MLC Elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ


Team Udayavani, May 14, 2024, 11:38 PM IST

MLC elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

ಉಡುಪಿ: ವಿಧಾನ ಪರಿಷತ್‌ ಸದಸ್ಯನಾಗಿ ಕಾರ್ಮಿಕ ವರ್ಗ, ಶಿಕ್ಷಕರು ಹಾಗೂ ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಿದ್ದೇನೆ. ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಪದವೀಧರರ ಪೂರ್ಣ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರ ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ಕ್ಷೇತ್ರವು ನೈಋತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ 14 ಸಾವಿರಕ್ಕೂ ಅಧಿಕ ಹೊಸ ನೋಂದಣಿಯಾಗಿದೆ.

ಪದವೀಧರರ, ಶಿಕ್ಷಕರ ಹಾಗೂ ಕಾರ್ಮಿಕ ವರ್ಗದ ಧ್ವನಿಯಾಗಿ ಮುಂದೆಯೂ ಕಾರ್ಯ ನಿರ್ವಹಿಸುವೆ ಎಂದು ಹೇಳಿದರು.

ಎಲ್ಲ ಪದವೀಧರರ ಪರವಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದ ಅವರು, ನೂತನ ಪಿಂಚಣಿ ವ್ಯವಸ್ಥೆ ರದ್ದಾಗಿ ಹಳೇ ಪಿಂಚಣಿ ವ್ಯವಸ್ಥೆ ಜಾರಿ, ಅನುದಾನಿತ ಶಾಲಾ ಕಾಲೇಜು ಗಳ ಪಿಂಚಣಿ ವಂಚಿತ ಶಿಕ್ಷಕರ, ನೌಕರರ ಸಮಸ್ಯೆಗಳ ಬಗ್ಗೆ ಸದಾ ಹೋರಾಡಿರುವೆ ಎಂದರು.

ಸ್ಪಂದಿಸದ ಬಿಜೆಪಿ: ನಾನು ಬಿಜೆಪಿಯಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಮಿಕರ ಬಗ್ಗೆ ಕೈಗೊಂಡ ಕೆಲವು ನಿರ್ಧಾರ ನೋವು ತಂದಿತ್ತು. ಹಕ್ಕುಗಳಿ ಗಾಗಿ ಕಾರ್ಮಿಕರು ಪ್ರತಿಭಟಿಸಿ ಜೀವ ಕಳೆದುಕೊಂಡರೂ ಕಿಂಚಿತ್ತೂ ಕರುಣೆ ತೋರಲಿಲ್ಲ. ಆದರೆ ತಮ್ಮ ಮನೆಯ ನಾಯಿ ಸತ್ತಾಗ ಮುತ್ತಿಟ್ಟು ಶವಸಂಸ್ಕಾರ ಮಾಡಿದ್ದಾರೆ. ಪ್ರಾಣಿಗಳ ಬಗ್ಗೆ ಇದ್ದ ಪ್ರೀತಿಯನ್ನು ಮನುಷ್ಯರ ಬಗ್ಗೆಯೂ ತೋರಿಸಬೇಕಿತ್ತು ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.