ರೈತನ ಕೈ ಹಿಡಿದ ತೈವಾನ್‌ ಪಿಂಕ್‌: ಒಂದು ಎಕರೆಯಲ್ಲಿ ಲಕ್ಷ ರೂ. ಆದಾಯ


Team Udayavani, Jun 18, 2024, 6:11 PM IST

ರೈತನ ಕೈ ಹಿಡಿದ ತೈವಾನ್‌ ಪಿಂಕ್‌: ಒಂದು ಎಕರೆಯಲ್ಲಿ ಲಕ್ಷ ರೂ. ಆದಾಯ

ಉದಯವಾಣಿ ಸಮಾಚಾರ
ರಾಣಿಬೆನ್ನೂರ: ಕೃಷಿಯಿಂದ ಬೇಸತ್ತು ವಿಮುಕ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಇಲ್ಲೊಬ್ಬ ರೈತ ತೋಟಗಾರಿಕೆ ಇಲಾಖೆ ಮಾರ್ಗದರ್ಶನ ಪಡೆದು ನರೇಗಾ ಯೋಜನೆಯಡಿ ಒಂದು ಎಕರೆ ಜಮೀನಿನಲ್ಲಿ ತೈವಾನ್‌ ಪಿಂಕ್‌ ತಳಿಯ ಪೇರಲು ಹಣ್ಣು ಬೆಳೆದು ವರ್ಷಕ್ಕೆ ಒಂದು ಲಕ್ಷ ರೂ.ವರೆಗೆ ಆದಾಯ ಪಡೆದು ಇತರರಿಗೆ ಮಾದರಿಯಾಗಿದ್ದಾರೆ.

ರಾಣಿಬೆನ್ನೂರು ತಾಲೂಕಿನ ಸುಣಕಲ್‌ಬಿದರಿ ಗ್ರಾಮದ ಮಂಜಪ್ಪ ಸಿರಿಗೇರಿ ಎಂಬುವರು ಪೇರಲ ಬೆಳೆದು ಯಶಸ್ಸು ಕಂಡಿದ್ದಾರೆ. ಇವರು ಮೊದಲು ತಮ್ಮ ಒಂದು ಎಕರೆ ಜಮೀನಿನಲ್ಲಿ ಹತ್ತಿ ಅಥವಾ ಮೆಕ್ಕೆಜೋಳ ಬೆಳೆಯುತ್ತಿದ್ದರು. ಅದರಿಂದ ವರ್ಷಕ್ಕೆ ಖರ್ಚು ವೆಚ್ಚ ತೆಗೆದು 30ರಿಂದ 40 ಸಾವಿರ ರೂ. ಗಳಿಸಲು ಮಾತ್ರ ಸಾಧ್ಯವಾಗುತ್ತಿತ್ತು. ಆದರೆ ಗ್ರಾಪಂ ಮಾರ್ಗದರ್ಶನದಲ್ಲಿ ನರೇಗಾ ಯೋಜನೆಯಡಿ ಒಂದು ಎಕರೆ ಜಮೀನಿನಲ್ಲಿ ಕಳೆದ ವರ್ಷ 500 ಪೇರಲ ಸಸಿ ನಾಟಿ ಮಾಡಿದ್ದಾರೆ.

ತೋಟಗಾರಿಕೆ ಇಲಾಖೆ ತಾಂತ್ರಿಕ ಮಾರ್ಗದರ್ಶನದಲ್ಲಿ 8×8 ಅಡಿ ಅಂತರದಲ್ಲಿ ಪೇರಲು ನಾಟಿ ಮಾಡಿದ್ದು, ಸಮೃದ್ಧವಾಗಿ ಬೆಳೆದ ಪೇರಲ ಈಗ ಫಲ ನೀಡುತ್ತಿದೆ. ಇದು ವರ್ಷದಲ್ಲಿ ಎರಡು ಬಾರಿ ಫಲ ನೀಡುತ್ತಿದ್ದು, ಈಗಾಗಲೇ ಸುಮಾರು 60 ಬಾಕ್ಸ್‌ ಹಣ್ಣನ್ನು ಮಾರಾಟ ಮಾಡಲಾಗಿದೆ. ಪ್ರತಿ ಬಾಕ್ಸ್‌ಗೆ ಐದು ನೂರು ರೂಪಾಯಿಯಂತೆ ಮಾರಾಟಗಾರರು ತೋಟಕ್ಕೆ ಬಂದು ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ 30 ಸಾವಿರ ರೂ. ಆದಾಯ ಬಂದಿದ್ದು, ಇನ್ನೂ 40 ಸಾವಿರ ರೂ. ಆದಾಯ ನಿರೀಕ್ಷಿಸಿದ್ದಾರೆ.

