Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

8,9, 10ನೇ ತರಗತಿಗೆ ಪರೀಕ್ಷೆ ನಡೆಸಿದ್ದ ರಾಜ್ಯ ವಿದ್ಯಾರ್ಥಿಗಳಿಗೇಕೆ ಕಿರುಕುಳ: ಕೋರ್ಟ್‌ ತರಾಟೆ

Team Udayavani, Oct 22, 2024, 7:00 AM IST

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

ನವದೆಹಲಿ: ವಿವಿಧ ತರಗತಿಗಳಿಗೆ ಕರ್ನಾಟಕದಲ್ಲಿ ಅರ್ಧವಾರ್ಷಿಕ ಪಬ್ಲಿಕ್‌ ಪರೀಕ್ಷೆ ನಡೆಸುವುದಕ್ಕೆ ಸುಪ್ರೀಂಕೋರ್ಟ್‌ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್‌ ಪರೀಕ್ಷೆಗಳ ಫ‌ಲಿತಾಂಶಕ್ಕೆ ತಡೆ ನೀಡಿದೆ.

ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘ, ರಾಜ್ಯ ಸರ್ಕಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್‌ ಚಂದ್ರ ಅವರಿದ್ದ ಪೀಠವು, ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದೆ.

ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಈ ರೀತಿಯ ವ್ಯವಸ್ಥೆ ಇಲ್ಲ. ಕರ್ನಾಟಕದಲ್ಲಿ ಮಾತ್ರ ಯಾಕೆ ಈ ವಿಧಾನವನ್ನು ಅನುಸರಿಸಲಾಗುತ್ತಿದೆ. ಈ ರೀತಿ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದೀರಿ. ಸರ್ಕಾರವಾಗಿರುವ ನೀವು ಈ ರೀತಿ ವರ್ತಿಸಬಾರದು. ಬೋರ್ಡ್‌ ಪರೀಕ್ಷೆ ನಡೆಸುವುದನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಬೇಡಿ. ನಿಮಗೆ ನಿಜವಾಗಲೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ದಯವಿಟ್ಟು ಅತ್ಯುತ್ತಮ ಶಾಲೆಗಳನ್ನು ತೆರೆಯಿರಿ. ಅವರಿಗೆ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸಬೇಡಿ ಎಂದು ಕರ್ನಾಟಕದ ಪರವಾಗಿ ಹಾಜರಾಗಿದ್ದ ಹಿರಿಯ ನ್ಯಾಯವಾದಿ ದೇವದತ್ತ ಕಾಮತ್‌ ಅವರಿಗೆ ತಿಳಿಸಿತು.

ಈಗ ಕರ್ನಾಟಕ ಅನುಸರಿಸುತ್ತಿರುವ ಈ ಪರೀಕ್ಷಾ ಮಾದರಿಯನ್ನು ಬೇರೆ ಯಾವ ರಾಜ್ಯವೂ ಅನುಸರಿಸುತ್ತಿಲ್ಲ ಎಂದೂ ಇದೇ ವೇಳೆ ಪೀಠವು ಅಭಿಪ್ರಾಯಪಟ್ಟಿತು. ಈ ವೇಳೆ, 5, 8, 9 ಮತ್ತು 10ನೇ ತರಗತಿಗಳಿಗೆ 7 ಗ್ರಾಮಾಂತರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸುವ ಸೂಚನೆಯನ್ನು ಕರ್ನಾಟಕ ಸರ್ಕಾರ ವಾಪಸ್‌ ಪಡೆದುಕೊಂಡಿದೆ ಎಂದು ಮಾಹಿತಿಯನ್ನು ಕಾಮತ್‌ ಅವರು ಪೀಠದ ಗಮನಕ್ಕೆ ತಂದರು. ಆಗ ಪೀಠವು, ಮುಂದಿನ 4 ವಾರಗಳಲ್ಲಿ ಪರೀಕ್ಷೆಯ ಸೂಕ್ತ ವಿವರಗಳ ಅಫಿಡವಿಟ್‌ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿತು.

ಏನಿದು ವಿವಾದ?:
ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಇದನ್ನು ಖಾಸಗಿ ಶಾಲೆಗಳ ಒಕ್ಕೂಟ ವಿರೋಧಿಸಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ಹೈಕೋರ್ಟ್‌ನ ಏಕ ಸದಸ್ಯಪೀಠ ಇದಕ್ಕೆ ನಿರ್ಬಂಧ ವಿಧಿಸಿತ್ತು. ಬಳಿಕ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದು, ಸುಪ್ರೀಂ ಮತ್ತೊಮ್ಮೆ ಫ‌ಲಿತಾಂಶ ಪ್ರಕಟಿಸುವುದಕ್ಕೆ ತಡೆ ನೀಡಿದೆ.

ಏನಿದು ವಿವಾದ?
– ಹೈಸ್ಕೂಲ್‌ನ ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ
– ನಿರ್ಧಾರ ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಹೈಕೋರ್ಟ್‌ಗೆ ಮೊರೆ
– ವಿಚಾರಣೆ ಬಳಿಕ ತೀರ್ಮಾನಕ್ಕೆ ತಡೆ. ವಿಭಾಗೀಯ ಪೀಠದಿಂದ ಪರೀಕ್ಷೆಗೆ ಅನುಮತಿ
– ಖಾಸಗಿ ಶಾಲೆಗಳ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ತಡೆ ನೀಡಿದ್ದೇಕೆ?
– ಬೇರೆ ಯಾವುದೇ ರಾಜ್ಯಗಳಲ್ಲಿ ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆ ವ್ಯವಸ್ಥೆ ಜಾರಿಯಲ್ಲಿಲ್ಲ
– ಈ ರೀತಿ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದಂತಾಗುತ್ತದೆ
– ಆಡಳಿತಗಾರರಾಗಿ ನೀವು ಈ ರೀತಿ ವರ್ತಿಸುವುದು ಸರಿಯಲ್ಲ
– ಬೋರ್ಡ್‌ ಪರೀಕ್ಷೆ ಸರ್ಕಾರದ ಪ್ರತಿಷ್ಠೆಯಾಗಬಾರದರು
– ಉತ್ತಮ ಶಾಲೆ ತೆರೆಯುವುದು ಸರ್ಕಾರದ ಉದ್ದೇಶವಾಗಬೇಕು

ಟಾಪ್ ನ್ಯೂಸ್

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.