ಹತ್ತೇ ನಿಮಿಷ ವನ್ಯಜೀವಿ ಮಂಡಳಿ ಸಭೆ- ಖಂಡ್ರೆ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿಗೆ ಒಪ್ಪಿಗೆ


Team Udayavani, Aug 22, 2023, 9:39 PM IST

khandre

ಬೆಂಗಳೂರು: ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ರಚಿಸಲು ಒಪ್ಪಿಗೆ ಸೂಚಿಸಿರುವ ಸಿಎಂ, ವನ್ಯಜೀವಿ ಮಂಡಳಿ ಮುಂದೆ ಬರುವ ವಿಷಯಗಳನ್ನು ಸ್ಥಾಯಿ ಸಮಿತಿ ಮುಂದೆ ಮಂಡಿಸಿ, ಒಪ್ಪಿಗೆ ಪಡೆಯುವಂತೆಯೂ ಸೂಚಿಸಿದ್ದಾರೆ.

ಸರ್ಕಾರ ರಚನೆಯಾದ ಬಳಿಕ ತಮ್ಮ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ಕರೆದಿದ್ದ ವನ್ಯಜೀವಿ ಮಂಡಳಿ ಸಭೆಯು ಕೇವಲ 10 ನಿಮಿಷಗಳ ಕಾಲ ನಡೆದಿದ್ದು ಸಭೆಯ ಮುಂದಿದ್ದ 30ಕ್ಕೂ ಹೆಚ್ಚು ವಿಷಯಗಳನ್ನು ಯಾವುದೇ ಚರ್ಚೆ ಇಲ್ಲದೆ ಮುಂದೂಡಲಾಯಿತು.

ಮಂಗಳವಾರ ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ವನ್ಯಜೀವಿ ಮಂಡಳಿ ಸಭೆ ಕರೆಯಲಾಗಿತ್ತು. ಮಧ್ಯಾಹ್ನದಿಂದ ಶಕ್ತಿ ಭವನದಲ್ಲಿ ಕೆಪಿಸಿಎಲ್‌ ಸಭೆಯಲ್ಲೇ ಮಗ್ನರಾಗಿದ್ದ ಸಿಎಂ, ವನ್ಯಜೀವಿ ಮಂಡಳಿ ಸಭೆಯನ್ನು ಕೃಷ್ಣಾ ಬದಲು ಶಕ್ತಿಭವನಕ್ಕೆ ಸ್ಥಳಾಂತರಿಸಿದರು. ಅಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆಯಂತೆ ನಡೆಸಿದ ಸಿಎಂ, ಹೊಸ ಸರ್ಕಾರ

ಬಂದಾಗಿನಿಂದ ವನ್ಯಜೀವಿ ಮಂಡಳಿ ರಚನೆ ಆಗಿಲ್ಲ. ಹೀಗಾಗಿ ಮಂಡಳಿಯ ಮರುರಚನೆ ಮಾಡಬೇಕೆಂದು ಅಧಿಕಾರಿಗಳು ಪ್ರಸ್ತಾವನೆ ಮಂಡಿಸಿದರು.
ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿಂತಿಸುವುದಾಗಿ ತಿಳಿಸಿದ ಸಿಎಂ, ಸದ್ಯಕ್ಕೆ ಅರಣ್ಯ ಸಚಿವರ ಅಧ್ಯಕ್ಷತೆಯ ಸ್ಥಾಯಿ ಸಮಿತಿ ರಚಿಸಲು ಒಪ್ಪಿಗೆ ಸೂಚಿಸಿದರು. ಮಂಡಳಿ ಮುಂದೆ ಯಾವುದೇ ವಿಷಯ ತರುವ ಮುನ್ನ ಸ್ಥಾಯಿ ಸಮಿತಿಯ ಒಪ್ಪಿಗೆ ಪಡೆದು ಬರುವಂತೆ ನಿರ್ದೇಶನ ನೀಡಿದರು.

