ಕೊರಟಗೆರೆ: ಸರಕು ವಾಹನದಲ್ಲಿ ಪ್ರಾಣಿಗಳಂತೆ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು!


Team Udayavani, Mar 13, 2022, 5:07 PM IST

1-wqwr

ಕೊರಟಗೆರೆ: ಸರ್ಕಾರ ನೀಡುವ ಹಣವನ್ನು ದುರುಪಯೋಗ ಮಾಡಿಕೊಳ್ಳಲು ಪರೀಕ್ಷೆಗೆ ಹೋಗುವ 72 ಶಾಲಾ ಮಕ್ಕಳನ್ನು ಚಿಕ್ಕ ಸರಕು ವಾಹನಗಳಲ್ಲಿ ಪ್ರಾಣಿಗಳನ್ನು ತುಂಬುವ ಹಾಗೆ ತುಂಬಿ 16 ಕಿ.ಮೀ ಸಾಗಿಸಿರುವ ಘಟನೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ 72 ಪಿ.ಯು.ಸಿ ವಿದ್ಯಾರ್ಥಿಗಳು ಪ್ರಯೋಗಿಕ ಪರೀಕ್ಷೆ ಬರೆಯಲು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬರಬೇಕಿತ್ತು, ಅವರನ್ನು ಜವಾಬ್ದಾರಿಯಿಂದ ಪ್ರಾಯಾಣಿಕ ವಾಹನದಲ್ಲಿ ಕಳುಹಿಸಬೇಕಾಗಿರುವುದು ವಸತಿ ಕಾಲೇಜಿನ ಪ್ರಾಂಶುಪಾಲರ ಜವಾಬ್ದಾರಿಯಾಗಿದೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ, ಆದರೆ ಕೆಲವು ದಿನಗಳ ಹಿಂದೆ ವಸತಿ ಕಾಲೇಜಿನವರು ಹಣ ಉಳಿಸುವ ದೆಸೆಯಿಂದ ಕಾಲೇಜಿನ 37 ಹೆಣ್ಣು ಮಕ್ಕಳು ಹಾಗೂ 35 ಗಂಡು ಮಕ್ಕಳನ್ನು ಬೈಚಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವರೆಗೆ 16 ಕಿ.ಮಿ. ನಷ್ಟು ದೂರವನ್ನು ಚಿಕ್ಕ ಸರಕು ವಾಹನದಲ್ಲಿ ಪ್ರಾಣಿಗಳಂತೆ ತುಂಬಿ ನಿಲ್ಲಿಸಿಕೊಂಡು ಬಂದು ಇಳಿಸಿರುತ್ತಾರೆ. ಆ ಮಕ್ಕಳು ದಿನವಿಡೀ ನಿಂತುಕೊಂಡು ಅಂದು ಭೌತ ಶಾಸ್ತ್ರ ರಸಾಯನಶಾಸ್ತ್ರ, ಜೀವಶಾಸ್ತ್ರದ ಪ್ರಯೋಗಾಲಯದಪರೀಕ್ಷೆಯಲ್ಲಿ ಭಾಗಿಯಾಗಿ ಮತ್ತೆ ಕುರಿಗಳ ಹಾಗೆ ನಿಂತು ಕೊಂಡು ಹೋಗಬೇಕು, ಇದನ್ನು ಬೆಳಿಗ್ಗೆ ಗಮನಿಸಿ ಸಂಜೆಯವರೆಗು ಕಾಯ್ದು ಪತ್ರಿಕೆಯವರು ಪ್ರಶ್ನಿಸಿದಾಗ ಆಗ ಪ್ರಾಂಶುಪಾಲರು ಬಸ್ಸಿನಲ್ಲಿ ಕರೆದುಕೊಂಡು ಬರುವಂತೆ ವಿದ್ಯಾರ್ಥಿನಿಯರೊಂದಿಗೆ ಬಂದಿರುವ ಶಿಕ್ಷಕಿಗೆ ದೂರವಾಣಿ ಕರೆ ಮಾಡುತ್ತಾರೆ.

ಈಗಾಗಲೇ ಅಂತಿಮ ಹಂತದ ಪರೀಕ್ಷೆ ಬರೆಯಲು ಸಜ್ಜಾಗಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಈ ಸರಕು ತುಂಬಿರುವ ಚಿಕ್ಕವಾಹನಗಳಲ್ಲಿ ತಕ್ಷಣ ಬ್ರೇಕ್ ಹೊಡೆದರೆ, ಇಲ್ಲ ಆಯ ತಪ್ಪಿ ಉರುಳಿದರೆ  ಆ ಮಕ್ಕಳ ಗತಿ ಮತ್ತು ಭವಿಷ್ಯವೇನು ?  ಅವರಿಗೆ ಕಾನೂನು ರಕ್ಷಣೆ ಹೇಗೆ ಎನ್ನುವ ಪರಿಜ್ಞಾನವೂ ಪ್ರಾಂಶುಪಾಲರಿಗೆ ಇಲ್ಲವೇ ಎನ್ನುವಂತಾಗಿದೆ. ಈ ಘಟನೆ ಬಗ್ಗೆ ವಸತಿ ಶಾಲೆಯ ಪ್ರಾಂಶುಪಾಲರು ಇದರಿಂದ ತಪ್ಪಿಸಿಕೊಳ್ಳಲು ಕುಂಟು ನೆಪ ಹೇಳುತ್ತಿದ್ದಾರೆ.

