Cauvery: ಸುಪ್ರೀಂಕೋರ್ಟ್‌ ಆದೇಶ- ಯಾರು ಏನೆಂದರು?


Team Udayavani, Sep 21, 2023, 11:05 PM IST

supreme court

ನಾವು ಒದಗಿಸಿರುವ ಅಂಕಿ-ಅಂಶಗಳ ಆಧಾರದ ಮೇಲೆ ಸುಪ್ರೀಂಕೋರ್ಟ್‌ ಆದೇಶ ಕೊಡುತ್ತದೆ. ಸರಿಯಾದ ರೀತಿಣಯಲ್ಲಿ ಹೋಂವರ್ಕ್‌ ಮಾಡದೆಯೇ ಕೋರ್ಟ್‌ ಮೆಟ್ಟಿ
ಲೇರಿರುವುದು ರುಜುವಾತಾಗಿದೆ. ಕಾಂಗ್ರೆಸ್‌ ಮಿತ್ರಪಕ್ಷ ಡಿಎಂಕೆ ಜತೆ ರಾಜ್ಯ ಸರಕಾರ ಮಾತನಾಡಬೇಕೇ ಹೊರತು, ಕೇಂದ್ರದ ಮಧ್ಯಪ್ರವೇಶ ಸರಿಯಲ್ಲ. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ವಾಸ್ತವಾಂಶ ಅರಿಯಲು ಅವರೇ ಸಮಿತಿ ಕಳುಹಿಸಿ ಅಧ್ಯಯನ ಮಾಡಿ ತೀರ್ಪು ಕೊಡಲು ಮನವಿ ಮಾಡಲಿ.
– ಬಿ.ಎಸ್‌. ಯಡಿಯೂರಪ್ಪ , ಮಾಜಿ ಸಿಎಂ

ಸುಪ್ರೀಂಕೋರ್ಟ್‌ ಆದೇಶ ದುರದೃಷ್ಟಕರ. ಮತ್ತೂಮ್ಮೆ ಸುಪ್ರೀಂಕೋರ್ಟ್‌ಗೆ ವಸ್ತುಸ್ಥಿತಿ ಅರ್ಥ ಮಾಡಿಸಬೇಕು. ಕುಡಿಯುವ ನೀರು ಉಳಿಸಿಕೊಳ್ಳಲು ಹೋರಾಟ ಮುಂದುವರಿಸಲಿ. ನಮಗೆ ರಾಜಕಾರಣ ಮಾಡಲು ಇಷ್ಟವಿಲ್ಲ. ಈಗಾಗಲೇ ನಷ್ಟವಾಗಿರುವ ಪ್ರತಿ ಎಕ್ರೆ ಬೆಳೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಘೋಷಿಸಬೇಕು.
– ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ

ಪೊಲೀಸರನ್ನು ಮುಂದಿಟ್ಟುಕೊಂಡು ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುವ ಬದಲು ಬಂಗಾರಪ್ಪರಂತೆ ತೀರ್ಮಾನ ಮಾಡಿ, ಇಡೀ ಕರ್ನಾಟಕದ ಜನರು ನಮ್ಮ ಸಿಎಂ ಪರ ನಿಲ್ಲುತ್ತೇವೆ. ಕದ್ದು ಮುಚ್ಚಿ ನೀರು ಬಿಟ್ಟರೆ ಸಹಿಸುವುದಿಲ್ಲ. ಜನರು ಭುಗಿಲೇಳುತ್ತಾರೆ. ಕಾನೂನು ಕೈಗೆತ್ತಿಕೊಂಡರೂ ಸರಿ ನಾವೇ ಹೋರಾಟಕ್ಕಿಳಿಯುತ್ತೇವೆ.
– ಟಿ.ಎ. ನಾರಾಯಣ ಗೌಡ, ಕರವೇ ಅಧ್ಯಕ್ಷ

