ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಚಿಕ್ಕಮಗಳೂರು ಬಳಿಕ ದ.ಕ. ಜಿಲ್ಲೆಯಲ್ಲಿ ಅನುಷ್ಠಾನ

Team Udayavani, May 6, 2024, 7:30 AM IST

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಬೆಳ್ತಂಗಡಿ: ಕಾಡಾನೆಗಳ ನಿರಂತರ ಹಾವಳಿಯಿಂದ ಅರಣ್ಯದಂಚಿನ ಕೃಷಿಕರು ಊರು ತೊರೆಯುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಸರಕಾರವು ಆನೆ ಕಂದಕ, ಖಾಸಗಿ ಸೋಲಾರ್‌ ಬೇಲಿಗೆ ಪ್ರೋತ್ಸಾಹ, ಕಾಂಕ್ರೀಟ್‌ ಬ್ಯಾರಿಕೇಡ್‌, ರೈಲ್ವೇ ಬ್ಯಾರಿಕೇಡ್‌ ಪ್ರಯೋಗ ನಡೆಸಿತ್ತು. ಆದರೂ ಆನೆಗಳು ಚಾಕಚಕ್ಯತೆಯಿಂದ ಅವನ್ನೆಲ್ಲ ದಾಟಿ ಕೃಷಿಯನ್ನು ಧ್ವಂಸಗೊಳಿಸುತ್ತಿವೆ. ಇದನ್ನು ಹೇಗಾದರು ತಡೆಗಟ್ಟಬೇಕೆಂಬ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ಜೋತಾಡುವ ಸೌರ ಬೇಲಿಯ ಅನುಷ್ಠಾನಕ್ಕೆ ಮುಂದಾಗಿದೆ.

ದ.ಕ. ಜಿಲ್ಲೆಯ ಚಾರ್ಮಾಡಿ, ಶಿಶಿಲ, ಶಿಬಾಜೆ, ಶಿರಾಡಿ ಹಾಗೂ ಕೊಡಗು, ಚಿಕ್ಕಮಗಳೂರು, ಸಕಲೇಶಪುರ ಗಡಿಭಾಗದಲ್ಲಿ ಕಾಡಾನೆ ಉಪಟಳ ಮಿತಿ ಮೀರಿದೆ. ಕೃಷಿಯ ಜತೆಗೆ ಅನೇಕ ಜೀವಹಾನಿಯೂ ಸಂಭವಿಸಿದೆ. ಇದನ್ನು ತಡೆಯಲು ಅರಣ್ಯ ಇಲಾಖೆಯು ಜೋತಾಡುವ ಸೌರಬೇಲಿ (Solar Powered Double line Hanging Fence) ಯನ್ನು ಈಗಾಗಲೇ ಚಿಕ್ಕಮಗಳೂರಿನ ಮೂಡಿಗೆರೆ ಹಾಗೂ ಶಿರಾಡಿ ಘಾಟಿ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ್ದು, ಪರಿಣಾಮಕಾರಿ ಎನಿಸಿರುವುದರಿಂದ ದ.ಕ. ಜಿಲ್ಲೆಯಲ್ಲಿ ಪ್ರಯೋಗವಾಗಿ ಬೆಳ್ತಂಗಡಿ ಹಾಗೂ ಸುಬ್ರಹ್ಮಣ್ಯದಲ್ಲಿ ಅನುಷ್ಠಾನ ಗೊಳಿಸಿದೆ.

ಏನಿದು ಜೋತಾಡುವ ಬೇಲಿ: ಈ ಹಿಂದೆ ನೆಲದಿಂದ ಸುಮಾರು 6ರಿಂದ 8 ಅಡಿಗಳಷ್ಟು ಎತ್ತರಕ್ಕೆ ಕಂಬಗಳಿಗೆ ಸೋಲಾರ್‌ ಬೇಲಿ ಅಳವಡಿಸುವ ಕ್ರಮವಿತ್ತು. ಹ್ಯಾಂಗಿಂಗ್‌ ಸೋಲಾರ್‌ ಬೇಲಿಯು ಸುಮಾರು 14 ಅಡಿ ಎತ್ತರವಿದೆ. ಒಂದು ಕಂಬದಿಂದ ಒನ್ನೊಂದು ಕಂಬಕ್ಕೆ 80 ಅಡಿ ದೂರ. ಕಂಬದ ಮೇಲ್ಭಾಗದಿಂದ ವಿದ್ಯುತ್‌ ತಂತಿಯಂತೆ ಎರಡೂ ಬದಿ ತಂತಿ ಹಾದು ಹೋಗುತ್ತದೆ. ಆ ತಂತಿಗೆ ಎರಡು ಬದಿಯಲ್ಲಿ ನೆಲದವರೆಗೆ ತಂತಿಯನ್ನು ಇಳಿಯಬಿಟ್ಟು ಸುಮಾರು 9 ವೋಲ್ಟ್ನಷ್ಟು ಸೌರವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತದೆ.

