ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಚಿಕ್ಕಮಗಳೂರು ಬಳಿಕ ದ.ಕ. ಜಿಲ್ಲೆಯಲ್ಲಿ ಅನುಷ್ಠಾನ

Team Udayavani, May 6, 2024, 7:30 AM IST

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಬೆಳ್ತಂಗಡಿ: ಕಾಡಾನೆಗಳ ನಿರಂತರ ಹಾವಳಿಯಿಂದ ಅರಣ್ಯದಂಚಿನ ಕೃಷಿಕರು ಊರು ತೊರೆಯುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಸರಕಾರವು ಆನೆ ಕಂದಕ, ಖಾಸಗಿ ಸೋಲಾರ್‌ ಬೇಲಿಗೆ ಪ್ರೋತ್ಸಾಹ, ಕಾಂಕ್ರೀಟ್‌ ಬ್ಯಾರಿಕೇಡ್‌, ರೈಲ್ವೇ ಬ್ಯಾರಿಕೇಡ್‌ ಪ್ರಯೋಗ ನಡೆಸಿತ್ತು. ಆದರೂ ಆನೆಗಳು ಚಾಕಚಕ್ಯತೆಯಿಂದ ಅವನ್ನೆಲ್ಲ ದಾಟಿ ಕೃಷಿಯನ್ನು ಧ್ವಂಸಗೊಳಿಸುತ್ತಿವೆ. ಇದನ್ನು ಹೇಗಾದರು ತಡೆಗಟ್ಟಬೇಕೆಂಬ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ಜೋತಾಡುವ ಸೌರ ಬೇಲಿಯ ಅನುಷ್ಠಾನಕ್ಕೆ ಮುಂದಾಗಿದೆ.

ದ.ಕ. ಜಿಲ್ಲೆಯ ಚಾರ್ಮಾಡಿ, ಶಿಶಿಲ, ಶಿಬಾಜೆ, ಶಿರಾಡಿ ಹಾಗೂ ಕೊಡಗು, ಚಿಕ್ಕಮಗಳೂರು, ಸಕಲೇಶಪುರ ಗಡಿಭಾಗದಲ್ಲಿ ಕಾಡಾನೆ ಉಪಟಳ ಮಿತಿ ಮೀರಿದೆ. ಕೃಷಿಯ ಜತೆಗೆ ಅನೇಕ ಜೀವಹಾನಿಯೂ ಸಂಭವಿಸಿದೆ. ಇದನ್ನು ತಡೆಯಲು ಅರಣ್ಯ ಇಲಾಖೆಯು ಜೋತಾಡುವ ಸೌರಬೇಲಿ (Solar Powered Double line Hanging Fence) ಯನ್ನು ಈಗಾಗಲೇ ಚಿಕ್ಕಮಗಳೂರಿನ ಮೂಡಿಗೆರೆ ಹಾಗೂ ಶಿರಾಡಿ ಘಾಟಿ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ್ದು, ಪರಿಣಾಮಕಾರಿ ಎನಿಸಿರುವುದರಿಂದ ದ.ಕ. ಜಿಲ್ಲೆಯಲ್ಲಿ ಪ್ರಯೋಗವಾಗಿ ಬೆಳ್ತಂಗಡಿ ಹಾಗೂ ಸುಬ್ರಹ್ಮಣ್ಯದಲ್ಲಿ ಅನುಷ್ಠಾನ ಗೊಳಿಸಿದೆ.

ಏನಿದು ಜೋತಾಡುವ ಬೇಲಿ: ಈ ಹಿಂದೆ ನೆಲದಿಂದ ಸುಮಾರು 6ರಿಂದ 8 ಅಡಿಗಳಷ್ಟು ಎತ್ತರಕ್ಕೆ ಕಂಬಗಳಿಗೆ ಸೋಲಾರ್‌ ಬೇಲಿ ಅಳವಡಿಸುವ ಕ್ರಮವಿತ್ತು. ಹ್ಯಾಂಗಿಂಗ್‌ ಸೋಲಾರ್‌ ಬೇಲಿಯು ಸುಮಾರು 14 ಅಡಿ ಎತ್ತರವಿದೆ. ಒಂದು ಕಂಬದಿಂದ ಒನ್ನೊಂದು ಕಂಬಕ್ಕೆ 80 ಅಡಿ ದೂರ. ಕಂಬದ ಮೇಲ್ಭಾಗದಿಂದ ವಿದ್ಯುತ್‌ ತಂತಿಯಂತೆ ಎರಡೂ ಬದಿ ತಂತಿ ಹಾದು ಹೋಗುತ್ತದೆ. ಆ ತಂತಿಗೆ ಎರಡು ಬದಿಯಲ್ಲಿ ನೆಲದವರೆಗೆ ತಂತಿಯನ್ನು ಇಳಿಯಬಿಟ್ಟು ಸುಮಾರು 9 ವೋಲ್ಟ್ನಷ್ಟು ಸೌರವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತದೆ.

