ವಿದ್ಯುತ್‌ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

ಇದು ಜನದ್ರೋಹದ ಪರಮಾವಧಿ ಎಂದು ಟೀಕೆ

Team Udayavani, Aug 9, 2021, 11:00 PM IST

ವಿದ್ಯುತ್‌ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ರೈತ ವಿರೋಧಿ ತೀರ್ಮಾನಗಳ ಬೆನ್ನಲ್ಲೇ ವಿದ್ಯುತ್‌ ಖಾಸಗೀಕರಣ ಮಾಡುವ ತಿದ್ದುಪಡಿ ಕಾಯ್ದೆ ತರಲು ಕೇಂದ್ರ ಸರ್ಕಾರ ಮುಂದಾಗಿರುವುದು ಜನದ್ರೋಹದ ಪರಮಾವಧಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ವರ್ಷ ಬಲವಂತವಾಗಿ ಜಾರಿಗೆ ತಂದ ಐದು ಮಾರಣಾಂತಿಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಮತ್ತು ಹಲವು ರಾಜ್ಯಗಳಲ್ಲಿ ರೈತ ಪ್ರತಿಭಟನೆಗಳು ನಡೆಯುತ್ತಿರುವಾಗಲೇ ವಿದ್ಯುತ್‌ ಕಾಯ್ದೆ ತರಲು ಹೊರಟಿರುವುದು ಜನವಿರೋಧಿ ಎಂದು ಹೇಳಿದ್ದಾರೆ.

ವಿದ್ಯುತ್‌ ಉತ್ಪಾದನೆ, ಸರಬರಾಜು ಮತ್ತು ವಿತರಣೆಗಳನ್ನು ಖಾಸಗಿಯವರಿಗೆ ವಹಿಸಿಅವರ ಲಾಭಕ್ಕಾಗಿ ಸೆಕ್ಷನ್‌ 3 ರ ಪ್ರಕಾರ “ಎಲೆಕ್ಟ್ರಿಸಿಟಿ ಕಾಂಟ್ರಾಕ್ಟ್ ಎನ್‌ಫೋರ್ಸ್‌ಮೆಂಟ್‌ ಅಥಾರಿಟಿ’ ಜಾರಿಗೊಳಿಸಲಾಗುತ್ತದೆ. ಸೆಕ್ಷನ್‌ 7 ರ ಪ್ರಕಾರ ಹಣ ಕೊಡದೆ, ಭದ್ರತೆ ನೀಡದೆ ಯಾವುದೇ ಕಾರಣಕ್ಕೂ ವಿದ್ಯುತ್‌ ಸರಬರಾಜು ಮಾಡಬಾರದು, ಸೆಕ್ಷನ್‌ 12 ರ ಪ್ರಕಾರ ಸಬ್ಸಿಡಿಗಳನ್ನು ಕಡಿತಮಾಡಬೇಕೆಂದು, ಸೆಕ್ಷನ್‌ 5 ರ ಪ್ರಕಾರ ವಿದ್ಯುತ್‌ ಸರಬರಾಜುದಾರರು ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಈ ಕಾಯ್ದೆ ಹೇಳುತ್ತದೆ. ಇದು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದೇ ಸಾಕ್ಷಿ ಎಂದು ತಿಳಿಸಿದ್ದಾರೆ,

