ಬಿಸಿಲು ನಾಡಲ್ಲಿ ಹೆಚ್ಚಾದ ಸೋಲಾರ್‌ ಕೃಷಿ!

ರಾಯಚೂರಲ್ಲೇ 300 ಮೆಗಾವ್ಯಾಟ್‌ ಸಾಮರ್ಥ್ಯದ ಸೋಲಾರ್‌ ಘಟಕಗಳು

Team Udayavani, Apr 28, 2022, 10:49 AM IST

6

ರಾಯಚೂರು: ಬಿರು ಬಿಸಿಲಿಗೆ ಹೆಸರಾದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭಕ್ಕೆ ಮಾಡಬಹುದಾದ ಕೃಷಿ ಎಂದರೆ ಅದು ಸೋಲಾರ್‌ ವಿದ್ಯುತ್‌ ಉತ್ಪಾದನೆ ಎನ್ನುವ ಮಾತು ಈಗ ನಿಜವಾಗುತ್ತಿದೆ. ಹಸಿರು ಇಂಧನ ಬಳಕೆಯಲ್ಲಿ ಜಿಲ್ಲೆ ಸದ್ದಿಲ್ಲದೇ ಸಣ್ಣ ಸಣ್ಣ ಹೆಜ್ಜೆಗಳನ್ನಿಡುತ್ತಿದ್ದು, ಮುಂಬರುವ ದಿನಗಳಲ್ಲಿ ಬೃಹತ್‌ ಶಾಖೋತ್ಪನ್ನ ಕೇಂದ್ರಗಳ ಅಸ್ತಿತ್ವ ಕಳೆಯುವ ಲಕ್ಷಣಗಳು ಗೋಚರಿಸುತ್ತಿವೆ.

ಜಿಲ್ಲೆಯಲ್ಲಿ ಕಲ್ಲಿದ್ದಲು ಬಳಸಿ ವಿದ್ಯುತ್‌ ಉತ್ಪಾದಿಸುವ ಆರ್‌ಟಿಪಿಎಸ್‌, ವೈಟಿಪಿಎಸ್‌ ಎನ್ನುವ ಬೃಹತ್‌ ಶಾಖೋತ್ಪನ್ನ ಕೇಂದ್ರಗಳಿದ್ದರೆ, ಪಕ್ಕದ ಬಳ್ಳಾರಿಯಲ್ಲಿ ಬಿಟಿಪಿಎಸ್‌ ಇದೆ. ಇಲ್ಲಿ ಉರಿಯುವ ಕಲ್ಲಿದ್ದಲು ವಾತಾನುಕೂಲಕ್ಕೆ ವಿರುದ್ಧವಾಗಿದ್ದರೂ ಅನಿವಾರ್ಯ ಕಾರಣಗಳಿಗೆ ಜನರೂ ಒಗ್ಗಿಕೊಂಡಿದ್ದರು. ಆದರೆ, ಇದಕ್ಕೆ ಪರ್ಯಾಯ ಎನ್ನುವ ಹಸಿರು ಇಂಧನ ಮೂಲವಾದ ಸೋಲಾರ್‌ಗೆ ಈಗ ಮನ್ನಣೆ ಸಿಗುತ್ತಿರುವುದು ವಿಶೇಷ.

ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸುಮಾರು 300 ಮೆಗಾವ್ಯಾಟ್‌ಗೂ ಅಧಿಕ ಸಾಮರ್ಥ್ಯದ ಸೋಲಾರ್‌ ವಿದ್ಯುತ್‌ ಉತ್ಪಾದನಾ ಘಟಕಗಳ ಸ್ಥಾಪಿಸಿದ್ದು, ಬೇಸಿಗೆಯಲ್ಲಿ ಇವುಗಳಿಂದ ಹೆಚ್ಚು ವಿದ್ಯುತ್‌ ಪಡೆಯಲಾಗುತ್ತಿದೆ. ಇವು ಖಾಸಗಿಯವರ ಒಡಂಬಡಿಕೆಯಡಿ ಅನುಷ್ಠಾನಗೊಂಡಿದ್ದರೂ ಪರೋಕ್ಷವಾಗಿ ಸರ್ಕಾರಕ್ಕೆ ವಿದ್ಯುತ್‌ ಉತ್ಪಾದನೆ ಹೊರೆ ತಗ್ಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ರಾಯಚೂರು ಜೆಸ್ಕಾಂ ವಿಭಾಗದ ಜಿಲ್ಲೆಯ ಬ್ಯಾಗವಾಟ್‌ ಹತ್ತಿರ 40 ಮೆಗಾವ್ಯಾಟ್‌, ನೀರಮಾನ್ವಿ ಬಳಿ 50 ಮೆಗಾವ್ಯಾಟ್‌, ಮಲ್ಲಟದ ಹತ್ತಿರ 26 ಮೆಗಾವ್ಯಾಟ್‌, ಗಬ್ಬೂರು ಬಳಿ 20 ಮೆಗಾವ್ಯಾಟ್‌, ಶಕ್ತಿನಗರ ಹತ್ತಿರ 12 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದೆ. ಸಿಂಧನೂರು ಕೆಪಿಟಿಸಿಎಲ್‌ ವಿಭಾಗದ ಮಸ್ಕಿ, ತುರ್ವಿಹಾಳ, ಲಿಂಗಸೂಗುರು ಭಾಗದಲ್ಲಿ ಸುಮಾರು 90 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ ಸೋಲಾರ್‌ ಘಟಕಗಳನ್ನು ಅಳವಡಿಸಲಾಗಿದೆ. ಇದು ಕೇವಲ ರಾಯಚೂರಿನ ವಿಚಾರವಾದರೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿಯೂ ಹೆಚ್ಚು ಸೋಲಾರ್‌ ಕೃಷಿ ನಡೆಯುತ್ತಿದೆ. ಕಲಬುರಗಿ, ಯಾದಗಿರಿ, ಬಳ್ಳಾರಿ ಜಿಲ್ಲೆಗಳೂ ಇದಕ್ಕೆ ಹೊರತಾಗಿಲ್ಲ.

