ತುಳು ಭಾಷೆ ಅಧಿಕೃತ ಭಾಷೆಯೆಂಬ ಘೋಷಣೆಗೆ “ತಾಂತ್ರಿಕ ದೋಷ’ ಅಡ್ಡಿ

ದೈವ-ದೇವರಿಗೆ ಮೊರೆ ಅಭಿಯಾನಕ್ಕೆ ಚಾಲನೆ

Team Udayavani, Jun 13, 2022, 5:15 AM IST

ತುಳು ಭಾಷೆ ಅಧಿಕೃತ ಭಾಷೆಯೆಂಬ ಘೋಷಣೆಗೆ “ತಾಂತ್ರಿಕ ದೋಷ’ ಅಡ್ಡಿ

ಕಾಪು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಹಿತವಾಗಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂಬ ಬೇಡಿಕೆ ಈಡೇರಿಕೆಗೆ ಅಡ್ಡಿಯಾಗಿರುವ “ತಾಂತ್ರಿಕ ದೋಷ’ದ ನಿವಾರಣೆಗಾಗಿ ತುಳುನಾಡಿನ ವಿವಿಧ ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ನಡೆಸಲು ಉದ್ದೇಶಿಸಿರುವ ದೈವ – ದೇವರಿಗೆ ಮೊರೆ ಎಂಬ ವಿನೂತನ ಅಭಿಯಾನಕ್ಕೆ ಬಾರ್ಕೂರಿನಲ್ಲಿ ರವಿವಾರ ಚಾಲನೆ ನೀಡಲಾಯಿತು.

ಇಲ್ಲಿನ ಶ್ರೀ ಪಂಚಲಿಂಗೇಶ್ವರ ಮತ್ತು ತಾಯಿ ಭುವನೇಶ್ವರಿ ದೇವಸ್ಥಾನದಲ್ಲಿ ಆಳುಪ ರಾಜ ವಂಶಸ್ಥ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ| ಆಕಾಶ್‌ರಾಜ್‌ ಜೈನ್‌ ಅವರು ಪ್ರಾರ್ಥನೆಗೈಯ್ಯುವ ಮೂಲಕ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿದರು.

ತುಳುವರು ಮೊದಲು ದೈವ ದೇವರನ್ನು ನೆನೆಯುವುದು ವಾಡಿಕೆ. ಹಾಗಾಗಿ ತುಳು ಭಾಷೆಗೆ ಸೂಕ್ತ ಸ್ಥಾನಮಾನ ನೀಡುವಲ್ಲಿ ಅಡ್ಡಿಯಾಗುತ್ತಿದೆ ಎನ್ನಲಾಗಿರುವ ತಾಂತ್ರಿಕ ದೋಷಗಳ ನಿವಾರಣೆಯಾಗಲಿ ಎಂಬ ಉದ್ದೇಶದೊಂದಿಗೆ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡು ಮತ್ತು ತುಳು ಪರ ಹೋರಾಟಗಾರರು ತಮ್ಮ ಹತ್ತಿರದ ದೈವಾಲಯ ಮತ್ತು ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದಾರೆ.

ತುಳುನಾಡಿನ ಧಾರ್ಮಿಕ ಕ್ಷೇತ್ರಗ‌ಳಾದ ಪುಂಡರೀಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬೇಲಾಡಿ, ಶ್ರೀ ಬ್ರಹ್ಮ ಮೊಗೇರ ದೇವಸ್ಥಾನ ಅಲಿಮಾರು ಗುಡ್ಡೆ ಈದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಲ್ಪೆ ಕಲ್ಮಾಡಿ ಕೊರಗಜ್ಜನ ಕಟ್ಟೆ, ಶ್ರೀ ಮಹಾಂಕಾಳಿ ಮಠ ಪಳ್ಳಿ, ಬಾರ್ಕೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕುಂಬ್ಳೆ ಸಿರಿಯಾ ಶಂಕರನಾರಾಯಣ ದೇವಸ್ಥಾನ, ಮಂಜೇಶ್ವರ – ಕಾಸರಗೋಡು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಸಹಿತ ವಿವಿಧ ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲಾಯಿತು.

ದೈವ ಪ್ರೇರಣೆಯಾಗಲಿ
ತುಳುನಾಡಿನ ದೈವ ದೇವರು ಎಲ್ಲರಿಗೂ ಸದ್ಬುದ್ಧಿ ನೀಡಿ ತುಳು ಭಾಷೆಗೆ ಸಿಗಬೇಕಿರುವ ಮಾನ್ಯತೆಯನ್ನು ದೊರಕಿಸಿ ಕೊಡಲು ದೈವ ಪ್ರೇರಣೆಯಾಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಆಕಾಶ್‌ರಾಜ್‌ ಜೈನ್‌ ತಿಳಿಸಿದ್ದಾರೆ.

ನಿರಂತರ ಹೋರಾಟ
ಬಹಳಷ್ಟು ವರ್ಷಗಳಿಂದ ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂಬ ಬೇಡಿಕೆಯಿದೆ. ಮಾತ್ರವಲ್ಲದೆ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆಯೂ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನೇತೃತ್ವದ ನಿಯೋಗವು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮನವಿ ನೀಡಿತ್ತು. ವರ್ಷದ ಹಿಂದೆ ಬೃಹತ್‌ ಟ್ವಿಟರ್‌ ಅಭಿಯಾನ ನಡೆಸಿ ಆಗ್ರಹಿಸಲಾಗಿತ್ತು. ಹ್ಯಾಶ್‌ ಟ್ಯಾಗ್‌ ಮೂಲಕ ಟ್ವೀಟ್‌ ಮಾಡಲಾಗಿತ್ತು. ಕರಾವಳಿಯ ಶಾಸಕರು ಮತ್ತು ಸಂಸದರು ಕೂಡ ಇದಕ್ಕೆ ಬೆಂಬಲ ಸೂಚಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಅವರು ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸುವುದು ನನ್ನ ಕಾರ್ಯಸೂಚಿಯಲ್ಲಿ ಆದ್ಯತೆಯ ಸ್ಥಾನದಲ್ಲಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.