ಬೀದಿ ದೀಪ, ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ


Team Udayavani, Jun 14, 2020, 5:14 AM IST

ಬೀದಿ ದೀಪ, ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ

ಹೆಮ್ಮಾಡಿ: ಮುಳ್ಳಿಕಟ್ಟೆ, ನಾಡಗುಡ್ಡೆ ಅಂಗಡಿಯಾಗಿ ಕೊಲ್ಲೂರು ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಆಲೂರು ಜಿಲ್ಲಾ ಮುಖ್ಯ ರಸ್ತೆಯ ದುರಸ್ತಿ ಸಹಿತ ಬೀದಿ ದೀಪ, ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಂಚಿನಕೊಡ್ಲು – ಆಲೂರು ಕ್ರಾಸ್‌ನಿಂದ ಕಳಿಯ ತನಕ ಚಿತ್ತೂರು, ವಂಡ್ಸೆ, ಆಲೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯನ್ನು ನೂರಾರು ಕುಟುಂಬಗಳು ಆಶ್ರಯಿಸಿದ್ದು, ಪ್ರತಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿವೆ.

ಸೂಚನಾ ಫಲಕವೂ ಇಲ್ಲ
ಆದರೆ ಈ ರಸ್ತೆಗೆ ದಾರಿದೀಪದ ವ್ಯವಸ್ಥೆಯಾ ಗಲಿ, ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ಮಾತ್ರವಲ್ಲದೆ ಸೂಚನಾ ಫಲಕ, ರಸ್ತೆತಡೆ ಸೂಚನೆ ಯಾವುದೂ ಇಲ್ಲ. ದಿನಂಪ್ರತಿ ಸಾವಿರಾರು ವಾಹನಗಳು ಈ ಮಾರ್ಗ ದಲ್ಲಿ ಸಂಚರಿಸುತ್ತಿದ್ದು ಅಪಘಾತಗಳು ಸಹ ಸಂಭವಿಸುತ್ತಲೇ ಇವೆ. ಕೆಲವೊಂದು ಕಡೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರು ರಸ್ತೆಯ ಮೇಲೆ ಹರಿದು ಹೋಗುತ್ತಿದ್ದು, ಕೆಲವೆಡೆ ಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ಇದೇ ಮಾರ್ಗ ದಲ್ಲಿ ಸರಕಾರಿ ಶಾಲೆ ಯೊಂದಿದ್ದು, ಅದರ ಸಮೀಪ ಸುರಕ್ಷತೆಯ ಬಗ್ಗೆ ರಸ್ತೆತಡೆ ಅಥವಾ ವೇಗಮಿತಿಗೆ ಸಂಬಂಧಪಟ್ಟಂತೆ ಯಾವುದೇ ಸೂಚನಾ ಫಲಕದ ವ್ಯವಸ್ಥೆಯೂ ಇಲ್ಲಿಲ್ಲ.

ಸೌಕರ್ಯ ಒದಗಿಸಿ
ಹಲವಾರು ಬಾರಿ ಸ್ಥಳೀಯ ನಾಗರಿಕರು ಜನಪ್ರತಿನಿಧಿಗಳಲ್ಲಿ ಅಧಿಕಾರಿಗಳಲ್ಲಿ ಈ ಬಗ್ಗೆ ತಮ್ಮ ಅಳಲು ತೋಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಈಗಲಾದರೂ ಈ ರಸ್ತೆಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು.
-ಎಚ್‌. ಆನಂದ ಮಡಿವಾಳ, ನ್ಯಾಯವಾದಿ, ಸ್ಥಳೀಯರು

ಚರಂಡಿ ನಿರ್ಮಾಣಕ್ಕೆ ಕ್ರಮ
ಆಲೂರು ಜಿಲ್ಲಾ ಮುಖ್ಯ ರಸ್ತೆಯ ಬಾಕಿ ಇರುವ ಕಡೆಗಳಲ್ಲಿ ಚರಂಡಿ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ಬೀದಿ ದೀಪಗಳನ್ನು ಸಂಬಂಧಪಟ್ಟ ಪಂಚಾ ಯತ್‌ ನವರು ವ್ಯವಸ್ಥೆ ಮಾಡಬೇಕು. ಇನ್ನು ಶಾಲೆಯ ಸಮೀಪ ಸೂಚನಾ ಫಲಕಗಳನ್ನು ಇಲಾಖೆಯಿಂದ ಮಾಡಲಾಗುವುದು.
-ದುರ್ಗಾದಾಸ್‌, ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.