ನನ್ನ ವಿರುದ್ಧ BJP ಕಚೇರಿಯಿಂದಲೇ ಅಪಪ್ರಚಾರ: ರೇಣುಕಾಚಾರ್ಯ


Team Udayavani, Aug 29, 2023, 9:18 PM IST

renukacharya

ಹೊನ್ನಾಳಿ: ನಾನು ಬಿಜೆಪಿ ಬಿಡುತ್ತೇನೆ ಅಥವಾ ಕಾಂಗ್ರೆಸ್‌ ಸೇರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಆದರೆ ರಾಜ್ಯ ಬಿಜೆಪಿ ಕಚೇರಿಯಿಂದಲೇ “ಎಂಪಿಆರ್‌ ಬಿಜೆಪಿ ಬಿಡುತ್ತಾರೆ’ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸ್ವಪಕ್ಷದ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಮಾಜಿ ಸಚಿವನಾದ ನನ್ನ ಆದ್ಯ ಕರ್ತವ್ಯ. ಇದಕ್ಕಾಗಿ ನಾನು ಸಿಎಂ, ಡಿಸಿಎಂ, ಕಂದಾಯ ಹಾಗೂ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆಯೇ ಹೊರತು ಎಂದಿಗೂ ನಾನು ಕಾಂಗ್ರೆಸ್‌ ಸೇರುತ್ತೇನೆಂದು ಹೇಳಿಲ್ಲ, ಆದರೆ ದುರುದ್ದೇಶದಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಎಂದಿಗೂ ಕಾಂಗ್ರೆಸ್‌ ಸೇರುವುದಿಲ್ಲ ಎಂದರು.

ಚುನಾವಣೆ ನಡೆದ ನಂತರ ಕಾಂಗ್ರೆಸ್‌ ಅ ಧಿಕಾರಕ್ಕೆ ಬಂದು ನೂರು ದಿನಗಳಾದರೂ ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ, ರಾಜ್ಯಾಧ್ಯಕ್ಷರ ಅವ ಧಿ ಮುಗಿದು ಎರಡು ವರ್ಷಗಳಾದರೂ ಬದಲಾವಣೆ ಮಾಡಿಲ್ಲ, ಈ ಬಗ್ಗೆ ಕಾಂಗ್ರೆಸ್‌ ಅಥವಾ ವಿಪಕ್ಷದ ಕಾರ್ಯಕರ್ತರು ನಮ್ಮ ಕಾರ್ಯಕರ್ತರನ್ನು ಹಂಗಿಸುತ್ತಿದ್ದಾರೆ. ನಿಮ್ಮ ಯೋಗ್ಯತೆಗೆ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿಲ್ಲ ಎಂದಾಗ ನಮ್ಮ ಕಾರ್ಯಕರ್ತರಿಗೆ ಮುಜುಗರವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಬಿಎಸ್‌ವೈ ಕಡೆಗಣಿಸಿದ್ದಕ್ಕೆ ತಕ್ಕ ಶಾಸ್ತಿ: ಯಾರಧ್ದೋ ಮಾತನ್ನು ಕೇಳಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದ್ದರಿಂದ ನಮ್ಮ ಪಕ್ಷ ಸೋತು ಸುಣ್ಣವಾಯಿತು. ಬಿಎಸ್‌ವೈ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದ್ದಕ್ಕೆ ಬಿಜೆಪಿ ನೆಲ ಕಚ್ಚಿತು ಎಂದು ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಬಿಎಸ್‌ವೈ ಅವರಿಂದ ಮುಖ್ಯಮಂತ್ರಿ ಹುದ್ದೆಯನ್ನು ಬಲವಂತವಾಗಿ ಕಿತ್ತುಕೊಂಡು ಬಿಜೆಪಿ ಕೇಂದ್ರಿಯ ಸಂಸದಿಯ ಮಂಡಳಿ ಸದಸ್ಯರನ್ನಾಗಿ ಮಾಡಿದರು. ಹೀಗೆ ಮಾಡಿದರೆ ರಾಜ್ಯದ ಜನತೆಯನ್ನು ಸುಮ್ಮನಿರಿಸಬಹುದು ಎಂದು ಅವರಿಂದ ಸಿಎಂ ಹುದ್ದೆ ಕಿತ್ತುಕೊಂಡರು. ಆದರೆ ರಾಜ್ಯದ ಜನತೆ ಬಿಜೆಪಿಯನ್ನೇ ಮನೆಗೆ ಕಳುಹಿಸಿದರು. ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು. ಆಗ ಸಂಘಟನೆ ಬಲಗೊಂಡು ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅತ್ಯಧಿ ಕ ಸ್ಥಾನ ಗಳಿಸಲು ಸಹಾಯವಾಗುತ್ತದೆ ಎಂದರು.