ಪ್ರತಿಯೊಬ್ಬರ ಮನೆಗೂ, ರೈತರ ಪಂಪ್‌ ಸೆಟ್‌ಗೆ ನೇಕಾರರ ಮಗ್ಗಗಳಿಗೆ 22.5 ಕೋಟಿ ಪ್ರೀಪೇಡ್‌ ಸ್ಮಾರ್ಟ್‌ ಮೀಟರ್‌ ಅಳವಡಿಸುತ್ತಾರೆ. ಮೊಬೈಲು ರೀಚಾರ್ಜ್‌ ಮಾಡಿದ ಹಾಗೆ ಬಳಕೆಗೆ ಮೊದಲೆ ಹಣ ಕಟ್ಟಬೇಕು. ಕರೆನ್ಸಿ ಇರುವವರೆಗೆ ವಿದ್ಯುತ್‌ ಸರಬರಾಜಾಗುತ್ತದೆ. ಮುಗಿದ ತಕ್ಷಣ ವಿದ್ಯುತ್‌ ಡಿಸ್‌ ಕನೆಕ್ಟ… ಆಗುತ್ತದೆ. ಸಂಪೂರ್ಣ ಕ್ರಾಸ್‌ ಸಬ್ಸಿಡಿಗಳನ್ನು ನಿಲ್ಲಿಸಲಾಗುತ್ತದೆ. ಇದು ಜನಪರ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ದೇಶದ ವಿದ್ಯುತ್‌ ಸರಬರಾಜು ಕಂಪೆನಿಗಳು ಸುಮಾರು 4.5 ಲಕ್ಷ ಕೋಟಿ ರೂಗಳಷ್ಟು ನಷ್ಟದಲ್ಲಿವೆ. ಹಾಗಾಗಿ ವಿದ್ಯುತ್‌ ಇಲಾಖೆಗಳ ನಿರ್ವಹಣೆಯನ್ನು ಸರ್ಕಾರ ಮಾಡಲಾಗದು ಎನ್ನುವ ಸುಳ್ಳು ಕಾರಣ ಮುಂದಿಟ್ಟು ಮೋದಿಯವರ ಸರ್ಕಾರ ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ ಮಾಡುತ್ತಿದೆ. ಪವರ್‌ ಗ್ರಿಡ್‌ ಕಾರ್ಪೊರೇಷನ್‌ ಇಂಡಿಯಾ ಲಿಮಿಟೆಡ್‌ ನಂತಹ ಸರ್ಕಾರಿ ಸರಬರಾಜು ಕಂಪೆನಿಗಳು ದೊಡ್ಡ ಲಾಭದಲ್ಲಿದ್ದು ಬೃಹತ್‌ ಬಂಡವಾಳ ಹೊಂದಿವೆ. ಇಂದು ವಿದ್ಯುತ್‌ ಉತ್ಪಾದನೆಗೂ ಕೊರತೆ ಇಲ್ಲ. ಉತ್ಪಾದನಾ ಕಂಪನಿಗಳೂ ದೊಡ್ಡ ಮಟ್ಟದ ಲಾಭ ಮಾಡುತ್ತಿವೆ ಎಂದು ದೂರಿದ್ದಾರೆ.

ನಮ್ಮ ಸಂವಿಧಾನದ 7 ನೇ ಅನುಸೂಚಿಯ ಪ್ರಕಾರ ವಿದ್ಯುತ್ಛಕ್ತಿಯು ಸಮವರ್ತಿ ಪಟ್ಟಿಯಲ್ಲಿದ್ದು ರಾಜ್ಯಗಳ ಮೇಲೆ ಕೇಂದ್ರವು ಸವಾರಿ ಮಾಡುವಂತಿಲ್ಲ. ಈ ಕಾಯ್ದೆ ಜಾರಿಗೊಂಡರೆ ರೈತರು, ಬಡವರು, ಮಧ್ಯಮವರ್ಗದವರು, ಕುಶಲಕರ್ಮಿಗಳು, ನೇಕಾರರು, ಗುಡಿ ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳವರು ಸಂಪೂರ್ಣ ನಾಶವಾಗುತ್ತಾರೆ. ವಿದ್ಯುತ್‌ ಬೆಲೆಗಳನ್ನು ಕಾರ್ಪೊರೇಟ್‌ ಬಂಡವಾಳಿಗರು ನಿರ್ಧರಿಸುವುದರಿಂದ ಜನರು ಕುಡಿಯುವ ನೀರು, ಆಹಾರ ಪದಾರ್ಥಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತವೆ. ದೇಶದ ವಿದ್ಯುತ್‌ ವಲಯದಲ್ಲಿ 25 ಲಕ್ಷ ನೌಕರರು ಕೆಲಸ ಮಾಡುತ್ತಿದ್ದು ಇವರಲ್ಲಿ ಬಹುಪಾಲು ಜನ ಉದ್ಯೋಗ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಕಾಯ್ದೆ ಜಾರಿಗೊಳಿಸದಂತೆ ರಾಜ್ಯದ ಎಲ್ಲ ಸಂಸದರು ಪ್ರಧಾನಿ ನರೇಂದ್ರಮೋದಿ ಅವರ ಮೇಲೆ ಒತ್ತಡ ಹೇರಬೇಕಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.