ಚರ್ಚೆಗೆ ಬರಬೇಕಿದ್ದ ಮಹತ್ವದ ವಿಷಯಗಳು: ಶರಾವತಿ ಹಿನ್ನೀರಿನಿಂದ ಮುಳುಗಡೆಯಾದ ಪ್ರದೇಶ ಮತ್ತು ಅಲ್ಲಿನ ಸಂತ್ರಸ್ತರ ವಿಚಾರ, ಮಹದಾಯಿ ಯೋಜನೆಯ ಪ್ರಮುಖ ಹಂತವಾದ ಕಳಸಾ-ಬಂಡೂರಿ ನಾಲಾ ಜೋಡಣೆಗೆ ಅಡ್ಡಿಯಾಗಿರುವ ಪರಿಸರ ಅನುಮತಿ, ರಾಷ್ಟ್ರೀಯ ಹುಲಿ ಯೋಜನೆಯೂ ಬರುವುದರಿಂದ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದಲೂ ಅನುಮತಿ ಪಡೆಯಬೇಕಿದೆ. ಈ ಬಗ್ಗೆ ತೀರ್ಮಾನಿಸುವ ವಿಚಾರವೂ ಇತ್ತು.

ಹೆಸರುಘಟ್ಟ ಹುಲ್ಲುಗಾವಲನ್ನು ಸಂರಕ್ಷಿತ ವಲಯವೆಂದು ಘೋಷಿಸುವ ವಿಚಾರವೂ ಇತ್ತು. ಸುಮಾರು 5 ಸಾವಿರ ಎಕರೆಯಲ್ಲಿರುವ ಹುಲ್ಲುಗಾವಲಿನಲ್ಲಿ ಹಾಲು ಒಕ್ಕೂಟ, ತೋಟಗಾರಿಕಾ ಬೆಳೆಗಳಿಗೆ ಸಂಬಂಧಿಸಿದ ಸಂಶೋಧನಾಲಯ, ಕುಕ್ಕುಟ ಉದ್ಯಮ, ಡ್ಯಾನಿಶ್‌ ಫಾರಂ ಸೇರಿದಂತೆ ಸರ್ಕಾರದ ಕೆಲ ಸಂಸ್ಥೆಗಳಿವೆ. 3 ಕೆರೆಗಳೂ ಇರುವ ಇಲ್ಲಿ 133 ಪ್ರಭೇದದ ಪಕ್ಷಿ ಸಂಕುಲ, 40 ಅಪರೂಪದ ಸಸ್ಯ ಪ್ರಭೇದ, ಚಿರತೆ ಸೇರಿದಂತೆ ಕೆಲ ವನ್ಯಜೀವಿಗಳ ಆವಾಸಸ್ಥಾನವೂ ಆಗಿದೆ. ಹೀಗಾಗಿ ಜೀವವೈವಿಧ್ಯ ಸಂರಕ್ಷಣೆ ಮಾಡಬೇಕೆಂಬ ದೃಷ್ಟಿಯಿಂದ ಸಂರಕ್ಷಿತ ವಲಯವಾಗಿ ಘೋಷಿಸುವ ವಿಚಾರ ಮಂಡಳಿ ಮುಂದಿದ್ದು, ಈ ಹಿಂದೆ ವಿರೋಧಗಳು ಬಂದಿದ್ದರಿಂದ ಮೂರು ಬಾರಿ ಮುಂದೂಡಿಕೆಯಾಗಿತ್ತು.

ಹೆಸರಘಟ್ಟ ಹುಲ್ಲುಗಾವಲನ್ನು ಇರುವಂತೆಯೇ ಸಂರಕ್ಷಣೆ ಮಾಡಬೇಕೇ ಹೊರತು, ಸಂರಕ್ಷಿತ ವಲಯವೆಂದು ಘೋಷಿಸಬಾರದು. ಇದಕ್ಕೆ ಸ್ಥಳೀಯರ ಭಾರೀ ವಿರೋಧವಿದೆ. ಹಾಗೊಂದು ವೇಳೆ ಸಂರಕ್ಷಿತ ವಲಯವೆಂಬ ತೀರ್ಮಾನವನ್ನು ವನ್ಯಜೀವಿ ಮಂಡಳಿ ತೆಗೆದುಕೊಂಡರೆ ಕಾನೂನು ಹೋರಾಟ ನಡೆಸುತ್ತೇವೆ.
ಎಸ್‌.ಆರ್‌. ವಿಶ್ವನಾಥ್‌, ಯಲಹಂಕ ಶಾಸಕ

ಟಾಪ್ ನ್ಯೂಸ್

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.