Cyber: ಸೈಬರ್‌ ಕಳ್ಳರ ನಿಯಂತ್ರಣಕ್ಕೆ ಕಠಿನ ಕಾನೂನು ಬೇಕು


Team Udayavani, Nov 30, 2023, 12:35 AM IST

cyber fraud

ದೇಶದಲ್ಲಿ ಡಿಜಿಟಲ್‌ ವಹಿವಾಟು ಆರಂಭವಾದ ಮೇಲೆ, ಸೈಬರ್‌ ಕಳ್ಳರ ಅಬ್ಬರವೂ ಹೆಚ್ಚುತ್ತಿದ್ದು, ಮುಗ್ಧರ ಜತೆಗೆ ಕೆಲವೊಮ್ಮೆ ಸೈಬರ್‌ ಅಪರಾಧದ ಅರಿವು ಇದ್ದವರೂ ಹಣ ಕಳೆದುಕೊಳ್ಳುತ್ತಿರುವುದು ಮಾಮೂಲಿಯಾಗಿಬಿಟ್ಟಿದೆ. ಬ್ಯಾಂಕ್‌ ಖಾತೆಗೆ ಕನ್ನ ಹಾಕುವುದರಿಂದ ಹಿಡಿದು, ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ಗಳನ್ನು ಬಳಕೆದಾರರ ಅರಿವಿಗೆ ಬಾರದಂತೆಯೇ ಬಳಸಿ ಅಲ್ಲಿಂದಲೂ ಹಣ ಲಪಟಾಯಿಸಲಾಗುತ್ತಿದೆ.

ಸೈಬರ್‌ ಅಪರಾಧದಲ್ಲಿ ಕೇವಲ ಹಣಕಾಸು ವಂಚನೆಯಷ್ಟೇ ಬರುವುದಿಲ್ಲ. ಇದರ ಜತೆಗೆ ಹ್ಯಾಕಿಂಗ್‌, ಫಿಶಿಂಗ್‌, ವೈರಸ್‌ನಂಥ ಪ್ರಕರಣಗಳೂ ಇರುತ್ತವೆ. ಆದರೆ, ಒಟ್ಟಾರೆ ಸೈಬರ್‌ ಅಪರಾಧದಲ್ಲಿ ಶೇ.75ರಷ್ಟು ಪ್ರಕರಣಗಳು ಹಣಕಾಸು ವಂಚನೆಗೆ ಸೇರಿರುತ್ತವೆ ಎಂಬುದು ಅಧ್ಯಯನದಿಂದ ಗೊತ್ತಾಗಿದೆ. ಅಲ್ಲದೆ 2020ರ ಆರಂಭದಿಂದ 2023ರ ಜೂನ್‌ವರೆಗಿನ ದತ್ತಾಂಶದಲ್ಲಿ ಶೇ.50ರಷ್ಟು ಪ್ರಕರಣಗಳು ಯುಪಿಐ ಮತ್ತು ಇಂಟರ್ನೆಟ್‌ ಬ್ಯಾಂಕಿಂಗ್‌ಗೆ ಸಂಬಂಧಪಟ್ಟವುಗಳಾಗಿವೆ. 2019ರ ದತ್ತಾಂಶದ ಪ್ರಕಾರ, ದೇಶದಲ್ಲಿ ವರ್ಷಕ್ಕೆ 1.25 ಲಕ್ಷ ಕೋಟಿ ರೂ.ನಷ್ಟು ಸೈಬರ್‌ ವಂಚನೆಯಾಗುತ್ತದೆ.

ಕರ್ನಾಟಕದಲ್ಲಿಯೂ ಸೈಬರ್‌ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. 2022ರಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು, ಇತ್ಯರ್ಥವಾಗಿರುವ ಪ್ರಕರಣಗಳು ಕಡಿಮೆ ಇವೆ. ಕರ್ನಾಟಕದಲ್ಲಿ ನಡೆಯುವ ಒಟ್ಟಾರೆ ಸೈಬರ್‌ ಅಪರಾಧಗಳಲ್ಲಿ ಬೆಂಗಳೂರೊಂದರಲ್ಲೇ ಶೇ.80ರಷ್ಟು ಪ್ರಕರಣ ದಾಖಲಾಗುತ್ತವೆ. ಅದರಲ್ಲೂ ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಗಾಳ ಹಾಕುತ್ತಿದ್ದಾರೆ. ಹೆಚ್ಚಾಗಿ ಮಹಿಳೆಯರೇ ಸೈಬರ್‌ ವಂಚನೆಯ ಜಾಲಕ್ಕೆ ಬೀಳುತ್ತಾರೆ. ಅಲ್ಲದೆ ರಾಜಕಾರಣಿಗಳು, ಅಧಿಕಾರಿಗಳು, ಸಿನೆಮಾ ತಾರೆಯರು ಕೂಡ ಐಟಿ ಅಪರಾಧದ ಸುಳಿಗೆ ಸಿಲುಕುತ್ತಿದ್ದಾರೆ.

