ಎಚ್‌ಡಿಕೆ ತೋಟದ ಮನೆಯಲ್ಲಿ ವಿಶೇಷ ಯಾಗ

300 ಪುರೋಹಿತರಿಂದ ನಿರಂತರ 9 ದಿನ ಲಕ್ಷ್ಮೀನಾರಾಯಣ ಹೃದಯ ಪಾರಾಯಣಕ್ಕೆ ಚಾಲನೆ

Team Udayavani, Mar 4, 2023, 12:59 PM IST

6-ramanagara

ರಾಮನಗರ: ಧಾರ್ಮಿಕ ಆರಾಧನೆ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ವಿಶೇಷ ಆಸಕ್ತಿ ವಹಿಸುತ್ತದೆ.

ಈ ಬಾರಿ ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಹಠಕ್ಕೆ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಮೂಲಕ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದು, ಇದೀಗ ಚುನಾವಣೆ ಹೊಸ್ತಿಲಲ್ಲಿ ದೇವರ ಮೊರೆ ಹೋಗಿದ್ದಾರೆ.

ತಾಲೂಕಿನ ಬಿಡದಿ ಬಳಿಯ ಕೇತುಗಾನ ಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಯಾಗ ಹಮ್ಮಿಕೊಂಡಿದ್ದಾರೆ. ಅದಕ್ಕಾಗಿ ನೂರಾರು ಪುರೋಹಿತರ ಸಮಾಗಮವಾಗಿದ್ದು, ಪೂಜೆ ಮತ್ತು ಯಾಗ ಆರಂಭವಾಗಿದೆ.

ರಾಜ್ಯಾದ್ಯಂತ ನಡೆಯುತ್ತಿರುವ ಪಂಚರತ್ನ ಯೋಜನೆ ಯಶಸ್ಸಿಗೆ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆರೋಗ್ಯ ಚೇತರಿಕೆಗೆ ಸಂಬಂಧಿಸಿದಂತೆ ಎಚ್‌ಡಿಕೆ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದಾರೆ.

9 ದಿನಗಳ ವರೆಗೆ ನಿರಂತರವಾಗಿ ಯಾಗಗಳು ನಡೆಯಲಿವೆ. ಪ್ರಥಮ ದಿನವಾದ ಶುಕ್ರವಾರ ಕುಮಾರಸ್ವಾಮಿ ಅವರ ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ ಯಾಗದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು.

ಸಹೋದರ, ಪುತ್ರ, ಮೊಮ್ಮಗ ಭಾಗಿ: 9 ದಿನ ಕಾಲ ಶತ ಚಂಡಿಕಾ ಯಾಗ, ಕೋಟಿ ಮೃತ್ಯುಂಜಯ ಪೂಜೆಗಳು ಜರುಗಲಿವೆ.

ಹೇಳಿ ಕೇಳಿ ಕೇತುಗಾನಹಳ್ಳಿಯ ತೋಟದ ಮನೆ ಕುಮಾರಸ್ವಾಮಿ ಅವರಿಗೆ ಅಚ್ಚು ಮೆಚ್ಚಿನ ಮನೆಯಾದ ಹಿನ್ನೆಲೆಯಲ್ಲಿ ಕುಟುಂಬದವರ ಆರೋಗ್ಯ ಹಾಗೂ ಪಕ್ಷದ ಯಶಸ್ಸಿಗಾಗಿ ಪೂಜೆ ಮಾಡಿಸಲಾಗುತ್ತಿದೆ. ಯಾಗದಲ್ಲಿ ಎಚ್‌.ಡಿ.ರೇವಣ್ಣ, ನಿಖೀಲ್‌ ಕುಮಾರಸ್ವಾಮಿ, ರೇವತಿ ನಿಖೀಲ್‌ ಜೊತೆಗೆ ಅವ್ಯಾನ್‌ ದೇವೇಗೌಡ ಪೂಜೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ

