CM ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಲ್ಲ: ಆರ್‌. ಅಶೋಕ್‌


Team Udayavani, Jul 12, 2024, 11:04 PM IST

CM ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಲ್ಲ: ಆರ್‌. ಅಶೋಕ್‌

ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಸಾವಿರಾರು ಕೋಟಿ ರೂ. ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸಿ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

ಮಹಾರಾಜ ಕಾಲೇಜು ಮೈದಾನದ ಬಳಿ ಆಯೋಜಿಸಿದ್ದ ಪ್ರತಿಭಟನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ. ಹಗರಣದಲ್ಲಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ನಿವೇಶನಗಳನ್ನು ಕಾನೂನಾತ್ಮಕವಾಗಿ ಪಡೆದುಕೊಂಡಿದ್ದೇವೆ ಎಂದು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾನೂನು ಬಾಹಿರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ನಿವೇಶನ ಪಡೆದಿರುವುದರಿಂದ ರಾಜೀನಾಮೆ ಕೊಡುವ ತನಕ ಹೋರಾಟ ಮುಂದುವರಿಯಲಿದೆ. ವಾಲ್ಮೀಕಿ ನಿಗಮ, ಮುಡಾ ಹಗರಣವನ್ನು ಸದನದಲ್ಲಿ ಪ್ರಸ್ತಾವಿಸುತ್ತೇವೆ ಎಂದು ಹೇಳಿದರು.

ನಾನು ಹಿಂದುಳಿದ ನಾಯಕನಾಗಿರು ವುದರಿಂದ ಬಿಜೆಪಿಯವರು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಈಗ ಜಾತಿ ಅಸ್ತ್ರ ಬಳಸಿ ರಕ್ಷಿಸಿಕೊಳ್ಳಲು ಮುಂದಾಗಿ¨ªಾರೆ. ಕಾಂಗ್ರೆಸ್‌ನಲ್ಲಿರುವ ಬಿ.ಕೆ.ಹರಿಪ್ರಸಾದ್‌ ಅವರೇ ನಾನೊಬ್ಬ ಅತಿ ಹಿಂದುಳಿದ ವರ್ಗಗಳ ನಾಯಕನೆಂದು ಹೇಳಿದ್ದಾರೆ. ಅಲ್ಲದೆ ಬಿಜೆಪಿಯವರು ಬಿಟ್ಟರೂ ನಾನು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ಅವರನ್ನು ತುಳಿಯುವ ಪ್ರಶ್ನೆಯೇ ಬರುವುದಿಲ್ಲ ಎಂದರು.

ಗೂಡ್ಸ್‌ ಆಟೋದಲ್ಲಿ ಬಂದ ಅಶೋಕ್‌, ಅಶ್ವತ್ಥನಾರಾಯಣ
ಮೈಸೂರು: ನಗರದಲ್ಲಿ ಬಿಜೆಪಿ ಕರೆ ನೀಡಿದ್ದ ಬೃಹತ್‌ ಪ್ರತಿಭಟನೆಗೆ ಚಾಮರಾಜನಗರ, ಮಂಡ್ಯ, ಮೈಸೂರು ಮುಂತಾದ ವಿವಿಧ ಭಾಗಗಳಿಂದ ಆಗಮಿಸುತ್ತಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಅಲ್ಲಲ್ಲಿ ಸ್ಥಳೀಯ ಪೊಲೀಸರು ತಡೆದು, ವಶಕ್ಕೆ ತೆಗೆದುಕೊಂಡು ಬಿಜೆಪಿಯ ಪ್ರಯತ್ನಕ್ಕೆ ಅಡ್ಡಗಾಲು ಹಾಕಿದರು. ಪ್ರತಿಭಟನೆಗೂ ಮುನ್ನವೇ ಸರಕಾರ ತಡೆಯೊಡ್ಡಿದ್ದಲ್ಲದೇ, ಪ್ರಮುಖ ನಾಯಕರನ್ನು ವಶಕ್ಕೆ ಪಡೆಯುತ್ತಿರುವುದನ್ನು ಗಮನಿಸಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಶಾಸಕ ಅಶ್ವತ್ಥ ನಾರಾಯಣ ಗೂಡ್ಸ್‌ ಆಟೋದಲ್ಲಿ ಮೈಸೂರಿಗೆ ಆಗಮಿಸಿದರು.

ಮೈಸೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಹಲವು ಕಾರ್ಯಕರ್ತರನ್ನು ಬೆಂಗಳೂರಿನ ಕುಂಬಳಗೂಡಿನಲ್ಲಿ ವಶಕ್ಕೆ ಪಡೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಆರ್‌. ಅಶೋಕ್‌, ಅಶ್ವತ್ಥ ನಾರಾಯಣ ಅವರು ಪ್ರತಿಭಟನ ಸ್ಥಳಕ್ಕೆ ಗೂಡ್ಸ್ ಆಟೋ ಏರಿ ಆಗಮಿಸಿದರು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

R-Ashok

CM ಕುರ್ಚಿಗೆ ಕಾಂಗ್ರೆಸ್ಸಿಗರ ಕಾದಾಟ: ಆರ್‌.ಅಶೋಕ್‌ ವ್ಯಂಗ್ಯ

1-hunsur

Hunsur ನಗರಸಭೆ; ಎನ್‌ಡಿಎ ಪಾಲಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ:ಕೈ ಪ್ರತಿಭಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.