ಚುನಾವಣಾ ಪ್ರಚಾರ ವೇಳೆ ಪಕ್ಷೇತರ ಅಭ್ಯರ್ಥಿಗೆ ಹೂಮಾಲೆ ಹಾಕಿ ಪೇಚಿಗೆ ಸಿಲುಕಿದ ಶ್ರೀರಾಮುಲು
Team Udayavani, Dec 21, 2021, 3:21 PM IST
ಗದಗ : ಗದಗ-ಬೆಟಗೇರಿ ನಗರಸಭೆ ಚುನಾವಣಾ ಪ್ರಚಾರದ ನಡೆಸಿದ ಸಾರಿಗೆ ಸಚಿವ ಶ್ರೀರಾಮುಲು ಅವರು ವಾರ್ಡ್ವೊಂದರಲ್ಲಿ ಪಕ್ಷೇತರ ಅಭ್ಯರ್ಥಿಗೆ ಹೂಮಾಲೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ.
ನಗರದ 15ನೇ ವಾರ್ಡ್ನಲ್ಲಿ ಸೋಮವಾರ ಸಂಜೆ ಚುನಾವಣಾ ಪ್ರಚಾರ ನಡೆಸಿದ ಸಚಿವ ಶ್ರೀರಾಮುಲು, ಪಕ್ಷದ ಅಭ್ಯರ್ಥಿ ಚಂದ್ರು ತಡಸದ ಅವರ ಪರ ಮತಯಾಚಿಸಿದರು. ಇದೇ ವೇಳೆ ಅದೇ ವಾರ್ಡ್ನ ಪಕ್ಷೇತರ ಅಭ್ಯರ್ಥಿ ವಿಶ್ವನಾಥ ಶೀರಿ ಆಗಮಿಸಿದ್ದು,ಈಹಿಂದೆ ರಾಮುಲು ಅವರು ಸಂಸದರಾಗಿದ್ದ ಸಂದರ್ಭದಲ್ಲಿ ರಾಮುಲು ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೋ, ಡಾ| ಅಂಬೇಡ್ಕರ್ ಅವರ ಪುಟ್ಟ ಪ್ರತಿಮೆ ಹಾಗೂ ಕೆಲ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು. ಅದಕ್ಕೆ ಮೆಚ್ಚುಗೆ ಸೂಚಿಸಿದ ಶ್ರೀರಾಮುಲು, ಏಕಾಏಕಿ ಹೂವಿನ ಹಾರ ಹಾಕಿದ್ದಾರೆ.
ರಾಮುಲು ಅವರ ಈ ನಡೆಯಿಂದ ಪಕ್ಷದ ಅಭ್ಯರ್ಥಿ ಹಾಗೂ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ಬಳಿಕ ಶೀರಿ ಪಕ್ಷೇತರ ಅಭ್ಯರ್ಥಿ ಎಂಬುದನ್ನು ತಿಳಿದ ಸಚಿವ ರಾಮುಲು ಪೇಚಿಗೆ ಸಿಲುಕಿದರು ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸ್ವತಂತ್ರ ಅಭ್ಯರ್ಥಿ ವಿಶ್ವನಾಥ ಶೀರಿ, ಅವರೊಟ್ಟಿಗೆ ತೆಗೆಸಿಕೊಂಡಿದ್ದ ನನ್ನ ಫೋಟೋ, ಅಂಬೇಡ್ಕರ್ ಪ್ರತಿಮೆಯನ್ನು ಅಭಿಮಾನದಿಂದ ನೀಡಿದ್ದೇನೆ. ಇಷ್ಟಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ವಜಾಗೊಂಡ ಸಾರಿಗೆ ನೌಕರರ ಮರು ನೇಮಕ: ಸಿಹಿ ಸುದ್ದಿ ನೀಡಿದ ಸಚಿವ ಶ್ರೀರಾಮುಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.