ಚಿಮಿಣಿ ದೀಪದ ಬದಲಿಗೆ ಸೋಲಾರ್‌ ವ್ಯವಸ್ಥೆ

ಎರಡು ಕುಟುಂಬಗಳಿಗೆ ಬೆಳಕು ನೀಡಿದ ತಹಶೀಲ್ದಾರ್‌

Team Udayavani, Jun 30, 2020, 5:46 AM IST

ಚಿಮಿಣಿ ದೀಪದ ಬದಲಿಗೆ ಸೋಲಾರ್‌ ವ್ಯವಸ್ಥೆ

ಪುತ್ತೂರು: ಚಿಕ್ಕಮುಟ್ನೂರು ಗ್ರಾಮದ ಬನ್ನೂರು ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಬೀರಿಗ ಮತ್ತು ಕುಂಬ್ರೊಗದಲ್ಲಿ ಚಿಮಿಣಿ ಬೆಳಕಲ್ಲಿ ಕತ್ತಲು ಕಳೆಯುತ್ತಿದ್ದ ಎರಡು ಬಡ ಕುಟುಂಬಗಳಿಗೆ ಪುತ್ತೂರು ತಹಶೀಲ್ದಾರ್‌ ರಮೇಶ್‌ ಬಾಬು ಅವರು ತನ್ನ ವೇತನದ ಒಂದಂಶವನ್ನು ಬಳಸಿ ಸೌರ ಶಕ್ತಿಯ ಮೂಲಕ ಬೆಳಕು ಹರಿಸಿದ್ದು, ಜೂ. 29ರಂದು ಅದನ್ನು ಹಸ್ತಾಂತರಿಸಿದರು.

ಜನಶಿಕ್ಷಣ ಟ್ರಸ್ಟ್‌, ತಾ| ಪತ್ರಕರ್ತರ ಸಂಘ, ಸೆಲ್ಕೊ ಸೋಲಾರ್‌ ಸಹಯೋಗದ ಯೋಜನೆಯಲ್ಲಿ ತಹಶೀ ಲ್ದಾರ್‌ ಅವರು ವಿಶೇಷ ಆಸಕ್ತಿ ವಹಿಸಿ ಸೋಲಾರ್‌ ದೀಪ ಅಳವಡಿಸಲು ಆರ್ಥಿಕ ನೆರವು ನೀಡಿದರು. ಮೂರು ತಿಂಗಳ ಹಿಂದೆ ಪುತ್ತೂರಿಗೆ ಬಂದ ಅಧಿಕಾರಿಯ ಮಾನವೀಯ ನಡೆಗೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ.

ಚಿಮಿಣಿ ದೀಪವೇ ಬೆಳಕಾಗಿತ್ತು
ಬೀರಿಗದ ಕಲ್ಯಾಣಿ ಅವರು ಪುತ್ರ, ಸೊಸೆ, ಇಬ್ಬರು ಪುಟ್ಟ ಮೊಮ್ಮಕ್ಕಳೊಂದಿಗೆ ಗುಡಿಸಲಿನಂಥ ಮನೆಯಲ್ಲಿ ವಾಸವಾಗಿದ್ದರು. ಇದೇ ಪರಿಸರದ ಇನ್ನೊಂದು ದಿಕ್ಕಿನ ಕುಂಬ್ರೊಗದಲ್ಲಿ ಕಮಲಾಕ್ಷಿ, ನಾರಾಯಣ ದಂಪತಿ, ಇಬ್ಬರು ಮಕ್ಕಳು ಸಿಮೆಂಟ್‌ ಶೀಟ್‌ ಹಾಸಿದ ಮನೆಯಲ್ಲಿ ದ್ದರು. ಎರಡೂ ಕುಟುಂಬಗಳು ಚಿಮಿಣಿ ದೀಪವನ್ನೇ ಬಳಸುತ್ತಿದ್ದವು. ಈಗ ಸೌರ ವ್ಯವಸ್ಥೆ ಮಾಡಲಾಗಿದ್ದು, ಎರಡು ಬಲ್ಬ್ ಮತ್ತು ಒಂದು ಫ್ಯಾನ್‌ ಬಳಸಬಹುದಾಗಿದೆ. ಇದೇ ಸಂದರ್ಭ ತಾ.ಪಂ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ ಒಂದು ಮನೆಗೆ ಆರ್ಥಿಕ ನೆರವು ನೀಡಿದರು.

ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ ಅವರು, ಪ್ರತಿ ಮನೆಯಲ್ಲೂ ಬೆಳಕು ಕಾಣಬೇಕು ಎಂಬುದು ನಮ್ಮ ಉದ್ದೇಶ. ಇಂತಹ ಕಟ್ಟಕಡೆಯ ಕುಟುಂಬದಿಂದಲೇ ಸೌರಶಕ್ತಿ ಬೆಳಕು ಕಾಣಲು ಸಾಧ್ಯ. ಒಬ್ಬ ಅಧಿಕಾರಿ ಸಹಕಾರ ನೀಡಿ ಗುಡಿಸಲ ಮುಂದೆ ಬಂದು ನಿಂತಿರುವುದೇ ವಿಶೇಷ ಎಂದು ಹೇಳಿದ್ದಾರೆ.

ಅಧಿಕಾರಿ ಯಾವ ರೀತಿ ಕಾರ್ಯ ನಿರ್ವಹಿಸಬಹುದು ಎನ್ನುವುದನ್ನು ಇಂತಹ ಸಾಮಾಜಿಕ ಚಟುವಟಿಕೆಯಿಂದ ಅರಿಯಲು ಸಾಧ್ಯ ಎಂದು ತಾ.ಪಂ. ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ ಹೇಳಿದರು.

ಪುತ್ತೂರಿನಲ್ಲಿ ಈ ಹಿಂದೆ ತಹಶೀಲ್ದಾರ್‌ ಆಗಿದ್ದ ಕೋಚಣ್ಣ ರೈ ಇದೇ ರೀತಿ ಬಡವರಿಗೆ ನೆರವಾಗುತ್ತಿದ್ದರು. ಈಗ ಅಂಥದ್ದೇ ಕೆಲಸವನ್ನು ರಮೇಶ್‌ ಬಾಬು ಮಾಡುತ್ತಿದ್ದಾರೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದೀನ್‌ ಸಂಪ್ಯ ಅವರು ಹೇಳಿದ್ದಾರೆ.

ಬನ್ನೂರು ಗ್ರಾ.ಪಂ. ಸದಸ್ಯ ರತ್ನಾಕರ ಪ್ರಭು, ಸೆಲ್ಕೋ ಸೋಲಾರ್‌ನ ರಂಜಿತ್‌, ಬನ್ನೂರು ಗ್ರಾ.ಪಂ. ಸದಸ್ಯೆ ಗಿರಿಜಾ, ಸಾಮಾಜಿಕ ಕಾರ್ಯಕರ್ತೆ ಗೀತಾ, ಸೆಲ್ಕೋ ಸೋಲಾರ್‌ನ ಸುಧಾಕರ್‌ ಉಪಸ್ಥಿತರಿದ್ದರು. ಅಂಗನನಾಡಿ ಕಾರ್ಯಕರ್ತೆ ಅರುಣಾ ವಂದಿಸಿದರು. ಜನಶಿಕ್ಷಣ ಟ್ರಸ್ಟ್‌ ಜಿಲ್ಲಾ ನಿರ್ದೇಶಕ ಕೃಷ್ಣ ಮೂಲ್ಯ ನಿರೂಪಿಸಿದರು.

 ಆತ್ಮತೃಪ್ತಿಯ ಕೆಲಸ
ಬಡವರ ಮಕ್ಕಳೂ ಬೆಳಕಿನ ದೀಪದಿಂದ ಶಿಕ್ಷಣ ಪಡೆದು ಉನ್ನತ ವ್ಯಕ್ತಿಗಳಾಗಿ ಸಮಾಜದಲ್ಲಿ ಬಾಳ್ವೆ ನಡೆಸಬೇಕು. ಹೀಗಾಗಿ ಸೌರ ಬೆಳಕು ನೀಡುವ ಯೋಜನೆಗೆ ಬೆಂಬಲ ನೀಡಿದ್ದೇನೆ.
-ರಮೇಶ್‌ ಬಾಬು,
ತಹಶೀಲ್ದಾರ್‌ ಪುತ್ತೂರು

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.