Bajpe: ಸರಕಾರಿ ಶಾಲೆ ವಿದ್ಯಾರ್ಥಿಗಳಿಂದ ಸುದ್ದಿ ವಾಹಿನಿ!

"ನಮ್ಮ ಶಾಲಾ ವಾರ್ತೆಗಳು': ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆ ಮಕ್ಕಳ ಸಾಧನೆ

Team Udayavani, Aug 5, 2024, 3:26 PM IST

Screenshot (98)

ಬಜಪೆ: ಮುಂದುವರಿದ ಸಮಾಜದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಅದರಲ್ಲೂ ಸರಕಾರಿ ಶಾಲೆಯ ಮಕ್ಕಳು ನಗರದ ಮಕ್ಕಳಿಗೆ ಸರಿಸಮನಾಗಿ ಬೆಳೆಯ ಬೇಕು ಎಂಬ ದೂರದೃಷ್ಟಿಯಿಂದ ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯಲ್ಲಿ “ನಮ್ಮ ಶಾಲಾ ವಾರ್ತೆಗಳು’ ಯೂಟ್ಯೂಬ್‌ ಸುದ್ದಿ ವಾಹಿನಿಯನ್ನು ಆರಂಭಿಸಲಾಗಿದೆ.

ಪಠ್ಯದ ಜತೆ ಜತೆಯಲ್ಲಿ ಮಕ್ಕಳಲ್ಲಿ ಹಿಂಜರಿಕೆ ದೂರ ಮಾಡುವುದು, ಭಾಷಾ ಶುದ್ಧಿ, ಚಿಂತನಾ ಲಹರಿ, ಸಾಮಾನ್ಯ ಜ್ಞಾನ ವೃದ್ಧಿ ಇತ್ಯಾದಿ ಸಂಕಲ್ಪ ಈ ಸುದ್ದಿ ವಾಹಿನಿ ಆರಂಭದ ಹಿಂದೆ ಇದೆ. ಮುಖ್ಯಶಿಕ್ಷಕಿ ಇಂದಿರಾ ಎನ್‌. ರಾವ್‌ ಮತ್ತು ಶಿಕ್ಷಕರು ಮಕ್ಕಳಿಗೆ ತರಬೇತಿ ಹಾಗೂ ಮಾರ್ಗ ದರ್ಶನ ನೀಡಿ ಮುನ್ನಡೆಸುತ್ತಿದ್ದಾರೆ.

ಚಟುವಟಿಕೆ ಹೀಗಿದೆ…

ಮೊದಲ ಹಂತದಲ್ಲಿ ತಲಾ 10 ವಿದ್ಯಾರ್ಥಿಗಳ ತಂಡವನ್ನು ರಚಿಸಿ ಶಾಲೆಯಲ್ಲಿ ತಿಂಗಳ ಅವಧಿಯಲ್ಲಿ ಆಯೋಜಿಸಿದ ಪಠ್ಯ ಹಾಗೂ ಪಠ್ಯಪೂರಕ ಚಟುವಟಿಕೆಗಳ ಕಾರ್ಯಕ್ರಮಗಳ ವರದಿಗಳನ್ನು ತಯಾರಿಸುವಂತೆ ಸೂಚಿಸಲಾಗುತ್ತದೆ. ಕನ್ನಡ ಭಾಷಾ ಶಿಕ್ಷಕಿ ವಿದ್ಯಾಗೌರಿ ಮಾರ್ಗದರ್ಶನ ನೀಡುತ್ತಾರೆ.

ವಿದ್ಯಾರ್ಥಿಗಳು ಸಿದ್ಧಪಡಿಸಿದ ವರದಿಗಳನ್ನು ಮರುಓದಿನ ಮುಖಾಂತರ ಸಂಕ್ಷಿಪ್ತಗೊಳಿಸಿ ವ್ಯಾಕರಣಬದ್ಧವಾಗಿ ನೇರ್ಪುಗೊಳಿಸಲಾಗುತ್ತದೆ. ಪರಿಷ್ಕೃತ ವರದಿಯನ್ನು ವಾರ್ತಾ ಪ್ರಸಾರದ ಸಂದರ್ಭ ಹಿನ್ನೆಲೆ ಧ್ವನಿಯಾಗಿ ಹೇಗೆ ಪ್ರಸ್ತುತಪಡಿಸಬೇಕು ಎನ್ನುವುದನ್ನು ಇಬ್ಬರು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಲಾ ಗುತ್ತದೆ.

ಶಾಲೆಯ ಕಂಪ್ಯೂಟರ್‌ ಕೊಠಡಿಯಲ್ಲಿ ಗ್ರೀನ್‌ ಸ್ಕ್ರೀನ್‌ ಬಳಸಿ ಶಿಕ್ಷಕರ ಮೊಬೈಲ್‌ನಲ್ಲಿ ವಿದ್ಯಾರ್ಥಿ ಓದುತ್ತಿರುವ ವಾರ್ತೆಯನ್ನು ಮುದ್ರಿಸಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಓದಿದ ವಾರ್ತೆಗಳ ಧ್ವನಿ ಹಾಗೂ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿರುವ ಕಾರ್ಯಕ್ರಮಗಳ ವೀಡಿಯೋವನ್ನು ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ದೊರೆಯುವ ವಿನ್‌ ಆ್ಯಪ್‌ ಮೂಲಕ ಸಂಯೋಜಿಸಲಾಗುತ್ತದೆ.