ಸರ್ಕಾರದ ಜತೆ ಒಡಂಬಡಿಕೆ: ಖಾಸಗಿ ಸಂಸ್ಥೆಗಳು ಸೋಲಾರ್‌ ಕೃಷಿಗೆ ಹೆಚ್ಚು ಒಲವು ತೋರುತ್ತಿದ್ದು, ಜಿಲ್ಲೆಯಲ್ಲಿ ಕೃಷಿ ಯೋಗ್ಯವಲ್ಲದ ಭೂಮಿಯನ್ನು ಆಯ್ಕೆ ಮಾಡಿಕೊಂಡು ಘಟಕ ಅಳವಡಿಸುತ್ತಿವೆ. ದೊಡ್ಡ ಕೈಗಾರಿಕೆಗಳು, ಸಂಸ್ಥೆಗಳು ಸರ್ಕಾರದ ಜತೆ ಒಡಂಬಡಿಕೆ ಮಾಡಿಕೊಂಡು ತಮಗೆ ಬೇಕಾದ ವಿದ್ಯುತ್‌ ಉತ್ಪಾದನೆಗೆ ಒತ್ತು ನೀಡುತ್ತಿವೆ. ಕೆಪಿಟಿಸಿಎಲ್‌ಗೆ ತಮ್ಮ ವಿದ್ಯುತ್‌ ಪ್ರಸರಣಕ್ಕೆ ತಿಂಗಳಿಗೆ ಇಂತಿಷ್ಟು ಬಾಡಿಗೆ ಪಾವತಿಸುವ ಮೂಲಕ ತಮ್ಮ ವಿದ್ಯುತ್‌ ಪಡೆಯುತ್ತಿವೆ. ಅಲ್ಲದೇ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಹಸಿರು ವಿದ್ಯುತ್‌ ಉತ್ಪಾದನೆ ಕಡ್ಡಾಯಗೊಳಿಸಿರುವ ಕಾರಣ ಈ ಒಡಂಬಡಿಕೆಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

ಹಗಲಲ್ಲೇ ತ್ರಿಪೇಸ್‌ ವಿದ್ಯುತ್‌: ಕೃಷಿಗೆ ಬೇಕಾದ ತ್ರಿಪೇಸ್‌ ವಿದ್ಯುತ್‌ ಸರಬರಾಜು ಮಾಡಬೇಕಾದ ಸರ್ಕಾರಕ್ಕೆ ಈ ಹಿಂದೆ ಭಾರೀ ಹೊರೆಯಾಗುತ್ತಿತ್ತು. ಆದರೆ, ಈಗ ಸೋಲಾರ್‌ ಬಳಕೆ ಹೆಚ್ಚುತ್ತಿರುವ ಕಾರಣ ಹಗಲು ಬಿಸಿಲಿನ ಪ್ರಖರತೆ ಹೆಚ್ಚಾದಾಗ ಹೆಚ್ಚು ಸಾಮರ್ಥ್ಯದ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಹೀಗಾಗಿ ಸರ್ಕಾರ ರೈತರಿಗೆ ಹಗಲಲ್ಲೇ 7 ಗಂಟೆ ನಿರಂತರ ತ್ರಿಪೇಸ್‌ ವಿದ್ಯುತ್‌ ನೀಡುತ್ತಿದೆ. ಮರುಬಳಕೆಯ ಇಂಧನ ಮೂಲವಾದ್ದರಿಂದ ಸರ್ಕಾರಕ್ಕೆ ವಿದ್ಯುತ್‌ ಉತ್ಪಾದಿಸುವ ಖರ್ಚು ಕೂಡ ಕಡಿಮೆಯಾಗುತ್ತಿದೆ ಎನ್ನುತ್ತವೆ ಮೂಲಗಳು.

ಸೋಲಾರ್‌ ವಿದ್ಯುತ್‌ ಉತ್ಪಾದನೆ ಘಟಕಗಳ ಸ್ಥಾಪನೆ ಇತ್ತೀಚೆಗೆ ಹೆಚ್ಚಾಗಿದೆ. ಸಿಂಧನೂರು ವಿಭಾಗದ ಲಿಂಗಸೂಗೂರು, ಮಸ್ಕಿ ಭಾಗದಲ್ಲೇ 90 ಮೆಗಾವ್ಯಾಟ್‌ ಸಾಮರ್ಥ್ಯದ ಘಟಕಗಳಿದ್ದರೆ, ಇಡೀ ಜಿಲ್ಲಾದ್ಯಂತ ಸುಮಾರು 300 ಮೆ.ವ್ಯಾಟ್‌ಗೂ ಅಧಿಕ ಸಾಮರ್ಥ್ಯದ ಘಟಕಗಳನ್ನು ಅವಳಡಿಸಲಾಗಿದೆ. ಇನ್ನೂ ರೈಸ್‌ಮಿಲ್‌ ಗಳು, ಸಣ್ಣ ಕೈಗಾರಿಕೆಗಳು ಸೇರಿದಂತೆ ಸ್ವಂತ ಬಳಕೆಗೆ ಸಾಕಷ್ಟು ಜನ ಸೋಲಾರ್‌ ಬಳಕೆ ಆರಂಭಿಸಿದ್ದಾರೆ. –ರಾಜೇಶ್‌, ಇಇ, ಕೆಪಿಟಿಸಿಎಲ್‌, ಸಿಂಧನೂರು ವಿಭಾಗ  

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

3-raichur

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.