![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 5, 2023, 1:03 PM IST
ಬೆಂಗಳೂರು: ನಾರಾಯಣ ಗುರು ನಿಗಮ ಸ್ಥಾಪನೆಗೆ ಕ್ರಮ ತೆಗದು ಕೊಳ್ಳುವಂತೆ ಒತ್ತಾಯಿಸಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.
ಹಿಂದುಳಿದ ಸಮುದಾಯಗಳ ಪೈಕಿ ಒಂದಾದ ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸಂಖ್ಯಾ ಬಾಹುಳ್ಯವನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯ ಎಂದು ಮನವಿ ಮಾಡಲಾಗಿದೆ. ಬಿಲ್ಲವ, ಈಡಿಗ, ನಾಮಧಾರಿ ಎಂಬಿತ್ಯಾದಿ ಉಪನಾಮಗಳನ್ನು ಹೊಂದಿರುವ ಸಮಾಜದ ಎಲ್ಲ ವರ್ಗವನ್ನು ಒಂದೇ ವೇದಿಕೆಯ ಅಡಿಗೆ ತಂದು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕೆಂದು ಸಮಾಜದ ನಿಯೋಗ ಮನವಿ ಮಾಡಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಿಗಮ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಘುಪತಿ ಭಟ್, ಹರತಾಳು ಹಾಲಪ್ಪ ಹಾಗೂ ಬಿಲ್ಲವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಹಾಜರಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.