ತಂತಿ ಅಳವಡಿಕೆಗೆ ಕಂಬವನ್ನು ಕಾಂಕ್ರೀಟ್‌ ಅಡಿಪಾಯದಿಂದ ನಿರ್ಮಿಸುವುದರಿಂದ ಬಲಿಷ್ಠ ಹಾಗೂ ಸುದೀರ್ಘ‌ ಬಾಳಿಕೆ ಬರುತ್ತದೆ. ಸೋಲಾರ್‌ ಪವರ್‌ ಜನರೇಟರನ್ನು ಪ್ರತ್ಯೇಕವಾಗಿ ಅಳವಡಿಸಲಾಗುತ್ತದೆ. ತಂತಿಯ ಸ್ಪರ್ಶವಾದಾಗ ಲಘು ವಿದ್ಯುತ್‌ ಆಘಾತವಾಗುವುದರಿಂದ ಆನೆಗಳು ಮತ್ತೂಮ್ಮೆ ಆ ದಾರಿಯಲ್ಲಿ ಬರಲು ಹಿಂಜರಿಯುತ್ತವೆ. ಈ ವಿದ್ಯುತ್‌ನಿಂದ ಆನೆಗಳ ಜೀವಕ್ಕೆ ಅಪಾಯವಿಲ್ಲ. ಅವುಗಳ ಚಲನವಲನ ದಾಖಲಿಸಲು ಸಿಸಿ ಕೆಮರಾವನ್ನೂ ಅಳವಡಿಸಲಾಗಿದೆ. ಆನೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂದೇಶವೂ ರವಾನೆಯಾಗುತ್ತದೆ.

ಬೆಳ್ತಂಗಡಿ, ಸುಬ್ರಹ್ಮಣ್ಯದಲ್ಲಿ ಅಳವಡಿಕೆ
ಸುಬ್ರಹ್ಮಣ್ಯ ಸಮೀಪ ಸುಮಾರು 1 ಕಿ.ಮೀ. ದೂರಕ್ಕೆ ಯೋಜನೆ ಅಳವಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಯಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆ ದಾಳಿ ನಡೆಸಿ 2,000ಕ್ಕೂ ಅಧಿಕ ಗಿಡಗಳನ್ನು ಧ್ವಂಸಗೊಳಿತ್ತು. ಇದರಿಂದ ಮುಂಡಾಜೆ ಹಾಗೂ ಕಡಿರುದ್ಯಾವರ ಗ್ರಾಮಕ್ಕೆ ವ್ಯಾಪಿಸುವ ಅರಣ್ಯದಲ್ಲಿ ಫರ್ಲಾನಿವರೆಗೆ 2.5 ಕಿ.ಮೀ. ದೂರದಲ್ಲಿ 12 ಲಕ್ಷ ರೂ. ಅನುದಾನದಲ್ಲಿ ಜೋತಾಡುವ ಸೌರ ಬೇಲಿ ಅಳವಡಿಸಲಾಗಿದೆ. ಈ ವ್ಯವಸ್ಥೆಯನ್ನು ವಿಸ್ತರಿಸಿದರೆ ಇನ್ನಷ್ಟು ಕೃಷಿಕರಿಗೆ ಪ್ರಯೋಜನವಾಗಲಿದೆ.

2023-24ರಲ್ಲಿ ಆನೆ ಕಂದಕ
ಬೆಳ್ತಂಗಡಿ-4.500 ಕಿ.ಮೀ., ಕಡಬ-3 ಕಿ.ಮೀ., ಸುಳ್ಯ 2 ಕಿ.ಮೀ. ಸೇರಿ 34 ಲಕ್ಷ ರೂ. ಆನೆ ಕಂದಕಕ್ಕೆ ವಿನಿಯೋಗಿಸಿದರೆ, ಇರುವ ಕಂದಕದ ವಿಸ್ತರಣೆಗಾಗಿ 72.150 ಲಕ್ಷ ರೂ.ಗಳನ್ನು ಅರಣ್ಯ ಇಲಾಖೆ ವಿನಿಯೋಗಿಸಿದೆ.

ಕಾಡಾನೆ ದಾಳಿ ತಡೆಗೆ ಅರಣ್ಯ ಇಲಾಖೆ ಈ ಬಾರಿ ವಿಶೇಷ ಪ್ರಯೋಗ ನಡೆಸಿದೆ. ಬೆಳ್ತಂಗಡಿ ಹಾಗೂ ಸುಬ್ರಹ್ಮಣ್ಯದಲ್ಲಿ ಹ್ಯಾಂಗಿಂಗ್‌ ಸೋಲಾರ್‌ ಬೇಲಿ ಅಳವಡಿಸಿದ್ದೇವೆ. ಯಶಸ್ಸು ಕಂಡಿದ್ದರಿಂದ ಕಡಬ, ಸುಳ್ಯದಲ್ಲಿ ಹೆಚ್ಚುವರಿ ಬೇಡಿಕೆಯಿದೆ. ಮುಂದಿನ ವರ್ಷ ಹೆಚ್ಚಿನ ಅವಕಾಶ ಕೋರಿ ಅನುಷ್ಠಾನ ಮಾಡಲಾಗುವುದು.
– ಅಂಥೋನಿ ಎಸ್‌. ಮರಿಯಪ್ಪ,
ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಂಗಳೂರು

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.