ಅಪರಾಧ ತಡೆಗೆ ಪೊಲೀಸರ ಹರ ಸಾಹಸ : ಜಿಲ್ಲಾ ವರಿಷ್ಠಾಧಿಕಾರಿ ಶ್ರೀನಿವಾಸಗೌಡ


Team Udayavani, Sep 3, 2020, 1:02 PM IST

ಅಪರಾಧ ತಡೆಗೆ ಪೊಲೀಸರ ಹರ ಸಾಹಸ : ಜಿಲ್ಲಾ ವರಿಷ್ಠಾಧಿಕಾರಿ ಶ್ರೀನಿವಾಸಗೌಡ

ಹಾಸನ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿ ತಕ್ಷಣ ಸ್ಪಂದಿಸುವುದೂ ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿದೆ ಎಂದು ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ಶ್ರೀನಿವಾಸಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ಸ್ಥಳದಲ್ಲಾದರೂ ಗಲಾಟೆಗಳು ನಡೆದರೆ, ಅನುಮಾನಸ್ಪದ ವ್ಯಕ್ತಿಗಳು ಕಾಣಿಸಿದರೇ ಸಾರ್ವಜನಿಕರು ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿ ಮಾಹಿತಿ ನೀಡಿದರೆ ಸಾಕು ಪೊಲೀಸ್‌ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗುತ್ತಾರೆ.

ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದವರ ಹೆಸರನ್ನು ಹಾಗೂ ಮೊಬೈಲ್‌ ಸಂಖ್ಯೆಯನ್ನು ಗೌಪ್ಯವಾಗಿ ಇರಿಸಲಾಗುವುದು ಎಂದರು.

ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿ: ಜಿಲ್ಲೆಯಲ್ಲಿ, ವಿಶೇಷವಾಗಿ ಚನ್ನರಾಯ ಪಟ್ಟಣದಲ್ಲಿ ನಡೆದ ಅಪರಾಧ ಪ್ರಕರಣಗಳು, ಹಾಸನದಲ್ಲಿ ನಡೆಯುತ್ತಿರುವ ಪುಂಡಾಟಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಕಾರ ಕೋರಿರುವ ಎಸ್ಪಿ ಶ್ರೀನಿವಾಸಗೌಡ ಅವರು, ಸಾರ್ವಜನಿಕರು ಹೆದರದೇ ಪೊಲೀಸ್‌ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದರೇ ಪೊಲೀಸರು ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.

ಕರಪತ್ರ ಹಂಚುವ ಕ್ರಮ: ಡಕಾಯಿತರು, ದರೋಡೆಕೋರರು ಇತ್ತೀಚಿನ ದಿನಗಳಲ್ಲಿ ಸುಳಿವು ಬಿಡದಂತೆ ಎಚ್ಚರಿಕೆಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ. ಮೊಬೈಲ್‌ ಗಳನ್ನೂ ಕೂಡ ಬಳಸದೇ ದುಷ್ಕೃತ್ಯ ನಡೆಸುತ್ತಿದ್ದಾರೆ. ಪೊಲೀಸ್‌ ಗುಪ್ತದಳವು ಮಾಹಿತಿ ಸಂಗ್ರಹಿಸಿಯೇ ಆರೋಪಿಗಳನ್ನು ಪತ್ತೆ ಹಚ್ಚಬೇಕಾದ ಸವಾಲು ಎದುರಿಸುತ್ತಿದೆ. ಒಂಟಿ ಮನೆ ಹಾಗೂ ತೋಟದ ಮನೆಯಲ್ಲಿ ಒಬ್ಬರು, ಇಬ್ಬರು ಇರುವ ಕಡೆ ಹೆಚ್ಚು ಮನೆಗಳ್ಳತನ ಹಾಗೂ ಇತರೆ ದುಷ್ಕೃತ್ಯಗಳು ಹೆಚ್ಚು ನಡೆಯುತ್ತಿರುವುದರಿಂದ ಸಾರ್ವಜನಿಕ ರಲ್ಲಿ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆಯಿಂದ ಕರಪತ್ರ ಹಂಚುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಅನುಮಾನ ಬಂದ್ರೆ ಪೊಲೀಸ್‌ಗೆ ತಿಳಿಸಿ: ಒಂಟಿಮನೆ, ತೋಟದ ಮನೆಗಳಿಗೆ ಯಾರಾದರೂ ಅಪರಿಚಿತರು ಬಂದರೇ ಯಾವುದೇ ಕಾರಣಕ್ಕೂ ಮನೆ ಬಾಗಿಲು ತೆಗೆಯಬಾರದು. ಅನುಮಾನ ಬಂದ ಕೂಡಲೇ ಪೊಲೀಸ್‌ ಕಂಟ್ರೋಲ್‌ಗೆ ಕರೆ ಮಾಡಬೇಕು. ಇನ್ನು ಬೀದಿಗಳಲ್ಲಿ ಅನುಮಾನವಾಗಿ ಸುತ್ತಾಡುವವರ ಬಗ್ಗೆ ಅಲ್ಲಿನ ನಿವಾಸಿಗಳು ತಕ್ಷಣದಲ್ಲಿ ಪೊಲೀಸ್‌ಗೆ ಮಾಹಿತಿ ಕೊಡಬೇಕು.

