Teachers Recruitment: ದ.ಕ., ಉಡುಪಿಯಲ್ಲಿ 675 ಶಿಕ್ಷಕರಿಗೆ ಆದೇಶ ಪತ್ರ


Team Udayavani, Oct 22, 2023, 12:27 AM IST

teTeachers Recruitment: ದ.ಕ., ಉಡುಪಿಯಲ್ಲಿ 675 ಶಿಕ್ಷಕರಿಗೆ ಆದೇಶ ಪತ್ರ

ಮಂಗಳೂರು/ಉಡುಪಿ: ಸರಕಾರಿ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧಿಸಿದಂತೆ 2023ರ ಮಾ. 8 ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳ ಕೌನ್ಸೆಲಿಂಗ್‌ ಶನಿವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೌನ್ಸೆ ಲಿಂಗ್‌ಗೆ 489 ಮಂದಿಯಲ್ಲಿ 21 ಮಂದಿ ಗೈರಾಗಿದ್ದು, 468 ಮಂದಿಗೆ ನೇಮಕಾತಿ ಆದೇಶ ನೀಡಲಾಯಿತು.

ಗಣಿತ ಮತ್ತು ವಿಜ್ಞಾನಕ್ಕೆ 189ರಲ್ಲಿ 181 ಸಮಾಜ ವಿಜ್ಞಾನ 201ರಲ್ಲಿ 189, ಇಂಗ್ಲಿಷ್‌ 77 ರಲ್ಲಿ 76 ಗೃರಾಗಿದ್ದರು. ಜೀವಶಾಸ್ತ್ರಕ್ಕೆ ಎಲ್ಲ 20 ಮಂದಿಯ ನೇಮಕಾತಿ ನಡೆದಿದೆ.

ಸರ್ವರ್‌ ಸೇರಿದಂತೆ ತಾಂತ್ರಿಕ ಸಮಸ್ಯೆ, ಯಾವುದೇ ಅಡ್ಡಿಯಿಲ್ಲದೆ ನಿರಾತಂಕವಾಗಿ ನಡೆದಿದೆ. ಒಂದೇ ದಿನ ಎಲ್ಲರ ಮಂದಿಯ ಕನ್ಸೆಲಿಂಗ್‌ ನಡೆದಿರುವುದು ಕೂಡಾ ಸಾಧನೆ ಯಾಗಿದೆ. ಮಧ್ಯಾಹ್ನ ವರೆಗೆ ಸುಮಾರು 100ರಷ್ಟು ಮಂದಿಯದ್ದು ಮಾತ್ರ ಕೌನ್ಸೆಲಿಂಗ್‌ ನಡೆದಿತ್ತು. ಅನಂತರ ವೇಗ ಪಡೆಯಿತು. ರಾತ್ರಿ 8.30ರ ವರೆಗೆ ಕೌನ್ಸೆಲಿಂಗ್‌ ನಡೆಯಿತು ಎನ್ನುತ್ತಾರೆ ಅಧಿಕಾರಿಗಳು.

ಗಣಿತ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ಸ್ವಲ್ಪ ಹುದ್ದೆ ಕಡಿಮೆ ಇತ್ತು. ಹುದ್ದೆ ಸಿಗದೆ ಬಾಕಿ ಉಳಿದವರನ್ನು ಉಪನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ. ತರಬೇತಿ ನೀಡಿ, ಮುಂದಿನ ದಿನಗಳಲ್ಲಿ ಹುದ್ದೆಗೆ ನಿಯೋಜಿಸಲಾಗುತ್ತದೆ.

“ಸಿ’ ವಲಯದಲ್ಲಿ (ಗ್ರಾಮೀಣ) ಖಾಲಿ ಇರುವ ಹುದ್ದೆಗಳಿಗೆ ನಿಯೋಜಿಸಲಾಗಿದೆ. ಸುಳ್ಯ ಪುತ್ತೂರು ವಿಭಾಗಕ್ಕೆ ಹುದ್ದೆಗಳು ಸ್ವಲ್ಪ ಬಾಕಿಯಾಗಿದ್ದು, ಮಂಗಳೂರು, ಮೂಡುಬಿದಿರೆ, ಬೆಳ್ತಂಗಡಿ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಖಾಲಿ ಹುದ್ದೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: 207 ಮಂದಿಗೆ ಆದೇಶಪತ್ರ
ಉಡುಪಿ ಜಿಲ್ಲೆಯ ಆಯ್ಕೆ ಪಟ್ಟಿಯಲ್ಲಿದ್ದ 214 ಅಭ್ಯರ್ಥಿಗಳಲ್ಲಿ 207 ಮಂದಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ತಾಂತ್ರಿಕ ಕಾರಣದಿಂದ ಇಬ್ಬರು ಅಭ್ಯರ್ಥಿಗಳ ಫ‌ಲಿತಾಂಶ ವಿಳಂಬವಾಗಿದೆ ಮತ್ತು ಐವರು ಗೈರು ಹಾಜರಾಗಿದ್ದರು.

ಗಣಿತ ವಿಜ್ಞಾನ, ಕನ್ನಡ ವಿಷಯದ 87 ಅಭ್ಯರ್ಥಿಗಳಲ್ಲಿ 84 ಮಂದಿಗೆ, ಸಮಾಜ ವಿಜ್ಞಾನ, ಕನ್ನಡ ವಿಷಯದ 96 ಅಭ್ಯರ್ಥಿಗಳಲ್ಲಿ 94 ಮಂದಿಗೆ, ಜೀವಶಾಸ್ತ್ರ, ಕನ್ನಡ ವಿಷಯದ 11 ಅಭ್ಯರ್ಥಿಗಳಲ್ಲಿ 11 ಮಂದಿಗೆ ಹಾಗೂ ಇಂಗ್ಲಿಷ್‌ ವಿಷಯದ 20 ಅಭ್ಯರ್ಥಿಗಳಲ್ಲಿ 18 ಮಂದಿಗೆ ಕೌನ್ಸೆಲಿಂಗ್‌ ಪೂರ್ಣಗೊಂಡ ಅನಂತರದಲ್ಲಿ ನೇಮಕಾತಿ ಆದೇಶ ನೀಡಲಾಯಿತು.ಈ ವೇಳೆ ಡಿಡಿಪಿಐ ಗಣಪತಿ, ಡಯಟ್‌ ಹಿರಿಯ ಅಧಿಕಾರಿಗಳಾದ ಗೋವಿಂದ ಮಡಿವಾಳ, ಡಾ| ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.