![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 4, 2020, 4:47 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ತರುಣ್ ಸುಧೀರ್ ಹಾಗೂ ನಿರ್ಮಾಪಕ ಉಮಾಪತಿ ಸಿಂಧೂರ ಲಕ್ಷ್ಮಣ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸದ್ಯ ಗಾಂಧಿನಗರದಲ್ಲಿ ಜೋರಾಗಿ ಕೇಳಿಬರುತ್ತಿದೆ. ಸಿಂಧೂರ ಲಕ್ಷ್ಮಣ ಐತಿಹಾಸಿಕ ಚಿತ್ರವಾಗಿದ್ದು, ನಿರ್ಮಾಪಕರು ಈಗಾಗಲೇ ಚಿತ್ರದ ಟೈಟಲ್ ಕೂಡ ರಿಜಿಸ್ಟಾರ್ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೇನಾದರೂ ಈ ಚಿತ್ರ ಸೆಟ್ಟೇರಿದರೆ, ಸಿಂಧೂರ ಲಕ್ಷ್ಮಣ ಈ ಮೂವರ ಕಾಂಬಿನೇಶನ್ನ ಎರಡನೇ ಚಿತ್ರವಾಗಲಿದೆ.
ಇನ್ನು ತರುಣ್ ಅವರ ತಂದೆ ಖ್ಯಾತ ಖಳನಟ ಸುಧೀರ್ ಅವರು ವೀರ ಸಿಂಧೂರ ಲಕ್ಷ್ಮಣ ನಾಟಕದಲ್ಲಿ ಲಕ್ಷ್ಮಣನ ಪಾತ್ರವಹಿಸಿ ಖ್ಯಾತಿ ಗಳಿಸಿದ್ದರು. ಇದೇ ಕಥಾಹಂದರವನ್ನು ಇಟ್ಟುಕೊಂಡು ಚಿತ್ರ ಮಾಡುವ ಯೋಚನೆ ಚಿತ್ರತಂಡದ ಮುಂದಿದೆ ಎನ್ನಲಾಗುತ್ತಿದೆ. ಇದೊಂದು ಜನಪ್ರಿಯ ಬಂಡಾಯ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರನೊಬ್ಬ ಬ್ರಿಟಿಷರ ವಿರುದ್ಧದ ಹೋರಾಟ ನಡೆಸಿದ ಕಥೆಯಾಗಿದ್ದು, ಇಡೀ ಚಿತ್ರತಂಡ ಈ ಕಥೆಯ ಮೇಲೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದೆ.
ಈಗಾಗಲೇ ಈ ಕಥೆಯ ಹಕ್ಕುಗಳು ನಿರ್ಮಾಪಕ ಉಮಾಪತಿ ಅವರ ಬಳಿಯಿದ್ದು, ಅದನ್ನು ಚಿತ್ರ ಮಾಡಲು ತೆರೆಮರೆಯಲ್ಲಿ ಒಂದಷ್ಟು ತಯಾರಿ ಕೂಡ ಶುರುವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ, ಸಿಂಧೂರ ಲಕ್ಷ್ಮಣನ ಕಥೆಯನ್ನು ಸಿನಿಮಾ ಮಾಡಬೇಕು ನೀವು, ಆ ರೈಟ್ಸ್ ತೆಗೆದಿಟ್ಟುಕೊಳ್ಳಿ ಎಂದು ದರ್ಶನ್ ಅವರೇ ನನಗೆ ಹೇಳಿದ್ದರು. ನಾನು ಸಹ ಕಥೆ ಕೇಳಿ ಸಿಕ್ಕಾಪಟ್ಟೆ ಥ್ರಿಲ್ ಆಗಿದ್ದೇನೆ. ಮುಂದಿನ ದಿನಗಳಲ್ಲಿ ನಾನೇ ನಿರ್ಮಾಣ ಮಾಡುತ್ತೇನೆ. ಅಂತಹ ಒಬ್ಬ ವೀರನ ಕಥೆಯನ್ನು ನನ್ನ ಬ್ಯಾನರ್ನಲ್ಲಿ ನಿರ್ಮಾಣ ಮಾಡುವುದು ಹೆಮ್ಮೆಯ ವಿಚಾರ ಎನ್ನುತ್ತಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.