![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 26, 2024, 12:36 AM IST
ಸುರತ್ಕಲ್: ಸುರತ್ಕಲ್ನ ಹೊಟೇಲ್ ಸೂರಜ್ ಬಳಿ ಸೋಮವಾರ ಮಧ್ಯಾಹ್ನ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರೂ ಮೃತಪಟ್ಟ ಘಟನೆ ನಡೆದಿದೆ.
ಬೀಡಿ ಗುತ್ತಿಗೆದಾರ ನೋಣಯ್ಯ (64), ಸಹಸವಾರ ನಿಯಾಜ್ (34) ಮೃತಪಟ್ಟವರು. ಕುಳಾಯಿ ಪ್ರಗತಿ ನಗರ ನಿವಾಸಿ ನೋಣಯ್ಯ ಅವರು ಸುಮಾರು ಮೂವತ್ತು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು.
ಎಂದಿನಂತೆ ಕೆಲಸದ ನಿಮಿತ್ತ ತನ್ನ ಜತೆ ಕೆಲಸ ಮಾಡುವ ಕಾನ ನಿವಾಸಿ ನಿಯಾಜ್ ಜತೆ ಸ್ಕೂಟರ್ನಲ್ಲಿ ಮುಕ್ಕದಿಂದ ಬಂದವರು ಹೊಟೇಲ್ ಬಳಿ ಯೂ ಟರ್ನ್ ಮಾಡುತ್ತಿದ್ದ ವೇಳೆ ಜೀಪ್ ಢಿಕ್ಕಿ ಹೊಡೆಯಿತು.
ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ಮೇಲೆ ಜೀಪ್ ಚಕ್ರ ಹರಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸುರತ್ಕಲ್ ಉತ್ತರ ಸಂಚಾರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.