KAT ಮೊರೆ ಹೋದ ಶಿಕ್ಷಕ ಅಭ್ಯರ್ಥಿಗಳು
Team Udayavani, Oct 27, 2023, 11:16 PM IST
ಬೆಂಗಳೂರು: ರಾಜ್ಯದ 13 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ವಿಚಾರ ಈಗ ಮತ್ತೂಂದು ಸುತ್ತಿನ ಕಾನೂನು ಹೋರಾಟಕ್ಕೆ ಹೋಗಿದ್ದು, ಹೈಕೋರ್ಟ್ ನಿರ್ದೇಶನದಂತೆ ತಮ್ಮ ತಂದೆಯ ಆದಾಯ ಪ್ರಮಾಣಪತ್ರವನ್ನು ಪರಿಗಣಿಸದೆ ಇರುವುದನ್ನು ಆಕ್ಷೇಪಿಸಿ ಕೆಲವು ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಟಿ) ಮೊರೆ ಹೋಗಿದ್ದಾರೆ.
ಹೈಕೋರ್ಟ್ ಇದೇ ತಿಂಗಳ 12ರಂದು ನೇಮಕಕ್ಕೆ ಹಸಿರು ನಿಶಾನೆ ತೋರಿ, ತಂದೆಯ ಆದಾಯ ಪ್ರಮಾಣಪತ್ರದ ಕುರಿತು ಅಭ್ಯರ್ಥಿಗಳು ತಮ್ಮ ತಕರಾರನ್ನು ಕೆಎಟಿ ಮುಂದೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದೆಂದು ಆದೇಶಿ ಸಿತ್ತು. ಅದರಂತೆ ಬೆಂಗಳೂರಿನ ಬಿಳೇಕ ಹಳ್ಳಿಯ ಚೈತ್ರಾ ಸಹಿತ 22 ಮಂದಿ ಅಭ್ಯರ್ಥಿಗಳು ಈಗ ಕೆಎಟಿ ಮುಂದೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯ ನಾರಾಯಣ್ ಮತ್ತು ಆಡಳಿತ ಸದಸ್ಯ ಎಸ್.ಶಿವಸೈಲಂ ಅವರಿದ್ದ ಪೀಠ, ಪ್ರತಿವಾದಿ ರಾಜ್ಯ ಸರಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ನೋಟಿಸ್ ಜಾರಿ ಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿ ಅಂತಿಮ ವಿಚಾರಣೆಯನ್ನು
ನ.6 ಕ್ಕೆ ನಿಗದಿಪಡಿಸಿದೆ.
ಅಲ್ಲದೆ, ಅರ್ಜಿ ವಿಲೇವಾರಿಗೆ ಸರಕಾರದ ಉತ್ತರ ಅತ್ಯಾವಶ್ಯಕವಾಗಿದೆ. ಹಾಗಾಗಿ ಯಾವುದೇ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದರೆ ಅದು ಈ ಅರ್ಜಿಯ ತೀರ್ಪಿಗೆ ಒಳಪಡುತ್ತದೆ ಎಂದು ಕೆಎಟಿ ಹೇಳಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಕೆ. ಸತೀಶ್ ಭಟ್, ನಿಯಮದಂತೆ ತಂದೆಯ ಆದಾಯ ಪ್ರಮಾಣಪತ್ರವನ್ನು ಮಾತ್ರ ಪರಿಗಣಿಸಬೇಕೇ ಹೊರತು ಪತಿಯ ಆದಾಯವನ್ನಲ್ಲ. ಸುಪ್ರೀಂಕೋರ್ಟ್ ಕೂಡ ಎಲ್ಲ ಅಂಶಗಳನ್ನು ಪರಿಗಣಿಸಿ ಸುರೇಂದ್ರ ಸಿಂಗ್ ವರ್ಸಸ್ ಪಂಜಾಬ್ ಎಲೆಕ್ಟ್ರಿಕ್ಸಿಟಿ ಬೋರ್ಡ್ ಹಾಗೂ ಇತರರು ಪ್ರಕರಣದಲ್ಲಿ ಪೋಷಕರ ಆದಾಯವನ್ನು ಮಾತ್ರ ಪರಿಗಣಿಸಬೇಕು ಎಂದು ಆದೇಶಿಸಿದೆ ಎಂದರು.
ಅಲ್ಲದೆ, ಕರ್ನಾಟಕ ಹೈಕೋರ್ಟ್ ಕೂಡ ಸ್ಟೇಟ್ ಆಫ್ ಕರ್ನಾಟಕ ವರ್ಸಸ್ ಯೋಗೇಶ್ವರಿ ಪ್ರಕರಣದಲ್ಲಿ ಪೋಷಕರ ಆದಾಯ ಪ್ರಮಾಣಪತ್ರವನ್ನೇ ಪರಿಗಣಿಸ ಬೇಕು ಎಂದು ಆದೇಶಿಸಿದೆ. ಅದರಂತೆ ಈ ಪ್ರಕರಣದಲ್ಲೂ ಅರ್ಜಿದಾರರು ಸಲ್ಲಿಸಿರುವ ತಂದೆಯ ಆದಾಯ ಪ್ರಮಾಣಪತ್ರ ಪರಿಗಣಿಸಿ ಅವರ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಬೇಕು ಮತ್ತು ಕೌನ್ಸೆಲಿಂಗ್ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಆದೇಶ ನೀಡಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.