ಸಂಕಷ್ಟ ಸೂತ್ರ ರಚನೆಯಾಗುವವರೆಗೂ ನೀರು ಬಿಡುವ ಆದೇಶ ಒಪ್ಪಲಾಗಲ್ಲ, ತಮಿಳುನಾಡಿಗೆ ಹಿಂಗಾರು ಮಳೆ ಬರುವುದರಿಂದ ಕರ್ನಾಟಕ ನೀರು ಖಾಲಿ ಮಾಡಿಕೊಳ್ಳಲಾಗಲ್ಲ ಎಂಬುದನ್ನು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ನೀರು ಹರಿಸುವುದನ್ನು ತತ್‌ಕ್ಷಣ ನಿಲ್ಲಿಸಬೇಕು. ಕಾವೇರಿ ವಿಚಾರದಲ್ಲಿ ರಾಜಕೀಯ ಒತ್ತಡಕ್ಕೆ ಸರಕಾರ ಸಿಲುಕಬಾರದು.
– ಕುರುಬೂರು ಶಾಂತಕುಮಾರ್‌, ಕರ್ನಾಟಕ ಜಲಸಂರಕ್ಷಣ ಸಮಿತಿ

ಕಾವೇರಿ ನೀರಿನ ವಿಚಾರದಲ್ಲಿ ಸಂಕಷ್ಟ ಸ್ಥಿತಿ ಎದುರಾಗಿದೆ. ಕೇಂದ್ರ ಸರಕಾರವು ಪರಿಣಿತರ ತಂಡ ಕಳುಹಿಸಿ, ವಾಸ್ತವಾಂಶಗಳ ಪರಿಶೀಲನೆಗೆ ಮುಂದಾಗಬೇಕು. ಪರಿಣಿತರ ತಂಡ ಖುದ್ದು ಪರಿಶೀಲಿಸಿದ ಬಳಿಕವಷ್ಟೇ ಮುಂದಿನ ಹೆಜ್ಜೆ ನಿರ್ಧರಿಸಬಹುದು. ಕೇಂದ್ರದ ಮಧ್ಯಪ್ರವೇಶಕ್ಕೆ ಸಚಿವರಾದ ಪ್ರಹ್ಲಾದ್‌ ಜೋಷಿ, ಶೋಭಾ ಕರಂದ್ಲಾಜೆ ಸಹಿತ ಎಲ್ಲರೂ ಪ್ರಯತ್ನಿಸಬೇಕು.
– ಎಂ.ಬಿ. ಪಾಟೀಲ್‌, ಕೈಗಾರಿಕಾ ಸಚಿವ

ಕಾಂಗ್ರೆಸ್‌ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ಇರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ. ಐಎನ್‌ಡಿಐಎ ಮೈತ್ರಿಕೂಟಕ್ಕೆ ಶಕ್ತಿ ತುಂಬಲು ರಾಜ್ಯದ ಹಿತ ಬಲಿ ಕೊಟ್ಟಿದೆ. ನೀರಾವರಿ ಬಗ್ಗೆ ಕನಿಷ್ಠ ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಎಐಸಿಸಿ ಅಧ್ಯಕ್ಷರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಮೌನ ಅಚ್ಚರಿ ತಂದಿದೆ. ತುರ್ತಾಗಿ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು.
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

ಸಮಿತಿ, ಪ್ರಾಧಿಕಾರದ ಆದೇಶ ಪಾಲಿಸಿದರೂ ಈ ರೀತಿ ಆದೇಶ ಆಗಿದೆ. ಈಗ ನೀರು ಬಿಡುವ ಪರಿಸ್ಥಿತಿಯಲ್ಲಿಲ್ಲ. ನಾವು ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯ ಇಲ್ಲ. ರಾಜಕೀಯ ಕಾರಣಕ್ಕೆ ಆಪಾದಿಸಬಹುದು. ಮಧ್ಯಸ್ಥಿಕೆ ವಹಿಸಲು ಸೋನಿಯಾ ಗಾಂಧಿಗೆ ಯಾವ ಸಾಂವಿಧಾನಿಕ ಅಧಿಕಾರ ಇದೆ. ನಮ್ಮ ಸರಕಾರ ರಾಜ್ಯದ ಹಿತವನ್ನು ಖಂಡಿತವಾಗಿ ಕಾಪಾಡುತ್ತೇವೆ.
– ಡಾ| ಜಿ. ಪರಮೇಶ್ವರ್‌, ಗೃಹ ಸಚಿವ

