ಕೇಂದ್ರದ ಆರ್ಥಿಕ ನೀತಿ ವಿರುದ್ಧ ಚೈತನ್ಯ ಸಮಾವೇಶ


Team Udayavani, Nov 4, 2019, 3:09 AM IST

kendrada

ಬೆಂಗಳೂರು: ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಸರ್ವನಾಶವಾಗುತ್ತಿರುವುದನ್ನು ಜನತೆಗೆ ತಲುಪಿಸಲು ರಾಜ್ಯಾದ್ಯಂತ ಚೈತನ್ಯ ಸಮಾವೇಶ ಮಾಡುವ ಮೂಲಕ ಪ್ರತಿಭಟನೆ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಆರ್ಥಿಕ ವ್ಯವಸ್ಥೆ ಐಸಿಯುನಲ್ಲಿದೆ.

ಉದ್ಯೋಗ ಸೃಷ್ಟಿ ಕೋಮಾವಸ್ಥೆಯಲ್ಲಿದೆ. ಇರುವ ಉದ್ಯೋಗ ಉಳಿಸಿಕೊಳ್ಳಲು ಆಗ್ತಿಲ್ಲ. ದೇಶ ಆರ್ಥಿಕ ತುರ್ತು ಪರಿಸ್ಥಿತಿಯಲ್ಲಿರುವ ಹಾಗೆ ಕಾಣಿಸುತ್ತಿದೆ. ಐದೂವರೆ ವರ್ಷದ ಹಿಂದೆ ಮೋದಿ ಪ್ರಧಾನಿ ಆದಾಗ ಜನರಲ್ಲಿ ಸಾಕಷ್ಟು ಆಸೆ ಹುಟ್ಟಿಸಿದ್ದವರು. ಆದರೆ, ಈಗ ತಪ್ಪು ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ದೇಶವನ್ನು ಸರ್ವನಾಶದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ವಾಧಿಕಾರಿ ಪ್ರಧಾನಿ ಮೋದಿ ಯಾರ ಮಾತನ್ನೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ನಾಶ ಪಡಿಸುವ ಮೂಲಕ ದೇಶವನ್ನು ಸರ್ವನಾಶದತ್ತ ಒಯ್ಯುತ್ತಿದ್ದಾರೆ. ನೋಟು ಅಮಾನ್ಯಿಕರಣ ಮೂಲಕ ಇಡೀ ದೇಶಕ್ಕೆ ಸಮಸ್ಯೆ ಉಂಟು ಮಾಡಿದರು. ಜಿಎಸ್‌ಟಿ ಮೂಲಕ ದೇಶದ ಜಿಡಿಪಿ ಕುಸಿತ ಮಾಡಿದರು. ಯಾವುದೇ ಕಾಯ್ದೆ ಜಾರಿ ಮಾಡುವಾಗ ಆಗಲಿ, ಹೊಸ ನಿಯಮ ರೂಪಿಸುವಾಗ ಆಗಲಿ ಪ್ರತಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ.ಯಾವುದೇ ವಿಷಯದ ಬಗ್ಗೆ ಚರ್ಚೆಯೂ ನಡೆಸುತ್ತಿಲ್ಲ. ಇದರಿಂದ ಕೇಂದ್ರ ಸರ್ಕಾರದ ಆರ್ಥಿಕ ನೀತಿ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವುದಾಗಿ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಆರ್‌ಸಿಇಪಿ ವಿರುದ್ಧ ಪ್ರತಿಭಟನೆ: ಕೇಂದ್ರ ಸರ್ಕಾರ ಮುಕ್ತ ಆರ್ಥಿಕ ನೀತಿ ಅಡಿಯಲ್ಲಿ ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿದ್ದು, ಈ ಬಗ್ಗೆ ದೇಶದ ಜನರನ್ನು ಕತ್ತಲೆಯಲ್ಲಿ ಇಟ್ಟು ನಿರ್ಧಾರ ಕೈಗೊಳ್ಳಲಾಗುತ್ತಿದೆ. ಆರ್‌ಸಿಇಪಿ ಒಪ್ಪಂದದಿಂದ ದೇಶದ ಕೃಷಿ, ಹೈನುಗಾರಿಕೆ, ಬೇರೆ ಉದ್ಯೋಗಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದನ್ನು ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಜೊತೆಗೆ ಚರ್ಚೆ ನಡೆಸಬೇಕಿತ್ತು. ಆದರೆ, ಯಾವುದೇ ಮಾಹಿತಿ ನೀಡದೇ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ವಿರುದ್ಧ ಸೋಮವಾರ ಕಾಂಗ್ರೆಸ್‌ ಕಿಸಾನ್‌ ಘಟಕದಿಂದ ರೈಲು ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರದ ಅನುದಾನವೂ ಯಾರಪ್ಪಂದೂ ಅಲ್ಲ: ಅನ್ನ ಭಾಗ್ಯ ಯೋಜನೆ ಸಿದ್ದರಾಮಯ್ಯ ಅವರಪ್ಪನ ಮನೆಯಿಂದ ತಂದು ಕೊಟ್ಟಿದ್ದಲ್ಲ ಎಂದು ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದು, ಕೇಂದ್ರ ಸರ್ಕಾರ ನೀಡುವ ಹಣವೂ ಯಾರಪ್ಪಂದೂ ಅಲ್ಲ ಎಂದು ಹೇಳಿದ್ದಾರೆ. ಯುಪಿಎ ಸರ್ಕಾರ ಆಹಾರ ಭದ್ರತೆ ಕಾಯ್ದೆ ಅಡಿಯಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಪಡಿತರ ವಿತರಿಸುವ ಯೋಜನೆ ಜಾರಿಗೆ ತಂದಿದೆ.

ರಾಜ್ಯ ಸರ್ಕಾರ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ದೇಶದ ಯಾವ ರಾಜ್ಯವೂ ಉಚಿತವಾಗಿ ಅಕ್ಕಿ ನೀಡುತ್ತಿಲ್ಲ. ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯವಾಗಿದೆ. ಮೊದಲು ಪಡಿತರ ವ್ಯವಸ್ಥೆಗೆ ಕೇವಲ 700 ಕೋಟಿ ರೂ.ನೀಡಲಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ 2500 ಕೋಟಿ ರೂ.ರಾಜ್ಯ ಸರ್ಕಾರವೇ ನೀಡುತ್ತಿದೆ. ಜನರ ತೆರಿಗೆ ಹಣದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಮಾನ್ಯತೆ ನೀಡುವ ಅಗತ್ಯವಿಲ್ಲ. ಅವರಿಗೆ ಅನುಭವದ ಕೊರತೆ ಇದೆ ಎಂದು ಹೇಳಿದರು.

ಮುಂಡಗೋಡದಲ್ಲಿ ಇಂದು ಪ್ರತಿಭಟನೆ: ನವೆಂಬರ್‌ 4 ರಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ನ. 5 ರಂದು ಶಿವಮೊಗ್ಗ, 6 ರಂದು ವಿಜಯಪುರ, 9 ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ನ.11 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.