![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 3, 2020, 3:07 PM IST
ಬೆಳಗಾವಿ: ಟಾಟಾ ಏಸ್-ಬೊಲೇರೋ ಮಧ್ಯೆ ಸವದತ್ತಿ-ಧಾರವಾಡ ಮಾರ್ಗದ ಪುರಸಭೆ ಕಸ ವಿಲೇವಾರಿ ಸಂಕೀರ್ಣದ ಹತ್ತಿರ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲಿ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸವದತ್ತಿ ಬಳಿ ಸಂಭವಿಸಿದೆ.
ಮೃತ ದುರ್ದೈವಿಗಳು ಸವದತ್ತಿ ಬಳಿಯ ಚಿಂಚನೂರು-ಜಕಬಾಳ ಗ್ರಾಮದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದ್ದು, ಧಾರವಾಡ ತಾಲೂಕಿನ ಮೊರಬ ಗ್ರಾಮದ ಜಮೀನುಗಳಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಏಸ್ ವಾಹನದಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಎರಡು ವಾಹನ ಸೇರಿ 25ರಿಂದ 30 ಜನರಿದ್ದರು ಎನ್ನಲಾಗಿದೆ.
ಅಪಘಾತಕ್ಕೀಡಾದ ಬೊಲೇರೋ ವಾಹನ ಸವದತ್ತಿ ಕಡೆಯಿಂದ ಧಾರವಾಡಕ್ಕೆ ಹೊರಟಿತ್ತು. ಮೃತ 6 ಕಾರ್ಮಿಕರಲ್ಲಿ ಐವರ ಹೆಸರುಗಳು ತಿಳಿದು ಬಂದಿದ್ದು, ಅವರನ್ನು ಚಿಂಚನೂರ ಗ್ರಾಮದ ಯಲ್ಲವ್ವ ಯಲ್ಲಪ್ಪ ಮುರಕಿಭಾವಿ (65), ತಾರವ್ವ ಹುರಳಿ (35) ಹಾಗೂ ರುಕ್ಮವ್ವ ವಡಕಣ್ಣವರ (35), ಹನಮವ್ವ ಮಯಪ್ಪ ಬೊಮ್ಮಣ್ಣವರ (58) ಹಾಗೂ ಯಲ್ಲವ್ವ ಹೊನ್ನಪ್ಪ ಬೊಮ್ಮನಹಳ್ಳಿ (56) ಎಂದು ಗುರ್ತಿಸಲಾಗಿದೆ. ಟಾಟಾ ಏಸ್ ಚಾಲಕ ಕೂಡ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ :ಬಿಎಸ್ವೈ ಜನತೆಕಣ್ಣೊರೆಸುವ ಮುಖ್ಯಮಂತ್ರಿ: ಕಟೀಲ್
ಸುದ್ದಿ ತಿಳಿದ ತಕ್ಷಣ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮತ್ತು ಸವದತ್ತಿ ಠಾಣೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.