ರಾಮನಗರದ ಬಿಡದಿಯ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ನಡೆಯುತ್ತಿರುವ ಯಾಗದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಬಿಜೆಪಿ ಸರ್ಕಾರದ ಲಂಚಾವತಾರ ಮಿತಿಮೀರಿದೆ. ಇನ್ನೊಂದು ಕಡೆ ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ,ಯಾವ ನೈತಿಕತೆ ಇಟ್ಟುಕೊಂಡು ಭಾಷಣ ಮಾಡುತ್ತಿ ದ್ದಾರೆ ಎಂದು ಎಚ್‌.ಡಿ.ಕೆ ಕುಟುಕಿದರು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಅರಿವಿದ್ದಿದ್ದರೆ ಅವರು ಇಲ್ಲಿಗೆ ಬರುವ ಹಾಗೆ ಇರಲಿಲ್ಲ. ಯಾವ ಮುಖ ಇಟ್ಟುಕೊಂಡು ಬಂದು ಭಾಷಣ ಮಾಡುತ್ತಿದ್ದಾರೆ ಎಂದು ಛೇಡಿಸಿದ ಎಚ್‌ಡಿಕೆ, ಸಾರ್ವಜನಿಕವಾಗಿ ನಾಡಿನ ಜನರ ಹಣವನ್ನು ಲೂಟಿ ಹೊಡೆದು ಹೇಗೆ ರಾಜ್ಯದ ಅಭಿವೃದ್ಧಿ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಡಬಲ್‌ ಎಂಜಿನ್‌ ಸರ್ಕಾರ ಕೊಟ್ಟು ಜನ ಅಭಿವೃದ್ಧಿ ಆಗೋದನ್ನು ನೋಡುತ್ತಿದ್ದಾರೆ, ಕಾಂಗ್ರೆಸ್‌ ಕೂಡ ಕಡಿಮೆ ಇಲ್ಲ, ಎರಡು ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್‌ ಸಂಸ್ಕೃತಿ ಇಟ್ಟುಕೊಂಡು ಬಂದಿವೆ. ಕಾಂಗ್ರೆಸ್‌ನವರು ಸಹ ರೀಡೂ ಹಗರಣದಲ್ಲಿ ಎಷ್ಟು ಲೂಟಿ ಮಾಡಿದ್ದಾರೆ, ಸಿದ್ದರಾಮಯ್ಯ ಕಾಲದಲ್ಲಿ ಎಲ್ಲರಿಗೂ ಗೊತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ತೆಲಂಗಾಣದಿಂದ ಪುರೋಹಿತರ ಆಗಮನ

ಎಚ್‌ಡಿಕೆ ಹಮ್ಮಿಕೊಂಡಿರುವ ಯಾಗದಲ್ಲಿ ಪಕ್ಕದ ತೆಲಂಗಾಣ ರಾಜ್ಯದ ನುರಿತ 300ಕ್ಕೂ ಹೆಚ್ಚು ಪುರೋಹಿತರು ಆಗಮಿಸಿದ್ದು, ಯಾಗಗಳನ್ನ ನಡೆಸುತ್ತಿದ್ದಾರೆ. ಗುರುವಾರ ರಾತ್ರಿಯೇ ತೆಲಂಗಾಣ ದಿಂದ ತೋಟದ ಮನೆ ಸೇರಿದ್ದಾರೆ. ಇವರೆಲ್ಲರೂ ಉಳಿದು ಕೊಳ್ಳಲು ತೋಟದಲ್ಲಿ ವ್ಯವಸ್ಥೆ ಮಾಡಲಾಗಿದೆ. ತೆಲಂಗಾಣ ಮುಖ್ಯ ಮಂತ್ರಿ ಕೆ.ಸಿ.ಆರ್‌.ಚಂದ್ರಶೇಖರ್‌ ಹಾಗೂ ಕುಮಾರಸ್ವಾಮಿ ಅವರ ನಡುವೆ ಉತ್ತಮ ಸ್ನೇಹ ಬಾಂಧವ್ಯ ವಿರುವ ಕಾರಣ, ಸ್ವತಃ ಚಂದ್ರ ಶೇಖರ್‌ ಅವರೇ ಪುರೋಹಿತರನ್ನು ಅಲ್ಲಿಂದ ಕಳುಹಿಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.