ಹೊಸದಾಗಿ ಮನೆ ಬಾಡಿಗೆಗೆ, ಕೆಲಸಕ್ಕೆ ಮತ್ತು ತೋಟದ ಕೆಲಸಕ್ಕೆ ಬಂದು ಕೆಲಸದ ಸಮಯದಲ್ಲೆ ಪರಿಚಿತರಾದವರ ಬಗ್ಗೆ, ಕೆಲಸ ಇಲ್ಲದಿದ್ದಾಗಲೂ ಮನೆಗೆ ಬಂದರೇ ಎಚ್ಚರದಿಂದ ಇರಬೇಕು. ಮನೆ ಬಾಗಿಲನ್ನು ತೆಗೆಯದೇ ಮನೆ ಒಳಗಿನಿಂದಲೇ ಮಾತ ನಾಡಿ ಕಳುಸಬೇಕು. ಅನುಮಾನ ಬಂದರೇ ಪೊಲೀಸರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕರು ಸದಾ ಎಚ್ಚರದಿಂದಿರಬೇಕು:
ಮದ್ಯಪಾನ ಮಾಡಿ ಗಲಾಟೆ ಮಾಡುವವರ ಬಗ್ಗೆ ಸಾರ್ವಜನಿಕರು ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡಿದರೂ ತಕ್ಷಣ ಪೊಲೀಸರು ಕ್ರಮ ಕೈಗೊಳ್ಳುವರು. ಮಾಹಿತಿ ನೀಡಿದವರ ವಿವರವನ್ನು ಯಾವ ಕಾರಣಕ್ಕೂ ಬಹಿರಂಗಪಡಿಸುವುದಿಲ್ಲ.

ಹೋಟೆಲ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌ ಹಾಗೂ ಡಾಬಾ ಮತ್ತಿತರೆ ಕಡೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯುತ್ತಿದ್ದರೆ ಮಾಲೀಕರೇ ಪೊಲೀಸರಿಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಮಾಲೀಕರ ಮೇಲೂ ಪ್ರಕರಣ ದಾಖಲಿಸಲಾಗುವುದು ಮತ್ತು ಪರವಾನಿಗೆ ರದ್ದು ಮಾಡಲಾಗುವುದು . ಕೋವಿಡ್ ನಂತರದ ತಮ್ಮ ಪರಿಸರಕ್ಕೆ ಹೊಸದಾಗಿ ಬಂದಿರುವವರ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಎಸ್ಪಿ ಶ್ರೀನಿವಾಸ ಗೌಡ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.