ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು


Team Udayavani, Sep 5, 2020, 11:49 AM IST

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ಶಾಲೆಯಲ್ಲಿ ಕುಳಿತು ರಜೆಗಾಗಿ ಹಂಬಲಿಸುತ್ತಿದ್ದ ಮಕ್ಕಳು ಈಗ ಶಾಲೆ ಪ್ರಾರಂಭ ಯಾವಾಗ ಎಂದು ಕಾಯುವ ಪರಿಸ್ಥಿತಿ ತಂದೊಡ್ಡಿದೆ ಕೋವಿಡ್‌ 19. ಮಕ್ಕಳ ಕಲರವವಿಲ್ಲದೆ ಭಣಗುಟ್ಟುವ ಶಾಲೆಯಲ್ಲಿ ಕುಳಿತು ತಂತ್ರಜ್ಞಾನ ಮೂಲಕ ಮಕ್ಕಳಿಗೆ ಶಿಕ್ಷಣ ಒದಗಿಸುವ ಪ್ರಯತ್ನ ಶಿಕ್ಷಕರದು.

ಮಕ್ಕಳಿಗೆ ಮೊಬೈಲ್‌ ಕೊಡಬೇಡಿ, ಟಿವಿ ನೋಡಬೇಡಿ ಎನ್ನುತ್ತಿದ್ದ ಶಿಕ್ಷಕರೇ ಇಂದು ಕಲಿಕಾ ಸಾಮಗ್ರಿಗಳಾಗಿ ಮಕ್ಕಳಿಗೆ ಮೊಬೈಲ್‌, ದೂರದರ್ಶನ ವ್ಯವಸ್ಥೆ ಮಾಡಿ ಎಂದು ಪೋಷಕರಲ್ಲಿ ವಿನಂತಿ ಮಾಡಬೇಕಾದ ಸಂದರ್ಭ ಬಂದಿರುವುದು ವಿಪರ್ಯಾಸ. ಪೋಷಕರಿಗೆ ಮಕ್ಕಳ ಕಲಿಕೆಯ ಕಡೆಗೆ ಗಮನ ಕೊಡುವುದರ ಜೊತೆಗೆ ಮೊಬೈಲ್‌ ಹಿಡಿದ ಮಕ್ಕಳು ವೀಡಿಯೊ ಗೇಮ್‌, ಇಂಟರ್‌ ನೆಟ್‌, ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಹೆಗಲೇರಿದೆ.

ನಿನ್ನೆ ಮೊನ್ನೆಯ ತನಕ ವಾಟ್ಸ್‌ಪ್‌ನಲ್ಲಿ ಸಂದೇಶ ಕಳಿಸಲು, ಮೊಬೈಲ್‌ನಲ್ಲಿ ಫೋಟೋ ತೆಗೆದು ಕಳಿಸಲು ಕಷ್ಟಪಡುತ್ತಿದ್ದ ಶಿಕ್ಷಕರು ಇಂದು ಮೊಬೈಲ್‌ ಮೂಲಕ ಆಡಿಯೋ, ವೀಡಿಯೋ ರೆಕಾರ್ಡ್‌ ಮಾಡಿ ಕಳಿಸುವುದು, ಆನ್‌ ಲೈನ್‌ ಪಾಠ, ವೆಬಿನಾರ್‌ಗಳಲ್ಲಿ ಭಾಗವಹಿಸುವುದು, ಮೊಬೈಲ್‌ ಮೂಲಕವೇ ಮಕ್ಕಳ ಕಲಿಕೆಗೆ ಪೂರಕ ವಿವಿಧ ವಿಧಾನ ಅಳವಡಿಸುವುದು ಮೊದಲಾದವುಗಳನ್ನು ಕರಗತ ಮಾಡಿಕೊಂಡಿದ್ದಾರೆ. ಕೋವಿಡ್‌ ಸಂಕಷ್ಟ ಶಿಕ್ಷಕರಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವಲ್ಲಿ ಪರಿಣತಿ ಹೊಂದುವಂತೆ ಮಾಡಿರುವುದು ಧನಾತ್ಮಕ ಬೆಳವಣಿಗೆ. ವಿದ್ಯಾಗಮ ಯೋಜನೆಯಡಿ ಮೊಬೈಲ್‌, ಟಿವಿ ಮೊದಲಾದ ಯಾವುದೇ ಸಾಧನಗಳಿಲ್ಲದ ವಿದ್ಯಾರ್ಥಿಗಳ ವಸತಿ ಪ್ರದೇಶಕ್ಕೆ ಹೋಗಿ ಮಕ್ಕಳ ಕಲಿಕೆ ನಿರಂತರವಾಗಿರುವಂತೆ ಶ್ರಮಿಸುತ್ತಿರುವ ಶಿಕ್ಷಕರು ನಿಜಕ್ಕೂ ಅಭಿನಂದನಾರ್ಹ‌ರು.