ತಾಲ್ಲೂಕಿನ ಬಹುತೇಕ ವಸತಿ ಶಾಲೆಗಳು ಪಟ್ಟಣ ಮತ್ತು ಗ್ರಾಮಗಳ ಹೊರಬಾದಲ್ಲಿದೆ. ಅವರುಗಳಿಗಿಲ್ಲದ ಅವ್ಯವಸ್ಥೆ ಈ ಕಾಲೇಜಿನ ಪ್ರಾಂಶುಪಾಲರಿಗೆ ಬಂದಂತಾಗಿದೆ. ಸರ್ಕಾರವು ವಸತಿ ಶಾಲೆಗಳ ವಿದ್ಯಾಭ್ಯಾಸಕ್ಕೆ, ವಿದ್ಯಾರ್ಥಿಗಳ ಆರೋಗ್ಯ ಮತ್ತು ರಕ್ಷಣೆಗೆ ಸಾಕಷ್ಟು ಹಣವನ್ನು ನೀಡುತ್ತಿದೆ. ಆದರೆ ಬೈಚಾಪುರದ ಮುರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲರಂಥಹ ವ್ಯಕ್ತಿಗಳು ಅದರಲ್ಲಿ ಬರುವ ಹಣವನ್ನು ಈ ತರಹದ ದುರುಪಯೋಗ ಮಾಡಿಕೊಳ್ಳುತ್ತಾರೆ. ಒಂದುವೇಳೆ ಇಂತಹ ಪರಿಸ್ಥಿತಿಗಳಲ್ಲಿ ಅಪಘಾತ ಮತ್ತು ಅವಗಡಗಳಾದರೆ ಮಕ್ಕಳ ಭವಿಷ್ಯಕ್ಕೆ ಜವಾಬ್ದಾರಿ ಯಾರು ಎನ್ನುವುದು ಪ್ರಶ್ನೆಯಾಗಿದೆ. ಕ್ಷೇತ್ರದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಘಟನೆ ಬಗ್ಗೆ ಪರಿಶೀಲಿಸಿ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತೊಂದು ಕಾಲೇಜಿನ ಪ್ರಾಂಶುಪಾಲರು ಈ ರಿತಿಯ ಬೇಜವಾಬ್ದಾರಿ ಕರ್ತವ್ಯ ಲೋಪವನ್ನು ಮಾಡುತ್ತಾರೆ.

ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ಸರಕು ವಾಹನದಲ್ಲಿ ತುಂಬಿಕೊಂಡು ಬರುವುದು ತಪ್ಪು. ಈ ಘಟನೆಯನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸುತ್ತೇನೆ. – ಡಾ.ಜಿ. ಪರಮೇಶ್ವರ, ಶಾಸಕ

ಎಂಡಿಆರ್‌ಎಸ್ ಬೈಚಾಪುರ ಕಾಲೇಜಿನ ೩೭ ವಿದ್ಯಾರ್ಥಿನಿಯರನ್ನು ಚಿಕ್ಕ ಸರಕು ವಾಹನದಲ್ಲಿ ೧೬ ಕಿ.ಮೀ ಪ್ರಯಾಣಮಾಡಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ವಿದ್ಯಾರ್ಥಿನಿಯರ ಸುರಕ್ಷತೆಯಿಂದ ತಪ್ಪಾಗಿದ್ದು ಈ ಸಂಬಂಧ ಸದರಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.– ನಾಹಿದಾ ಜಮ್ ಜಮ್, ತಹಶೀಲ್ದಾರ್

ಈ ಸಂಬಂಧ ಪ್ರಾಂಶುಪಾಲರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗುವುದು. ಜಿಲ್ಲೆಯ ಎಲ್ಲಾ ವಸತಿ ಶಾಲೆಯ ಪ್ರಾಂಶುಪಾಲರಿಗೆ ಇನ್ನು ಮುಂದೆ ಈರೀತಿ ನಡೆದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ. – ಪ್ರೇಮಾ ಟಿ.ಎಲ್. ಜಂಟಿ ನಿರ್ದೇಶಕಿ, ಸಮಾಜ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.