ವಿದ್ಯಾರ್ಥಿ ನಿಲಯ ಆರಂಭ ಮಾರ್ಗಸೂಚಿ ಗೊಂದಲ!

ಸೋಂಕುಪೀಡಿತರು ಬಳಸಿದ್ದ ವಸ್ತುಗಳ ಮರುಬಳಕೆಗೆ ಆದೇಶ

Team Udayavani, Nov 22, 2020, 6:40 AM IST

ವಿದ್ಯಾರ್ಥಿ ನಿಲಯ ಆರಂಭ ಮಾರ್ಗಸೂಚಿ ಗೊಂದಲ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ.

ಬೆಂಗಳೂರು: ಕಾಲೇಜು ಆರಂಭವಾದ ಹಿಂದೆಯೇ ವಿದ್ಯಾರ್ಥಿ ನಿಲಯಗಳ ಬಾಗಿಲು ತೆರೆಯಲು ಸರಕಾರ ಸಿದ್ಧತೆ ನಡೆಸಿದೆ. ಆದರೆ ಕೊರೊನಾ ಸಂದರ್ಭದಲ್ಲಿ ಇದೇ ವಿದ್ಯಾರ್ಥಿ ನಿಲಯಗಳು ಕ್ವಾರಂಟೈನ್‌ ಮತ್ತು ಕೋವಿಡ್‌ ಆರೈಕೆ ಕೇಂದ್ರಗಳಾಗಿದ್ದು, ಬಳಸಲಾಗಿದ್ದ ಹಾಸಿಗೆ, ಹಾಸು, ದಿಂಬು, ಹೊದಿಕೆಗಳನ್ನು ತೊಳೆದು ಮರುಬಳಸಲು ನಿರ್ದೇಶನ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯ ಆರಂಭಕ್ಕೆ ರಾಜ್ಯ ಸರಕಾರ ಸುರಕ್ಷಾ ಮಾರ್ಗಸೂಚಿ (ಎಸ್‌ಒಪಿ) ಸಿದ್ಧಪಡಿ ಸಿ ದೆ. ಇದರಲ್ಲಿ ಬಳಕೆ ಮಾಡಿರುವ ಬಟ್ಟೆಗಳನ್ನು ಡಿಟರ್ಜಂಟ್‌ನೊಂದಿಗೆ ಬಿಸಿ ನೀರಿನಲ್ಲಿ ತೊಳೆದು ಮರು ಬಳಕೆ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ.

ವಸತಿ ಶಾಲೆ ಅಥವಾ ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್‌ ಇರುವ ವ್ಯಕ್ತಿ ವಾಸವಾಗಿದ್ದರೆ ಅಲ್ಲಿನ ಹಾಸಿಗೆ, ಹಾಸಿಗೆ ಹಾಸು, ದಿಂಬು, ದಿಂಬಿನ ಕವರ್‌, ಹೊದಿಕೆಗಳನ್ನು ಡೆಟಾಲ್‌ ಅಥವಾ ಸ್ಯಾವಲಾನ್‌ ಮಿಶ್ರಿತ ಬಿಸಿ ನೀರಿನಲ್ಲಿ ನೆನೆಸಿ, ಡಿಟರ್ಜಂಟ್‌ನಿಂದ ತೊಳೆದು, ಬಿಸಿಲಿನಲ್ಲಿ ಒಣಗಿಸಿ, ಇಸ್ತ್ರಿ ಮಾಡಿಸಿ, ಮರು ಬಳಕೆ ಮಾಡುವಂತೆ ಎಸ್‌ಒಪಿಯಲ್ಲಿ ಉಲ್ಲೇಖೀಸಲಾಗಿದೆ.

ಹಾಸ್ಟೆಲ್‌ನಲ್ಲೇ ಐಸೊಲೇಶನ್‌
ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಅಥವಾ ಸಿಬಂದಿಗೆ ಕೊರೊನಾ ಲಕ್ಷಣ ಕಂಡುಬಂದಲ್ಲಿ ತತ್‌ಕ್ಷಣವೇ ಸೂಕ್ತ ಚಿಕಿತ್ಸೆ ಪಡೆಯಲು ಸೂಚಿಸಬೇಕು. ಅಂಥ ವಿದ್ಯಾರ್ಥಿಗಳಿಗೆ ಒಂದು ಕೊಠಡಿಯನ್ನು ಐಸೊಲೇಶನ್‌ ಕೊಠಡಿಯಾಗಿ ಪರಿವರ್ತಿಸಬೇಕು. ಪಾಸಿಟಿವ್‌ ಇರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಉಳಿಯಲು ಅವಕಾಶ ನೀಡಬಾರದು, ತತ್‌ಕ್ಷಣ ಕೋವಿಡ್‌ ಕೇರ್‌ ಸೆಂಟರ್‌ ಅಥವಾ ಕೋವಿಡ್‌ ಆಸ್ಪತ್ರೆಗೆ ಸೇರಿಸಬೇಕು ಎಂದು ಸೂಚಿಸಲಾಗಿದೆ.

ಮುಚ್ಚಳಿಕೆ ಕಡ್ಡಾಯ
ಮಧುಮೇಹ, ಮೂತ್ರಪಿಂಡದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ ಇತ್ಯಾದಿ ಗಂಭೀರ ಕಾಯಿಲೆ ಅಥವಾ ಸಮಸ್ಯೆಯಿಂದ ವಿದ್ಯಾರ್ಥಿಗಳು ಬಳಲುತ್ತಿಲ್ಲ ಎಂಬ ಬಗ್ಗೆ ಮುಚ್ಚಳಿಕೆ ಪಡೆದ ಅನಂತರವೇ ಪ್ರವೇಶ ನೀಡಬೇಕು. ವಿದ್ಯಾರ್ಥಿ ನಿಲಯಕ್ಕೆ ಸೇರುವ ಬಗ್ಗೆ ಪಾಲಕರಿಂದಲೂ ಕಡ್ಡಾಯವಾಗಿ ಒಪ್ಪಿತ ಪತ್ರ ಪಡೆಯಬೇಕು. ಕೊರೊನಾ ಪರೀಕ್ಷೆ ಮಾಡಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವಂತೆ ಎಸ್‌ಒಪಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.