Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

ಸಂಪುಟದ ಮುಂದೆ 3 ಸಾಧ್ಯತೆ ಮಂಡಿಸಲು ನಿರ್ಧಾರ; ಸಿಎಂ ಜತೆಗೂ ಚರ್ಚೆ ನಡೆಸಲಿರುವ ಅರಣ್ಯ ಸಚಿವರು

Team Udayavani, Sep 21, 2024, 6:55 AM IST

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

ಬೆಂಗಳೂರು: ರಾಜ್ಯದ 11 ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿರುವ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸುವ ಸಾಧ್ಯತೆಯೇ ಅಧಿಕವಾಗಿದೆ.

ವರದಿ ಬಗ್ಗೆ ಅಧ್ಯಯ ನಡೆಸಲು ರಚಿಸಲಾಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದ ರಾಜ್ಯ ಸಂಪುಟ ಉಪ ಸಮಿತಿ ಸಭೆಯಲ್ಲಿ 3 ಸಾಧ್ಯತೆಗಳ ಬಗ್ಗೆ ಸಂಪುಟ ಸಮಿತಿಗೆ ಸಲ್ಲಿಸಲು ತೀರ್ಮಾನಿಸಿದೆ.

ಮುಂದಿನ ಗುರುವಾರ (ಸೆ.26) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪಸಮಿತಿ ವರದಿ ಸಲ್ಲಿಕೆಯಾಗಲಿದೆ. ಸಂಪುಟದ ನಿರ್ಣಯ ಆಧರಿಸಿ ಸೆ. 27ರಂದು ಕೇಂದ್ರ ಸರಕಾರಕ್ಕೆ ರಾಜ್ಯ ತನ್ನ ಅಭಿಪ್ರಾಯವನ್ನು ಸಲ್ಲಿಸಲಿದೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಗುರುವಾರ 11 ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳ ಜತೆಗೆ ರಾಜ್ಯ ಸರಕಾರ ಸಭೆ ನಡೆಸಿ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿತ್ತು. ಬಹುತೇಕರು ವರದಿಯ ತಿರಸ್ಕಾರಕ್ಕೆ ಸೂಚಿಸಿದ್ದರು. ಆದರೆ ಏಳನೆಯ ಬಾರಿಗೂ ಇದೇ ಕ್ರಮ ಅನುಸರಿಸಿದರೆ ಸುಪ್ರೀಂ ಕೋರ್ಟ್‌ನಲ್ಲಿ ಮುಖಭಂಗವಾಗಬಹುದೆಂಬ ಕಾರಣಕ್ಕೆ ಅರಣ್ಯ ಇಲಾಖೆ ಕೆಲ ಆಯ್ಕೆಗಳನ್ನು ಸೂಚಿಸಿತ್ತು.

ಶುಕ್ರವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಎಲ್ಲ ವಿಷಯಗಳು ಚರ್ಚೆ ಯಾಗಿವೆ. ಅಂತಿಮವಾಗಿ ಈ ಬಗ್ಗೆ ಸಂಪುಟವೇ ನಿರ್ಧಾರ ತೆಗೆದುಕೊಳ್ಳಲಿ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. 3 ಸಾಧ್ಯತೆಗಳನ್ನು ವರದಿಯಲ್ಲಿ ಸೂಚಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇವೆಲ್ಲದರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜತೆಗೆ ಚರ್ಚೆ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ನಿರ್ಧರಿಸಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಪಶ್ಚಿಮಘಟ್ಟಗಳ ರಕ್ಷಣೆ ಅನಿವಾರ್ಯವಾಗಿದ್ದು, ಕಠಿನ ಕ್ರಮ ಅನುಸರಿಸುವುದು ಅಗತ್ಯ ಎಂದು ಅರಣ್ಯ ಇಲಾಖೆ ಹೇಳಿದೆ. ಹೀಗಾಗಿ ಮಧ್ಯಮ ಮಾರ್ಗದ ಅನ್ವೇಷಣೆಗೆ ಸರಕಾರ ಮುಂದಾಗಿದ್ದು, ಜನ ಪ್ರತಿನಿಧಿಗಳ ಸಲಹೆಯನ್ನು ಗಮನ ದಲ್ಲಿಟ್ಟುಕೊಂಡು ಹೆಜ್ಜೆ ಇಡುವುದು ಅನಿವಾರ್ಯವಾಗಿದೆ.

ಸಾಧ್ಯತೆಗಳೇನು?
1.ಶಾಸಕರ ಆಗ್ರಹದಂತೆ ಕಸ್ತೂರಿರಂಗನ್‌ ವರದಿ ಅನುಷ್ಠಾನಕ್ಕೆ ಏಕಪಕ್ಷೀಯ ತಿರಸ್ಕಾರ
2.ವಿವಿಧ ಅರಣ್ಯ ಸ್ವರೂಪದಲ್ಲಿ ಇರುವ 16,000 ಚ.ಕೀ. ವ್ಯಾಪ್ತಿಯಲ್ಲಿರುವ ಹಳ್ಳಿಗಳನ್ನು ಹೊರಗಿಟ್ಟು ವರದಿ ಜಾರಿ
3.ಜನವಸತಿ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಸೇರಿದಂತೆ ಕೆಲ ರಿಯಾಯಿತಿ ಕೋರಿಕೆ

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.