BJP ಅಭಿಯಾನ ಯಶಸ್ಸಿಗೆ ತಂಡ ರಚನೆ


Team Udayavani, Aug 31, 2023, 8:41 PM IST

BJP FLAG 1

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜನರನ್ನು ಮತದಾನಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಅಭಿಯಾನ ನಡೆಸಲು ತೀರ್ಮಾನಿಸಿರುವ ಬಿಜೆಪಿ, ಅಭಿಯಾನದ ಯಶಸ್ಸಿಗಾಗಿ ತಂಡವೊಂದನ್ನು ರಚಿಸಿದೆ.

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಸಂಸದ ತೇಜಸ್ವಿ ಸೂರ್ಯ, ಪಿ.ರಾಜೀವ್‌, ಅರವಿಂದ ಬೆಲ್ಲದ್‌, ವಿವೇಕ್‌ ರೆಡ್ಡಿ, ಲೋಕೇಶ್‌ ಅವರನ್ನೊಳಗೊಂಡ ಸಂಚಾಲನಾ ಸಮಿತಿಯು ರಾಜ್ಯದ್ಯಂತ ಪ್ರವಾಸ ನಡೆಸಲಿದೆ. ಇದೇ ರೀತಿ ಸ್ಥಳೀಯವಾಗಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರಗಳ ಮಟ್ಟದಲ್ಲೂ ಸಮಿತಿ ರಚಿಸಿ ಅಭಿಯಾನವನ್ನು ಯಶಸ್ಸುಗೊಳಿಸಲು ಉದ್ದೇಶಿಸಿದೆ.
ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಲೋಕಸಭಾ ಕ್ಷೇತ್ರಗಳ ‘ಮತದಾರರ ಚೇತನ ಮಹಾ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, 2009ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಸುಮಾರು ಶೇ.12 ರಷ್ಟು ಯುವ ಮತದಾರರು ಹೆಚ್ಚುವರಿಯಾಗಿ ಎನ್‌ಡಿಎ ಪರವಾಗಿ ಮತದಾನ ಮಾಡಿದ್ದು, 2014 ಮತ್ತು 2019ರ ಲೋಕಸಭಾ ಚುನಾವಣೆಗಳು ದೇಶಕ್ಕೆ ಸ್ಥಿರ ಸರ್ಕಾರವನ್ನು ನೀಡಿವೆ ಎಂದರು.

ಸ್ಥಿರ, ಸದೃಢ ಸರಕಾರದ ಫ‌ಲವಾಗಿ ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ. ಮುಂದಿನ ಕೆಲವು ತಿಂಗಳಿನಲ್ಲಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಿಸಲಿದ್ದು, ಅದಕ್ಕೆ ಬಿಜೆಪಿ ಸಹಕಾರ ಕೊಡಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರನ್ನು ಮತದಾನಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಅಭಿಯಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್‌ ಕುಮಾರ್‌ ಸುರಾನ, ಮಾಲೀಕಯ್ಯ ಗುತ್ತೇದಾರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ.ವಿ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ಪ್ರಧಾನಿ ಮೋದಿ ಸರ್ಕಾರದ ಸಾಧನೆ
50 ಕೋಟಿ ಬಡಜನರ ಜನ್‌ಧನ್‌ ಬ್ಯಾಂಕ್‌ ಖಾತೆ ತೆರೆಯಲು ಮತದಾರರು ನೆರವಾಗಿ¨ªಾರೆ. 29 ಲಕ್ಷ ಡಿಬಿಟಿ ಹಣ ವರ್ಗಾವಣೆ ಆಗಿದೆ. 4.5 ಕೋಟಿ ಬಡಜನರಿಗೆ ಮನೆಗಳ ನಿರ್ಮಾಣವಾಗಿದೆ. ದೇಶದ ಹಳ್ಳಿಗಳಲ್ಲಿ ಸ್ವತ್ಛ ಭಾರತ್‌ ಅಡಿಯಲ್ಲಿ 11 ಕೋಟಿ ಶೌಚಾಲಯ ನಿರ್ಮಾಣ ಮಾಡಿಸಲು ಮತದಾರರು ತಮ್ಮ ಮತದ ಮೂಲಕ ಅವಕಾಶ ಕೊಟ್ಟಿ¨ªಾರೆ. 23 ಕೋಟಿ ಬಡ ಕುಟುಂಬಗಳಿಗೆ ಆಯುಷ್ಮಾನ್‌ ವಿಮೆ ಲಭಿಸಿದೆ. 20 ಕೋಟಿ ಎಸ್ಸಿ, ಎಸ್ಟಿ, ಒಬಿಸಿ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ಲಭಿಸಿದೆ. ಒಂದು ಮತದ ಫ‌ಲವಾಗಿ ಭಾರತ ಚಂದ್ರಯಾನ ಮಾಡಿ ದೇಶದ, ವಿಶ್ವದ ದಕ್ಷಿಣ ಧ್ರುವಕ್ಕೆ ತೆರಳಿದ ಮೊದಲ ದೇಶ ಎಂಬ ಕೀರ್ತಿಯನ್ನು ತನ್ನದಾಗಿಸಿಕೊಂಡಿದೆ. ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್‌ ಸ್ಟ್ರೈಕ್‌ ಮಾಡುವ ಶಕ್ತಿ ದೇಶಕ್ಕೆ ಸಿಕ್ಕಿದೆ. ನೂರಾರು ವರ್ಷಗಳಿಂದ ಜನರು ಕಾಯುತ್ತಿದ್ದ ರಾಮಮಂದಿರದ ನಿರ್ಮಾಣ ಆಗಿದೆ. ಆರ್ಟಿಕಲ್‌ 370 ಕಿತ್ತು ಹಾಕುವ ಮತ್ತು ಭಾರತ ಸಂವಿಧಾನವನ್ನು ಜಮ್ಮುಕಾಶ್ಮೀರಕ್ಕೆ ಅನುಷ್ಠಾನಕ್ಕೆ ತರುವ ಕೆಲಸ ಮಾಡಲಾಗಿದೆ. ಈ ಅಭಿವೃದ್ಧಿಗೆ ದೇಶದ ಮತದಾರರು ಕಾರಣ. ಸದೃಢ ಸರಕಾರ ನೀಡಿದ ಮತದಾರರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.