ರಾಜ್ಯದ ಜನರ ಹಿತ ರಕ್ಷಣೆಗಾಗಿ ನೀರು ಬಿಡುವುದಿಲ್ಲ ಎನ್ನುವ ಕಠಿನ ನಿರ್ಧಾರ ಮಾಡಿ ಮುಖ್ಯಮಂತ್ರಿಗಳು ಜನರ ಪಾಲಿಗೆ ಹೀರೋ ಆಗಬೇಕು. ಕೂಡಲೇ ಅಧಿವೇಶನ ಕರೆದು ಅಧ್ಯಾದೇಶ ತರಬೇಕು.
– ಮುಖ್ಯಮಂತ್ರಿ ಚಂದ್ರು, ಆಮ್‌ ಆದ್ಮಿ ಪಕ್ಷದ ಮುಖಂಡ

ಸುಪ್ರೀಂಕೋರ್ಟ್‌ ಆದೇಶದ ವಿಚಾರದಲ್ಲಿ ಸಿಎಂ, ಡಿಸಿಎಂ ಯಾವ ನಿರ್ಧಾರವನ್ನೂ ತಿಳಿಸಿಲ್ಲ. ರಾಜ್ಯಸಭೆ, ಲೋಕಸಭಾ ಸದಸ್ಯರು ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಧೈರ್ಯ ತೋರಲಿ. ಬೆಂಗಳೂರಿನಲ್ಲಿರುವ ತಮಿಳರನ್ನು ಅವರ ಸಿಎಂ ಸ್ಟಾಲಿನ್‌ ಕರೆಸಿಕೊಳ್ಳಲಿ. ನಮ್ಮ ಸಿನೆಮಾ ನಟರು ಎಲ್ಲೆಲ್ಲೋ ಇದ್ದಾರೆ, ಸ್ವಲ್ಪ ಕೆಳಗಿಳಿದು ಬರಲಿ. ರಜನಿಕಾಂತ್‌ ಕರ್ನಾಟಕದ ಪರವೋ, ತಮಿಳುನಾಡಿನ ಪರವೋ ತಿಳಿಸಲಿ. ಎರಡು ದಿನದಲ್ಲಿ ನಮ್ಮ ಹೋರಾಟದ ಬಗ್ಗೆ ತಿಳಿಸುತ್ತೇವೆ.
– ವಾಟಾಳ್‌ ನಾಗರಾಜ್‌, ವಾಟಾಳ್‌ ಪಕ್ಷದ ಮುಖಂಡ

ಸುಪ್ರೀಂಕೋರ್ಟ್‌ ತೀರ್ಪಿನಿಂದ ಅನ್ಯಾಯ ಮತ್ತು ಆಘಾತವಾಗಿದೆ. ಈ ಆದೇಶದಂತೆ ದಿನವೂ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್‌ ನೀರು ಬಿಟ್ಟರೆ ನೀರಾವರಿ ಚಟುವಟಿಕೆಗೆ ನೀರು ಕೊಡಲಾಗುವುದಿಲ್ಲ. ಕುಡಿಯುವ ನೀರಿಗೆ ಸಂಗ್ರಹ ಇಟ್ಟುಕೊಳ್ಳಬೇಕಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರ ಪರವಾಗಿ ಸರಕಾರ ನಿಲ್ಲಬೇಕು. ರೈತರು ಆತ್ಮಹತ್ಯೆ ದಾರಿ ಹಿಡಿಯುವ ಮೊದಲೇ ನಷ್ಟ ಪರಿಹಾರ ಘೋಷಿಸಬೇಕು.
– ಸುಮಲತಾ, ಮಂಡ್ಯ ಸಂಸದೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.