ಪ್ರಸಕ್ತ ವರ್ಷ ಕರ್ನಾಟಕದಲ್ಲಿ ಜನವರಿಯಿಂದ ಸೆಪ್ಟಂಬರ್‌ವರೆಗೆ 470 ಕೋಟಿ ರೂ.ನಷ್ಟು ಹಣವನ್ನು ಸೈಬರ್‌ ಕಳ್ಳರು ದೋಚಿದ್ದಾರೆ. ಅಂದರೆ ಉಚಿತವಾಗಿ ಏನನ್ನಾದರೂ ನೀಡುತ್ತೇವೆ, ಆನ್‌ಲೈನ್‌ ಉದ್ಯೋಗ ವಂಚನೆ, ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ ವಂಚನೆ, ಕ್ರಿಪ್ಟೋಕರೆನ್ಸಿ ಹೂಡಿಕೆ ಮತ್ತು ಲೈಂಗಿಕ ಆಸೆ ತೋರಿಸಿ ಹಣ ದೋಚುವ ಪ್ರಕರಣಗಳು ನಡೆಯುತ್ತಿವೆ. ಮೊದಲೇ ಹೇಳಿದ ಹಾಗೆ, ಈ ವಂಚನೆಯ ಜಾಲಕ್ಕೆ ಹೆಚ್ಚು ಕಲಿತವರೇ ಹೆಚ್ಚಾಗಿ ಬೀಳುತ್ತಿದ್ದಾರೆ. ಹೀಗಾಗಿ, ಸೈಬರ್‌ ಅಪರಾಧ ಗೊತ್ತಿದ್ದವರೇ ಹೆಚ್ಚು ವಂಚನೆಗೊಳಗಾಗುತ್ತಿರುವುದರಿಂದ ಈಗಷ್ಟೇ ಆನ್‌ಲೈನ್‌ ವ್ಯವಹಾರ ಶುರು ಮಾಡಿರುವವರಿಗೆ ಮಾಡಿರುವ ವಂಚನೆ ಗೊತ್ತಾಗದೇ ಇರುವ ಸಂಗತಿಗಳೂ ಇರುತ್ತವೆ.

ಸೈಬರ್‌ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕು. ಜನ ಕೂಡ ತಮ್ಮ ಮೊಬೈಲ್‌ ಅನ್ನು ಹೆಚ್ಚು ಎಚ್ಚರಿಕೆಯಿಂದ ಬಳಕೆ ಮಾಡಬೇಕು. ಆಧಾರ್‌ ಸೇರಿದಂತೆ ತಮ್ಮ ಗುರುತಿನ ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಬಾರದು. ಆಧಾರ್‌ ನಂಬರ್‌ ಮತ್ತು ಬಯೋಮೆಟ್ರಿಕ್‌ ದತ್ತಾಂಶವನ್ನು ಲಾಕ್‌ ಮಾಡಿ ಇಡಬೇಕು. ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ ಬಳಕೆ ಮಾಡುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಸಾಧ್ಯವಾದಷ್ಟು ಮೊಬೈಲ್‌ನಲ್ಲಿರುವ ಈ ಕಾರ್ಡ್‌ಗಳ ಆ್ಯಪ್‌ ಮೂಲಕ ಲಾಕ್‌ ಮಾಡಿಕೊಳ್ಳಬೇಕು. ಸರಕಾರದ ಜತೆಯಲ್ಲಿ ಜನರೂ ಎಚ್ಚರಿಕೆಯಿಂದ ಇದ್ದರೆ ಮಾತ್ರ ಸೈಬರ್‌ ವಂಚನೆ ತಡೆಯಲು ಸಾಧ್ಯ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.