ಮಂತ್ರಿ ಸ್ಥಾನಕ್ಕೆ ಕುತ್ತು ತಂದರು:
ಬಿಜೆಪಿ ಅಧಿಕಾರಾವಧಿಯಲ್ಲಿ ದಾವಣಗೆರೆ ಜಿಲ್ಲೆಯವರೇ ಮಂತ್ರಿಗಳಾಗಬೇಕು. ನಮ್ಮ ಐದು ಜನರಲ್ಲಿ ಯಾರನ್ನಾದರೂ ಮಂತ್ರಿ ಮಾಡಲಿ ಎಂದಾಗ ನನಗೆ ಮಂತ್ರಿ ಸ್ಥಾನ ಕೊಡಲು ಸಿದ್ಧತೆ ನಡೆದಿತ್ತು. ಆದರೆ ದಾವಣಗೆರೆ ಜಿಲ್ಲೆಯ ಮಹಾನುಭಾವರೊಬ್ಬರು ನನ್ನ ಹೆಸರನ್ನು ಡಿಲೀಟ್‌ ಮಾಡಿಸಿದರು. ನಾನು ಬಕೆಟ್‌ ರಾಜಕೀಯ ಮಾಡುವುದಿಲ್ಲ, ಆ ಸಂಸ್ಕೃತಿ ನನಗೆ ಗೊತ್ತಿಲ್ಲ. ಇದ್ದಿದ್ದನ್ನು ನೇರವಾಗಿ ಹೇಳುತ್ತೇನೆ. ಹಾಗಾಗಿ ನನಗೆ ಹಲವಾರು ಅವಕಾಶಗಳು ತಪ್ಪಿದವು. ಮಾಜಿ ಪ್ರಧಾನಿ ವಾಜಪೇಯಿ ಸೋಲಿಗೆ ನಾವೇ ಹೊಣೆ ಹೊರಬೇಕಾಗುತ್ತದೆ. ಏಕೆಂದರೆ ಅವರು ಮಾಡಿದ ಅಭಿವೃದ್ಧಿ ಬಗ್ಗೆ ನಮ್ಮ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರ ಸಾಧನೆಗಳ ಬಗ್ಗೆ ತಿಳಿಸಲಿಲ್ಲ. ಹೀಗಾಗಿ ಅಂದು ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ಹಿನ್ನಡೆ ಅನುಭವಿಸಬೇಕಾಯಿತು.

ನಮ್ಮ ಕ್ಷೇತ್ರದಲ್ಲಿ ಐದಾರು ಗ್ರಾಮ ಬಿಟ್ಟರೆ ಉಳಿದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಸಾಧನೆಯ ಕರಪತ್ರಗಳನ್ನು ವಿತರಿಸಿ ಕೇಂದ್ರದ ಸಾಧನೆಯನ್ನು ತಿಳಿಸಿದ್ದೇನೆ. ರಾಜ್ಯದಲ್ಲಿ ಇನ್ನೂ ಮನೆ ಮನೆ ಸಂಪರ್ಕ ಆಗಿಲ್ಲ, ನಮ್ಮ ಮುಖಂಡರು ಹಾಗೂ ಕಾರ್ಯಕರ್ತರು ಈಗಲಾದರೂ ಎಚ್ಚೆತ್ತುಕೊಂಡು ಮನೆ ಮನೆ ಸಂಪರ್ಕ ಮಾಡಿ ಕೇಂದ್ರದ ಸಾಧನೆಗಳ ಬಗ್ಗೆ ತಿಳಿಸಲಿ ಎಂದರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.