Politics: ಶೀಘ್ರವೇ ಬಿಜೆಪಿ ನಾಯಕರಿಗೆ ವರಿಷ್ಠರ ಬುಲಾವ್‌

ಜೆಡಿಎಸ್‌ ಜತೆ ಸೀಟು ಹಂಚಿಕೆ ಕುರಿತು ಚರ್ಚೆ ಸಾಧ್ಯತೆ: ವಿಜಯ ದಶಮಿ ಬಳಿಕ ಮೈತ್ರಿ ಸೂತ್ರ ಜಂಟಿ ಘೋಷಣೆ

Team Udayavani, Sep 23, 2023, 10:36 PM IST

BJP FLAG 1

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಧಿಕೃತ ಘೋಷಣೆಯಾಗಿದ್ದು, ಸೀಟು ಹಂಚಿಕೆ ಕುರಿತು ಚರ್ಚಿಸಲೆಂದೇ ರಾಜ್ಯ ಬಿಜೆಪಿ ನಾಯಕರನ್ನು ವರಿಷ್ಠರು ಶೀಘ್ರವೇ ದಿಲ್ಲಿಗೆ ಕರೆಸಿ ಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕ, ಉಪನಾಯಕರ ನೇಮಕ ವಿಚಾರವೂ ಇತ್ಯರ್ಥವಾಗುವ ಸಾಧ್ಯತೆ ಇದೆ.

ವಿಜಯ ದಶಮಿ ಬಳಿಕ ಜಂಟಿ ಘೋಷಣೆ

ಬಿಜೆಪಿ ಮತ್ತು ಜೆಡಿಎಸ್‌ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ವಿಜಯ ದಶಮಿ ಬಳಿಕ ಕರ್ನಾಟಕದಲ್ಲೇ ಜಂಟಿ ಘೋಷಣೆ ಸಾಧ್ಯತೆ ಇದೆ. ಬಿಜೆಪಿ ಮೂಲಗಳ ಪ್ರಕಾರ, ಜೆಡಿಎಸ್‌ಗೆ ಗರಿಷ್ಠ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡುವ ಸಾಧ್ಯತೆ ಇದೆ. ಇದಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸೆಣಸಲು ಕುಮಾರಸ್ವಾಮಿಗೂ ಇಷ್ಟ ಇದ್ದಂತಿಲ್ಲ. ಹಾಸನ, ಮಂಡ್ಯ, ಕೋಲಾರ ಹಾಗೂ ತುಮಕೂರು ಕ್ಷೇತ್ರದ ಮೇಲೆ ಜೆಡಿಎಸ್‌ ಕಣ್ಣಿಟ್ಟಿದೆ. ಕೋಲಾರದ ಬದಲು ಚಿಕ್ಕಬಳ್ಳಾಪುರವನ್ನು ಮೈತ್ರಿ ಪಕ್ಷಕ್ಕೆ ಕೊಡುವುದು ಸೂಕ್ತ ಎಂಬುದು ಬಿಜೆಪಿ ನಾಯಕರ ನಿಲುವು. ಬಿಜೆಪಿಯ ಒಂದು ಬಣ ತುಮಕೂರು ಕ್ಷೇತ್ರ ತ್ಯಾಗದ ಬಗ್ಗೆಯೂ ಅಪಸ್ವರ ಎತ್ತಿದೆ. ಎರಡೂ ಪಕ್ಷಗಳಲ್ಲಿರುವ ಈ ಗೊಂದಲ ನಿವಾರಣೆ ಆಗುವವರೆಗೂ ಸೀಟು ಹಂಚಿಕೆ ಬಗ್ಗೆ ಬಹಿರಂಗ ಹೇಳಿಕೆ ನೀಡದಿರಲು ನಿರ್ಧರಿಸಲಾಗಿದೆ.

ಜೆಡಿಎಸ್‌ನ ಕೆಲವು ಶಾಸಕರೂ ಮೈತ್ರಿಗೆ ವಿರುದ್ಧ ವಾಗಿದ್ದಾರೆ. ಅವರನ್ನು ಒಪ್ಪಿಸುವ ಸವಾಲು ಕುಮಾರಸ್ವಾಮಿ ಮುಂದಿದೆ. ಇದೆಲ್ಲ ಪ್ರಕ್ರಿಯೆ ಆದ ಮೇಲೆ ರಾಜ್ಯ ನಾಯಕರ ಜತೆಗೆ ಕುಮಾರಸ್ವಾಮಿ ಚರ್ಚೆ ನಡೆಸಿ ಒಮ್ಮತಕ್ಕೆ ಬರಲಿದ್ದಾರೆ.

ಗ್ರಾಮಾಂತರಕ್ಕೆ ಯೋಗೇಶ್ವರ?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ದಿಂದ ಕುಮಾರಸ್ವಾಮಿ ಕಣಕ್ಕಿಳಿಯಲಿ ಎಂಬುದು ಕೆಲವು ಬಿಜೆಪಿ ನಾಯಕರ ಅಪೇಕ್ಷೆ. ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಆಗ ತುರುಸಿನ ಪೈಪೋಟಿ ನೀಡಲು ಸಾಧ್ಯ ಎಂಬುದು ಇದರ ಹಿಂದಿರುವ ಲೆಕ್ಕಾಚಾರ. ಆದರೆ ಕುಮಾರಸ್ವಾಮಿ ಇದಕ್ಕೆ ವ್ಯತಿರಿಕ್ತ ಅಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಹೆಸರು ಮುನ್ನೆಲೆಗೆ ಬಿಡಲಾಗಿದೆ. ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾದ ಸಂದರ್ಭದಲ್ಲಿ ಎರಡು ಬಾರಿ ಯೋಗೇಶ್ವರ “ಯೋಗಕ್ಷೇಮ’ ವಿಚಾರಿಸಲೆಂದು ಭೇಟಿಯಾಗಿದ್ದರು. ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿಯೋಗೇಶ್ವರ ಎಂಬ ಸಂದೇಶವನ್ನು ಜೆಡಿಎಸ್‌ ಪಾಳಯದಿಂದಲೂ ಹರಿಬಿಡಲಾಗಿದೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.