Agricultural damage; ಇನ್ನೂ ತೆರೆಯದ ಪರಿಹಾರ ತಂತ್ರಾಂಶ ಪೋರ್ಟಲ್‌

ರೈತರಿಗೆ ಕೃಷಿ ಹಾನಿ ಪರಿಹಾರ ವಿತರಣೆ ವಿಳಂಬ ಸಾಧ್ಯತೆ

Team Udayavani, Aug 8, 2024, 6:19 AM IST

ಇನ್ನೂ ತೆರೆಯದ ಪರಿಹಾರ ತಂತ್ರಾಂಶ ಪೋರ್ಟಲ್‌

ಕುಂದಾಪುರ: ರಾಜ್ಯಾದ್ಯಂತ ಒಂದು ತಿಂಗಳಿನಿಂದ ವ್ಯಾಪಕ ಮಳೆಯಾಗಿದ್ದರಿಂದ ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಆದರೆ ರಾಜ್ಯ ಸರಕಾರವು ಈ ಆರ್ಥಿಕ ವರ್ಷದ ಪರಿಹಾರ ತಂತ್ರಾಂಶ ಪೋರ್ಟಲ್‌ ಅನ್ನು ಇನ್ನೂ ತೆರೆಯದ ಕಾರಣ ಹಾನಿಯಾದ ವರದಿಗಳನ್ನು ದಾಖಲು ಮಾಡಲು ಆಗುತ್ತಿಲ್ಲ. ಇದರಿಂದ ರೈತರಿಗೆ ಪರಿಹಾರ ಪಾವತಿ ಮತ್ತಷ್ಟು ವಿಳಂಬ ಆಗುವ ಸಾಧ್ಯತೆಗಳಿವೆ.

ಕೃಷಿ ಹಾನಿ ವಿವರ ಹಾಗೂ ಅದಕ್ಕೆ ಪರಿಹಾರ ಕೋರಿ ಅರ್ಜಿ ಸಲ್ಲಿಸಲು 2022ರಿಂದ ಆನ್‌ಲೈನ್‌ ಮೂಲಕವೇ ಅವಕಾಶ ಕಲ್ಪಿಸಲಾಗಿದೆ. ಕಳೆದ ಮಾರ್ಚ್‌ವರೆಗೆ ಈ ಪೋರ್ಟಲನ್ನು ತೆರೆಯಲಾಗಿತ್ತು. ಆ ಬಳಿಕ ಅದನ್ನು ಸ್ಥಗಿತಗೊಳಿಸಲಾಗಿದೆ.

ಯಾಕೆ ತಂತ್ರಾಂಶದಲ್ಲಿ ದಾಖಲು?
ಭತ್ತದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾದರೆ ಕಂದಾಯ ಹಾಗೂ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಿ ವರದಿ ಕೊಡುತ್ತಾರೆ. ಆಯಾಯ ಗ್ರಾಮದ ವಿಎಗಳುಈ ಪರಿಹಾರ ತಂತ್ರಾಂಶ ಪೋರ್ಟಲ್‌ನಲ್ಲಿ ದಾಖಲಿಸಬೇಕು. ಬಳಿಕ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿಗಳು ಅನುಮೋದಿಸಬೇಕು. ಹಿಂದೆ ಕೃಷಿ ನಷ್ಟ ಆದಾಗ ಪರಿಹಾರವನ್ನು ಚೆಕ್‌ ಮೂಲಕ ಕೊಡಲಾಗುತ್ತಿತ್ತು. ಆದರೆ ಈಗ ಡಿಬಿಟಿ (ಡೈರೆಕ್ಟ್ ಬೆನಿಫಿಟ್‌ ಟ್ರಾನ್ಸ್‌ಫರ್‌) ಮೂಲಕ ನೇರವಾಗಿ ರೈತರ ಖಾತೆಗೆ ಸಂದಾಯವಾಗುತ್ತದೆ. ಅದಕ್ಕಾಗಿಯೇ ಈ ಪರಿಹಾರ ಪೋರ್ಟಲ್‌ನಲ್ಲಿ ದಾಖಲಿಸುವುದು ಅಗತ್ಯ. ಎಷ್ಟು ಪರಿಹಾರ ಬಂದಿದೆ ಎಂಬುದನ್ನು ರೈತರು ಈ ಪೋರ್ಟಲ್‌ ಮೂಲಕ ತಮ್ಮ ಆಧಾರ್‌ ನಂಬರ್‌ ಸಹಾಯದಿಂದ ತಿಳಿದುಕೊಳ್ಳಬಹುದು.

ಎಷ್ಟು ಹಾನಿ?
ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಮೇ ತಿಂಗಳಲ್ಲಿ 28 ಹೆಕ್ಟೇರ್‌, ಜೂನ್‌ನಲ್ಲಿ 21 ಹೆಕ್ಟೇರ್‌, ಜುಲೈಯಲ್ಲಿ 49 ಹೆಕ್ಟೇರ್‌ ಸಹಿತ ಒಟ್ಟಾರೆ ಈವರೆಗೆ 324 ರೈತರ 99.88 ಹೆಕ್ಟೇರ್‌ ಅಡಿಕೆ ತೋಟಗಳಿಗೆ ಹಾಗೂ 140 ಹೆಕ್ಟೇರ್‌ ಭತ್ತದ ಕೃಷಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 57 ರೈತರ ಒಟ್ಟು 7.76 ಹೆಕ್ಟೇರ್‌ ಪ್ರದೇಶದ ಅಡಿಕೆ ತೋಟ, 6.52 ಹೆಕ್ಟೇರ್‌ ಪ್ರದೇಶದ ತೆಂಗಿನ ಮರಗಳಿಗೆ ಹಾನಿಯಾಗಿದೆ. ಈ ಬಾರಿಯ ಮಳೆಗೆ ಭತ್ತದ ಕೃಷಿಗೆ ಗರಿಷ್ಠ ಹಾನಿಯಾಗಿದ್ದು, ಬಹುತೇಕ ಕಡೆಗಳಲ್ಲಿ ಮರು ಬಿತ್ತನೆಗೆ ರೈತರು ಮುಂದಾಗಿದ್ದಾರೆ. ಅದರ ಸಮೀಕ್ಷೆ ನಡೆಯುತ್ತಿದ್ದು, ಇನ್ನೂ ಅಂತಿಮಗೊಂಡಿಲ್ಲ.

ತೆರವಿಗೆ ಕ್ರಮ
ಪರಿಹಾರ ತಂತ್ರಾಂಶ ಪೋರ್ಟಲ್‌ ತೆರವು ಮಾಡಿದ್ದು, ಈವರೆಗೆ 89 ತಾಲೂಕುಗಳ ಬೆಳೆ ಹಾನಿ ನಷ್ಟದ ದಾಖಲಾತಿಗಳನ್ನು ಮಾಡಲಾಗಿದೆ. ಇನ್ನೂ ಕೆಲವು ಜಿಲ್ಲೆಗಳ ಪೋರ್ಟಲ್‌ನಲ್ಲಿ ದಾಖಲು ಮಾಡಲು ಆಗದಿರುವ ಬಗ್ಗೆ ಈಗ ತಾನೇ ಗಮನಕ್ಕೆ ಬಂದಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
– ರಶ್ಮಿ ಮಹೇಶ್‌,
ಪ್ರಧಾನ ಕಾರ್ಯದರ್ಶಿ,
ಕಂದಾಯ ಇಲಾಖೆ ಬೆಂಗಳೂರು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.