ಸುದ್ದಿಗೆ ಪೂರಕ ಅಡಿಬರೆಹಗಳನ್ನು ಶಿಕ್ಷಕಿ ರಮ್ಯಾ ಮಾರ್ಗದರ್ಶನದಲ್ಲಿ ತಯಾರಿಸಿ ವರದಿಗೆ ಅಂತಿಮ ರೂಪ ನೀಡಲಾಗುತ್ತದೆ. ಬಳಿಕ ಡಾ| ಅನಿತ್‌ಕುಮಾರ್‌ ಮಾರ್ಗ ದರ್ಶನದಲ್ಲಿ ಸಂಕಲನ ಕಾರ್ಯವನ್ನು ಪೂರೈಸಿ ಶಾಲೆಯ ಯೂಟ್ಯೂಬ್‌ ಚಾನೆಲ್‌ಗೆ ಅಪ್‌ಲೋಡ್‌ ಮಾಡಲಾಗುತ್ತದೆ. ಅದರ ಲಿಂಕ್‌ ಅನ್ನು ಪ್ರತೀ ತರಗತಿಯ ವಿದ್ಯಾರ್ಥಿಗಳ ಹೆತ್ತವರು / ಶಿಕ್ಷಕರು ಇರುವ ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳಲ್ಲಿ ಹಂಚಲಾಗುತ್ತದೆ.

ಸಕಾರಾತ್ಮಕ ಚಟುವಟಿಕೆ ತೊಡಗಿ

ಪ್ರೌಢಾವಸ್ಥೆಯಲ್ಲಿ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಕ್ಕೆ ಶೀಘ್ರವಾಗಿ ಹೊಂದಿಕೊಳ್ಳುತ್ತಾರೆ ಪ್ರತಿಯೊಬ್ಬರಿಗೂ ಬೆರಳ ತುದಿಯಲ್ಲಿ ಲಭಿಸುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿದ್ಯಾರ್ಥಿ ಗಳನ್ನು ಈ ರೀತಿಯ ಸಕಾರಾತ್ಮಕ ಚಟುವ ಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವುದು ಎಲ್ಲ ಶಿಕ್ಷಕರ ಅಭಿಪ್ರಾಯ. ಒಂದು ವರ್ಷದಲ್ಲಿ 100 ಮಂದಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮೊದಲ ಶಾಲಾ ವಾರ್ತೆ ಸಂಚಿಕೆಯಲ್ಲಿ ವಿದ್ಯಾರ್ಥಿಗಳಾದ ಮೇಘನಾ, ಹರ್ಷಿತಾ, ಅನ್ವಿತಾ, ಆಶಾಲತಾ, ದರ್ಶಿನಿ, ವೀಕ್ಷಿತಾ, ಅಕ್ಕಮಾದೇವಿ, ಪ್ರತೀಕ್ಷಾ, ಸೃಷ್ಟಿ, ಮೌಲ್ಯಾ, ಅಪ್ಸಾನಾ ಬಾನು, ಸಾನ್ವಿ ಪಾಲ್ಗೊಂಡಿದ್ದಾರೆ.

ತಂತ್ರಜ್ಞಾನ ಸದ್ಬಳಕೆ

ಗ್ರಾಮೀಣ ವಿದ್ಯಾರ್ಥಿಗಳಾದರೂ ತಂತ್ರಜ್ಞಾನವನ್ನು ಬಳಸಿಕೊಂಡು ನಗರದ ವಿದ್ಯಾರ್ಥಿಗಳಿಗೆ ನಾವೇನೂ ಕಮ್ಮಿಯಿಲ್ಲ ಎಂಬುದನ್ನು ನಮ್ಮ ಶಾಲೆಯ ಮಕ್ಕಳು ತೋರಿಸಿಕೊಟ್ಟಿದ್ದಾರೆ. ಶಾಲೆಯಲ್ಲಿ ನಡೆಯುವ ಪ್ರತೀ ತಿಂಗಳಿನ ಕಾರ್ಯಕ್ರಮಗಳನ್ನು ಚಿತ್ರೀಕರಿಸಿಕೊಂಡು ಟಿವಿ ವಾಹಿನಿಗಳ ಮಾದರಿಯಲ್ಲೇ ವಾರ್ತೆಯ ರೂಪದಲ್ಲಿ “ನಮ್ಮ ಶಾಲಾ ವಾರ್ತೆಗಳು’ ಚಾನೆಲ್‌ ಮೂಲಕ ಬಿತ್ತರಿಸುತ್ತಿದ್ದಾರೆ.

-ಇಂದಿರಾ ಎನ್‌. ರಾವ್‌, ಮುಖ್ಯಶಿಕ್ಷಕಿ

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.