಭೆಯಲ್ಲಿ ಬಲವಾಗಿ ಮೊಳಗಿದ್ದು, ಹಿರಿಯ ನಾಯಕರ ಸಮ್ಮುಖದಲ್ಲೇ ಸ್ಥಳೀಯ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.
ಮಾಜಿ ಸಚಿವ ಪ್ರಭು ಚೌಹಾಣ್, ಶಾಸಕ ಶರಣು ಸಲಗಾರ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರದ ಮುಖಂಡರು ಸಭೆಯಲ್ಲಿ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಭೆಯ ಮಧ್ಯೆಯೇ ಖೂಬಾ ಎದ್ದು ಹೋದರು ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ಕುಟುಂಬ ವರ್ಗಕ್ಕೆ ಟಿಕೆಟ್ ಕೊಡಬಾರದೆಂದು ಮುಖಂಡರಿಂದ ವಿರೋಧ ವ್ಯಕ್ತವಾಗಿದೆ.
ಖೂಬಾ ಹಾಗೂ ಪ್ರಭು ಚೌಹಾಣ್ ಮಧ್ಯೆ ಬೀದರ್ನಲ್ಲಿ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಲೋಕಸಭಾ ಚುನಾವಣ ಹೊಸ್ತಿಲಲ್ಲಿ ಅನಾವರಣಗೊಂಡಿದ್ದು, ಈ ಹಿಂದೆ ಖೂಬಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಚೌಹಾಣ್ ರಾಜ್ಯ ಬಿಜೆಪಿ ಶಿಸ್ತು ಸಮಿತಿಗೆ ದೂರು ನೀಡಿದ್ದರು. ಈ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಬಗ್ಗೆಯೂ ಈ ಸಭೆಯಲ್ಲಿ ಪ್ರಸ್ತಾವವಾಗಿದೆ. ಹಾಲಿ ಸಂಸದ ದೇವೇಂದ್ರಪ್ಪ ಬದಲು ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡಬೇಕೆಂದು ಕೆಲ ಮುಖಂಡರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.