ಬಿಡುವಿಲ್ಲದ ಪಾಠ ಪ್ರವಚನ, ಮಧ್ಯೆ ಆಟೋಟ, ಸ್ನೇಹಿತರೊಂದಿಗೆ ಹರಟೆ, ಕೀಟಲೆ, ಜಗಳ, ಬಿಸಿಯೂಟ ಇವುಗಳಿಂದ ವಂಚಿತರಾದ ಮಕ್ಕಳಿಗೆ ಶಾಲಾ ಶಿಕ್ಷಣದ ಮಹತ್ವ ಅರಿವಾಗಿರಬೇಕು. ಮಕ್ಕಳ ದೈಹಿಕ, ಮಾನಸಿಕ, ಬೌದ್ಧಿಕ ವಿಕಸನ, ಜೀವನದಲ್ಲಿ ಪರಸ್ಪರ ಸಹಕಾರ, ಸಹಬಾಳ್ವೆ, ವಿವಿಧ ಕೌಟುಂಬಿಕ ಪರಿಸರದಿಂದ ಬಂದ ಮಕ್ಕಳೊಂದಿಗೆ ಹೊಂದಾಣಿಕೆಯ ಮನೋಭಾವ ಇವೆಲ್ಲವೂ ಶಾಲಾ ಶಿಕ್ಷಣದಲ್ಲಿ ಕಲಿಕೆಯ ಜೊತೆಜೊತೆಗೆ ನಡೆಯುತ್ತದೆೆ. ಆರೋಗ್ಯಕರ ಸ್ಪರ್ಧೆ ಮಕ್ಕಳಲ್ಲಿ ಕಲಿಕೆಯ ಉತ್ಸಾಹ ಹೆಚ್ಚಿಸುತ್ತದೆ. ಶಿಕ್ಷಕ – ವಿದ್ಯಾರ್ಥಿಗಳ ನಡುವೆ ಗೌರವ, ಭಯ ಮಿಶ್ರಿತ ಆತ್ಮೀಯ ಭಾವಬಂಧ ಬೆಳೆಯುತ್ತದೆ. ಆದುದರಿಂದ ಕೋವಿಡ್‌ 19 ನಿಯಂತ್ರಿಸುವಲ್ಲಿ ಯಶಸ್ಸು ದೊರೆತು ಜನಜೀವನ, ಶಾಲಾಜೀವನ ಎಂದಿನಂತಾಗಲಿ, ಮಕ್ಕಳ ಚಿಲಿಪಿಲಿ ಶಾಲೆ ಶಾಲೆಗಳಲ್ಲಿ ಅನುರಣಿಸಲಿ ಎಂಬುದೇ ನಮ್ಮೆಲ್ಲರ ಹಾರೈಕೆ.

– ನಿರ್ಮಲ ಬಿ
ಮುಖ್ಯೋಪಾಧ್ಯಾಯಿನಿ . ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು, ಉಡುಪಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಉತ್ತಮ ಶಿಕ್ಷಕರ ನೆನಪಲ್ಲಿ: ಬಡತನದ ಬವಣೆಯಲ್ಲಿ ಗೆದ್ದು ಗುರುವಾದ ಭೀಮಣ್ಣ ಸಜ್ಜನ್

ಉತ್ತಮ ಶಿಕ್ಷಕರ ನೆನಪಲ್ಲಿ: ಬಡತನದ ಬವಣೆಯಲ್ಲಿ ಗೆದ್ದು ಗುರುವಾದ ಭೀಮಣ್ಣ ಸಜ್ಜನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.