ಮನೆಗಳಿಂದಲೇ ಎಸ್ ಯುಸಿಐ ಪಕ್ಷದ ಪ್ರತಿಭಟನೆ


Team Udayavani, Jan 24, 2022, 10:04 AM IST

1protest

ವಾಡಿ:  ಭೂಸುದಾರಣೆ ತಿದ್ದುಪಡಿ, ಜಾನುವಾರು ಹತ್ಯೆ ನಿಷೇಧ ಕಾಯಿದೆ ವಾಪಸ್ ಪಡೆಯಬೇಕು. ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ಮತ್ತು ನೆರವು ನೀಡಬೇಕು. ಕೊರೊನಾ ಸೊಂಕಿತರು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳ ಶಿಕ್ಷಣದ ಶುಲ್ಕ ಮನ್ನಾ ಮಾಡಬೇಕು. ಬೆಲೆ ಏರಿಕೆ ನಿಯಂತ್ರಿಸಬೇಕು. ಪ್ರತಿ ಕುಟುಂಬಕ್ಕೆ ತಲಾ 10 ಕೆಜಿ ಅಕ್ಕಿ, ಬೆಳೆ, ಗೋದಿ, ಕಡಲೆ ವಿತರಿಸಬೇಕು ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಕಮ್ಯುನಿಸ್ಟ್ ಪಕ್ಷದ ವಾಡಿ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ  ಆಗ್ರಹಿಸಿದರು.

ಎಸ್ ಯುಸಿಐ ಕಮ್ಯುನಿಸ್ಟ್ ಪಕ್ಷದಿಂದ ಸೋಮವಾರ ರಾಜ್ಯಾದ್ಯಂತ ಕರೆ ನೀಡಲಾದ ಮನೆ ಮನೆಯಿಂದ ಪ್ರತಿಭಟನಾ ಆಂದೋಲನ ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ಬಿಜೆಪಿ ಸರಕಾರ ಕೋವಿಡ್ ಸೋಂಕು ಮುಂದಿಟ್ಟುಕೊಂಡು ಜನ ಹೋರಾಟಗಳನ್ನು ಹತ್ತಿಡಲು ನೋಡುತ್ತಿದೆ. ಮಹಾಮಾರಿ ಸೊಂಕು ನಿಯಂತ್ರಿಸಲು ಈ ಸರಕಾರ ಸಂಪೂರ್ಣ ವಿಫಲವಾಗಿದೆ. ಸೊಂಕು ಜೀವಂತವಾಗಿಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಕೋವಿಡ್ ಹೆಸರಿನಲ್ಲಿ ಜಾರಿಗೊಳಿಸಲಾದ ಲಾಕ್ಡೌನ್ ಮತ್ತು ಕರ್ಫ್ಯೂ ದಿಂದ ದುಡಿಯುವ ಜನರ ಬದುಕಿನ ಮೇಲೆ ಕೆಟ್ಟ ಪರಿಣಾಮ ಬಿದ್ದಿದೆ. ಕೆಲವಿಲ್ಲದೆ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಪದೆಪದೆ ಜನರ ಬದುಕನ್ನು ದಿವಾಳಿ ಎಬ್ಬಿಸಲಾಗುತ್ತಿದೆ. ಲಾಕ್ಡೌನ್ ಕರ್ಫ್ಯೂ ಪರಿಹಾರ ನೀಡದೆ ಸರಕಾರ ಜನರನ್ನು ವಂಚಿಸಿದೆ. ಎಲ್ಲಾರಂಗದಲ್ಲೂ ವಿಫಲವಾಗಿರುವ ಬಿಜೆಪಿ ಸರಕಾರ ಜನಸಾಮಾನ್ಯರ ಎದೆಯ ಮೇಲೆ ಬೆಲೆ ಏರಿಕೆಯ ಬರೆ ಎಳಿದಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಜನಸಾಮಾನ್ಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಇದೇ ರೀತಿ ಪಕ್ಷದ ಕಾರ್ಯಕರ್ತರು ತಮ್ಮ ಮನೆಗಳಿಂದಲೇ ಬೇಡಿಕೆಗಳುಳ್ಳ ಪೋಸ್ಟರ್ ಹಿಡಿದು ಬಿಜೆಪಿ ಸರಕಾರದ ವಿರುಧ್ಧ ಪ್ರತಿಭಟನೆ ನಡೆಸಿದರು. ರಾಜು ಒಡೆಯರಾಜ, ಪದ್ಮರೇಖಾ ವೀರಭದ್ರಪ್ಪ, ಭೀಮಾಶಂಕರ ಮಾಳಗಿ, ವೆಂಕಟೇಶ ದೇವದುರ್ಗ, ಶರಣರು ಹೇರೂರ, ಗೌತಮ ಪರತೂರಕರ, ಗೋಧಾವರಿ ಕಾಂಬಳೆ, ಗೋವಿಂದ ಯಳವಾರ, ಯೇಸಪ್ಪ ಕೇದಾರ, ವಿಠ್ಠಲ ರಾಠೋಡ, ಗುಂಡಣ್ಣ ಎಂ.ಕೆ, ಮಲ್ಲಿಕಾರ್ಜುನ ಗಂದಿ, ಅರೂಣ ಹೆರಿಬಾನರ ಸೇರಿದಂತೆ ಅನೇಕರು ಮನೆ ಮನೆಯಿಂದ ವಿಶೇಷ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.