ವರ್ಷದಲ್ಲಿ ಒಂದು ಬೆಳೆಗೆ ಸುಮಾರು ಖರ್ಚು ವೆಚ್ಚ ತೆಗೆದು 60ರಿಂದ 70 ಸಾವಿರ ಆದಾಯ ಗಳಿಸಲು ಸಾಧ್ಯವಾಗಿದೆ. ವರ್ಷಕ್ಕೆರಡು ಬೆಳೆ ಬಂದರೆ ಸುಮಾರು ಒಂದು ಲಕ್ಷ ರೂ.ವರೆಗೆ ಆದಾಯ ಬರುತ್ತದೆ. ರಾತ್ರಿ ವೇಳೆ ಕಾಯಿ ಕೊರೆಯುವ ಹುಳು ನಿಯಂತ್ರಣ ಮಾಡಲು ಪತಂಗ ಆಕರ್ಷಣೀಯ ಬುಟ್ಟಿ ಅಳವಡಿಸಿದ್ದರಿಂದ ಚುಕ್ಕೆ ಅಥವಾ ಕಾಯಿ ಕೊರಕ ರೋಗದ ಬಾಧೆಯಿಂದ ಪೇರಲ ಗಿಡ ಮತ್ತು ಹಣ್ಣುಗಳು ಮುಕ್ತವಾಗಿವೆ. ಇದರಿಂದ ರಾಸಾಯನಿಕ ಸಿಂಪಡಣೆಯ ಖರ್ಚೂ ಕಡಿಮೆಯಾಗಿದೆ. ಅಲ್ಲದೇ ಸಾವಯವ ಗೊಬ್ಬರ ಬಳಸಲಾಗಿದೆ. ಪತಂಗ ಆಕರ್ಷಣೀಯ ಬುಟ್ಟಿಗಳಿಗೆ ಸೋಲಾರ್‌ ವ್ಯವಸ್ಥೆ ಅಳವಡಿಸಲಾಗಿದೆ.

ಗ್ರಾಪಂ ಹಾಗೂ ತೋಟಗಾರಿಕೆ ಇಲಾಖೆ ಮಾರ್ಗದರ್ಶನದಲ್ಲಿ 500 ಪೇರಲ ಸಸಿ ನಾಟಿ ಮಾಡಿದ್ದು, ಈಗ ಸಮೃದ್ಧವಾಗಿ ಫಲ ನೀಡುತ್ತಿವೆ. ವರ್ಷದಲ್ಲಿ ಎರಡು ಬಾರಿ ಫಲ ನೀಡುತ್ತಿದ್ದು, ಈಗಾಗಲೇ ಸುಮಾರು 60 ಬಾಕ್ಸ್‌ ಹಣ್ಣನ್ನು ಮಾರಾಟ ಮಾಡಲಾಗಿದೆ. ರೈತರು ನರೇಗಾ ಯೋಜನೆ ಅಡಿ ಬಹುವಾರ್ಷಿಕ ಪೇರಲು ಬೆಳೆದರೆ ಆರ್ಥಿಕವಾಗಿ ಸುಧಾರಣೆಯಾಗಲು ಸಾಧ್ಯ.
●ಮಂಜಪ್ಪ ಸಿರಿಗೇರಿ,
ಸುಣಕಲ್‌ಬಿದರಿ ರೈತ.

ತಾಲೂಕಿನ ಸುಣಕಲ್‌ಬಿದರಿ ಗ್ರಾಮದ ಮಂಜಪ್ಪ ಸಿರಿಗೇರಿ ಅವರು ತೈವಾನ್‌ ಪಿಂಕ್‌ ತಳಿಯ ಪೇರಲ ಬೆಳೆದು ಯಶಸ್ವಿಯಾಗಿದ್ದಾರೆ. ಪೇರಲು ಬೆಳೆಗೆ ರೋಗ ನಿಯಂತ್ರಣ ಮಾಡಲು ಸೋಲಾರ್‌ ವ್ಯವಸ್ಥೆಯಲ್ಲಿ ಪತಂಗ ಆಕರ್ಷಣೀಯ ಬುಟ್ಟಿ ಅಳವಡಿಸಿದ್ದರಿಂದ ಪೇರಲದ ಹಣ್ಣುಗಳು ಯಾವುದೇ ಚುಕ್ಕೆ ಅಥವಾ ಕಾಯಿ ಕೊರಕ ರೋಗದ ಬಾಧೆಗೆ ತುತ್ತಾಗಿಲ್ಲ. ಕೀಟನಾಶಕ ಬಳಸದ ಕಾರಣ ಈ ಹಣ್ಣು ಆರೋಗ್ಯ ರಕ್ಷಣೆಗೆ ಉತ್ತಮ.
●ನೂರಅಹ್ಮದ್‌ ಹಲಗೇರಿ, ಹಿರಿಯ ಸಹಾಯಕ
ನಿರ್ದೇಶಕ, ತೋಟಗಾರಿಕೆ ಇಲಾಖೆ

■ ಮಂಜುನಾಥ ಎಚ್‌ ಕುಂಬಳೂರ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.