ತಂತಿ ಅಳವಡಿಕೆಗೆ ಕಂಬವನ್ನು ಕಾಂಕ್ರೀಟ್‌ ಅಡಿಪಾಯದಿಂದ ನಿರ್ಮಿಸುವುದರಿಂದ ಬಲಿಷ್ಠ ಹಾಗೂ ಸುದೀರ್ಘ‌ ಬಾಳಿಕೆ ಬರುತ್ತದೆ. ಸೋಲಾರ್‌ ಪವರ್‌ ಜನರೇಟರನ್ನು ಪ್ರತ್ಯೇಕವಾಗಿ ಅಳವಡಿಸಲಾಗುತ್ತದೆ. ತಂತಿಯ ಸ್ಪರ್ಶವಾದಾಗ ಲಘು ವಿದ್ಯುತ್‌ ಆಘಾತವಾಗುವುದರಿಂದ ಆನೆಗಳು ಮತ್ತೂಮ್ಮೆ ಆ ದಾರಿಯಲ್ಲಿ ಬರಲು ಹಿಂಜರಿಯುತ್ತವೆ. ಈ ವಿದ್ಯುತ್‌ನಿಂದ ಆನೆಗಳ ಜೀವಕ್ಕೆ ಅಪಾಯವಿಲ್ಲ. ಅವುಗಳ ಚಲನವಲನ ದಾಖಲಿಸಲು ಸಿಸಿ ಕೆಮರಾವನ್ನೂ ಅಳವಡಿಸಲಾಗಿದೆ. ಆನೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂದೇಶವೂ ರವಾನೆಯಾಗುತ್ತದೆ.

ಬೆಳ್ತಂಗಡಿ, ಸುಬ್ರಹ್ಮಣ್ಯದಲ್ಲಿ ಅಳವಡಿಕೆ
ಸುಬ್ರಹ್ಮಣ್ಯ ಸಮೀಪ ಸುಮಾರು 1 ಕಿ.ಮೀ. ದೂರಕ್ಕೆ ಯೋಜನೆ ಅಳವಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಯಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆ ದಾಳಿ ನಡೆಸಿ 2,000ಕ್ಕೂ ಅಧಿಕ ಗಿಡಗಳನ್ನು ಧ್ವಂಸಗೊಳಿತ್ತು. ಇದರಿಂದ ಮುಂಡಾಜೆ ಹಾಗೂ ಕಡಿರುದ್ಯಾವರ ಗ್ರಾಮಕ್ಕೆ ವ್ಯಾಪಿಸುವ ಅರಣ್ಯದಲ್ಲಿ ಫರ್ಲಾನಿವರೆಗೆ 2.5 ಕಿ.ಮೀ. ದೂರದಲ್ಲಿ 12 ಲಕ್ಷ ರೂ. ಅನುದಾನದಲ್ಲಿ ಜೋತಾಡುವ ಸೌರ ಬೇಲಿ ಅಳವಡಿಸಲಾಗಿದೆ. ಈ ವ್ಯವಸ್ಥೆಯನ್ನು ವಿಸ್ತರಿಸಿದರೆ ಇನ್ನಷ್ಟು ಕೃಷಿಕರಿಗೆ ಪ್ರಯೋಜನವಾಗಲಿದೆ.

2023-24ರಲ್ಲಿ ಆನೆ ಕಂದಕ
ಬೆಳ್ತಂಗಡಿ-4.500 ಕಿ.ಮೀ., ಕಡಬ-3 ಕಿ.ಮೀ., ಸುಳ್ಯ 2 ಕಿ.ಮೀ. ಸೇರಿ 34 ಲಕ್ಷ ರೂ. ಆನೆ ಕಂದಕಕ್ಕೆ ವಿನಿಯೋಗಿಸಿದರೆ, ಇರುವ ಕಂದಕದ ವಿಸ್ತರಣೆಗಾಗಿ 72.150 ಲಕ್ಷ ರೂ.ಗಳನ್ನು ಅರಣ್ಯ ಇಲಾಖೆ ವಿನಿಯೋಗಿಸಿದೆ.

ಕಾಡಾನೆ ದಾಳಿ ತಡೆಗೆ ಅರಣ್ಯ ಇಲಾಖೆ ಈ ಬಾರಿ ವಿಶೇಷ ಪ್ರಯೋಗ ನಡೆಸಿದೆ. ಬೆಳ್ತಂಗಡಿ ಹಾಗೂ ಸುಬ್ರಹ್ಮಣ್ಯದಲ್ಲಿ ಹ್ಯಾಂಗಿಂಗ್‌ ಸೋಲಾರ್‌ ಬೇಲಿ ಅಳವಡಿಸಿದ್ದೇವೆ. ಯಶಸ್ಸು ಕಂಡಿದ್ದರಿಂದ ಕಡಬ, ಸುಳ್ಯದಲ್ಲಿ ಹೆಚ್ಚುವರಿ ಬೇಡಿಕೆಯಿದೆ. ಮುಂದಿನ ವರ್ಷ ಹೆಚ್ಚಿನ ಅವಕಾಶ ಕೋರಿ ಅನುಷ್ಠಾನ ಮಾಡಲಾಗುವುದು.
– ಅಂಥೋನಿ ಎಸ್‌. ಮರಿಯಪ್ಪ,
ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಂಗಳೂರು

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.