ಶಂಕಿತ ಉಗ್ರನಿಗೆ ನಕಲಿ ಶ್ಯೂರಿಟಿ ನೀಡುತ್ತಿದ್ದ ಆರೋಪಿ ಬಂಧನ

ದಾಖಲೆಗಳ ಪರಿಶೀಲನೆ ವೇಳೆ ನಕಲಿ ಎಂಬುದು ಗೊತ್ತಾಗಿತ್ತು. ಹೀಗಾಗಿ ಕೋರ್ಟ್‌ ಎಚ್ಚರಿಕೆ ನೀಡಿತ್ತು.

Team Udayavani, Oct 21, 2022, 11:24 AM IST

ಶಂಕಿತ ಉಗ್ರನಿಗೆ ನಕಲಿ ಶ್ಯೂರಿಟಿ ನೀಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ನಿಷೇಧಿತ ಸಿಮಿ ಹಾಗೂ ಅಲ್‌ -ಹಿಂದ್‌ ಉಗ್ರ ಸಂಘಟನೆ ಜತೆ ಸಂಪರ್ಕ ಹಾಗೂ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಆರೋಪಿಗೆ ನಕಲಿ ಶ್ಯೂರಿಟಿ ನೀಡಲು ಬಿಡುಗಡೆ ಯತ್ನಿಸಿದ ಆರೋಪಿಯನ್ನು ಕೋರ್ಟ್‌ ವಶಕ್ಕೆ ಪಡೆಯುವಂತೆ ಸೂಚಿಸಿದ್ದು, ಆರೋಪಿಯನ್ನು ಹಲಸೂರುಗೇಟ್‌ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೋಣನಕುಂಟೆ ನಿವಾಸಿ ಕೆ.ಜಿ. ನಾಗಭೂಷಣ್‌ ನನ್ನು ವಶಕ್ಕೆ ಪಡೆಯಲು ಕೋರ್ಟ್‌ ಸೂಚಿಸಿದೆ. ಆರೋಪಿ 2020ರಲ್ಲಿ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ 11ನೇ ಆರೋಪಿ ಸಲೀಂ ಖಾನ್‌ ಆಲಿಯಾಸ್‌ ಕೋಲಾರ ಸಲೀಂಗೆ ನಕಲಿ ಶ್ಯೂರಿಟಿ ನೀಡಿದ್ದ ಎಂದು ಮೂಲಗಳು ತಿಳಿಸಿವೆ.

ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿದಲ್ಲದೆ, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ತಮಿಳುನಾಡಿನ ಕ್ಯೂಬ್ರ್ಯಾಚ್‌ ಪೊಲೀಸ್‌
ಮತ್ತು ಸ್ಥಳೀಯರ ಪೊಲೀಸರ ಕಾರ್ಯಾಚರಣೆಯಲ್ಲಿ ಸುಮಾರು 14ಕ್ಕೂ ಅಧಿಕ ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಈ ವೇಳೆ ಕೋಲಾರದ ರಹಮತ್‌ ನಗರ ನಿವಾಸಿ ಸಲೀಂ ಖಾನ್‌ನನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಈತನಿಗೆ ಕೋರ್ಟ್‌ ಈತನಿಗೆ ಷರತ್ತುಬದ್ಧ ಜಾಮೀನು ಮಂಜೂರಿಗೆ ಅವಕಾಶ ನೀಡಿತ್ತು.

ಆಗ ಆರೋಪಿ ನಾಗ ಭೂಷಣ್‌ ಮುಳಬಾಗಿಲು ತಾಲೂಕಿನ ಸರ್ವೆ ನಂ 158/3ರ 0.13 ಗುಂಟೆಗೆ ಸಂಬಂಧಿಸಿದ ಆರ್‌ಟಿಸಿ, ಆಧಾರ್‌ ಕಾರ್ಡ್‌ ಹಾಗೂ ಇತರೆ ದಾಖಲೆಗಳನ್ನು ಲಗತ್ತಿಸಿ ಸಲೀಂ ಖಾನ್‌ಗೆ ಶ್ಯೂರಿಟಿ ನೀಡಲು ಬಂದಿದ್ದ. ಈ ನಿವೇಶನದ ಮಾರು ಕಟ್ಟೆ ಮೌಲ್ಯ ಅಂದಾಜು 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದಾಖಲೆಗಳ ಪರಿಶೀಲನೆ ವೇಳೆ ನಕಲಿ ಎಂಬುದು ಗೊತ್ತಾಗಿತ್ತು. ಹೀಗಾಗಿ ಕೋರ್ಟ್‌ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿ ಇದೇ ರೀತಿ ಸುಮಾರು ನಾಲ್ಕು ಬಾರಿ ಕೋರ್ಟ್‌ಗೆ ವಂಚಿಸಲು ಯತ್ನಿಸಿದ್ದ. ಆಗ ಕಠಿಣವಾದ ಶಿಕ್ಷೆ ನೀಡವುದಾಗಿ ಎಚ್ಚರಿಕೆ ನೀಡಿತ್ತು. ಅಲ್ಲದೆ, ಈ ದಾಖಲೆಗಳ ಬಗ್ಗೆ ಮಾಹಿತಿ ನೀಡುವಂತೆ ಖುದ್ದು ಕೋರ್ಟ್‌ ಮುಳಬಾಗಿಲು ಉಪನೋಂದಣಾಧಿಕಾರಿಗಳಿಗೆ ಸೂಚಿಸಿತ್ತು.

ಹೀಗಾಗಿ ಸಬ್‌ರಿಜಿಸ್ಟ್ರಾರ್‌ ಪರಿಶೀಲಿಸಿದಾಗ, ಆರೋಪಿ ಇದೇ ದಾಖಲೆಗಳನ್ನು ಬೇರೆ ಕೋರ್ಟ್‌ಗಳಿಗೆ ಕೆಲ ಪ್ರಕರಣಗಳ ಆರೋಪಿ ಗಳಿಗೆ ಜಾಮೀನು ನೀಡಲು ಸಲ್ಲಿಸಿರುವುದು ಪತ್ತೆಯಾ ಗಿತ್ತು. ಆದರೂ ಐದನೇ ಬಾರಿಗೆ ಶ್ಯೂರಿಟಿ ನೀಡಲು ಮುಂದಾಗಿದ್ದ. ಗುರುವಾರ ವಿಚಾರಣೆ ಹಾಜರಾಗಿದ್ದ ಆರೋಪಿ ನಾಗಭೂಷಣ್‌ ವಿರುದ್ಧ ಕಾನೂನುಕ್ರಮಕೈಗೊಂಡು ವಶಕ್ಕೆ ಪಡೆಯುವಂತೆ ಕೋರ್ಟ್‌ ಸೂಚನೆ ನೀಡಿತ್ತು.ಆರೋಪಿಯನ್ನು ಹಲಸೂರು ಗೇಟ್‌ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಎನ್‌ಐಎ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್‌ ವಾದ ಮಂಡಿಸಿದರು.

ಟಾಪ್ ನ್ಯೂಸ್

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.