Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

ಉಡುಪಿ ನಗರಸಭೆಯಿಂದ ವಿನೂತನ ಯೋಜನೆಗೆ ಚಿಂತನೆ; ಸಿಹಿ ಜತೆ ಶುಭ ಸಂದೇಶದ ಪತ್ರ

Team Udayavani, Sep 30, 2024, 6:55 AM IST

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

ಉಡುಪಿ: ಇನ್ನು ನಗರಸಭೆ ವ್ಯಾಪ್ತಿಯಲ್ಲಿ ಜನಿಸಿರುವ ಮಕ್ಕಳ ಮನೆಗೇ ಬರಲಿದೆ ಜನನ ಪ್ರಮಾಣ ಪತ್ರ. ಜತೆಗೆ ನಗರಸಭೆಯಿಂದ ಸಿಹಿತಿಂಡಿಯೂ ಇರಲಿದೆ!

ನಗರಸಭೆಯಲ್ಲಿ ಜನನ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಪ್ರಯಾಸಪಡುವುದನ್ನು ಗಮನಿಸಿದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಜನರ ಕಷ್ಟ ಪರಿಹಾರಕ್ಕೆ ಇಂಥದ್ದೊಂದು ಹೊಸ ಹಾಗೂ ಮಾದರಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ನಗರದಲ್ಲಿ ಜನಿಸಿದ ಪ್ರತಿ ಮಗುವಿನ ಮನೆಗೆ ಜನನ ಪ್ರಮಾಣ ಪತ್ರವನ್ನು ಸ್ವೀಟ್‌ ಬಾಕ್ಸ್‌ ಹಾಗೂ ಮಗುವು ನಗರದ ಶ್ರೇಷ್ಠ ಪ್ರಜೆಯಾಗಿ ರೂಪುಗೊಳ್ಳಲಿ ಎಂಬ ಶುಭ ಸಂದೇಶದೊಂದಿಗೆ ತಲುಪಿಸಲು ಚಿಂತನೆ ನಡೆಸಲಾಗುತ್ತಿದೆ.

ಈಗಿನ ಕಿರಿಕಿರಿಯೇನು?
ಸದ್ಯ ನಗರಸಭೆಯಲ್ಲಿ ಜನನ, ಮರಣ ಪತ್ರ ದಾಖಲಾತಿ (ಅರ್ಜಿ ಸ್ವೀಕಾರ ಹಾಗೂ ವಿತರಣೆ ವಿಭಾಗ) ವಿಭಾಗದ ಸಿಬಂದಿಯು ಜನರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂಬ ದೂರು ಇದೆ. ಹಲವು ಬಾರಿ ಸಾಮಾನ್ಯ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದ್ದು, ಸಿಬಂದಿ ಬದಲಾವಣೆಗೂ ಆಗ್ರಹ ಕೇಳಿ ಬಂದಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲದೆ ಇರುವುದರಿಂದ ಸಮಸ್ಯೆಯೂ ಬಗೆಹರಿ ದಿಲ್ಲ. ಈಗ ಚುನಾಯಿತರ ಆಡಳಿತ ಪುನಃ ಆರಂಭವಾಗಿದ್ದು, ಈ ವಿಭಾಗದ ಸಿಬಂದಿ ಬದಲಾವಣೆಯೂ ನಡೆದಿದೆ.

ಏನಿದು ಹೊಸ ಯೋಜನೆ?
ಮಗು ಹುಟ್ಟಿದಾಗ ಆ ಮನೆಯಲ್ಲಿ ಸಂತೋಷ, ಸಂಭ್ರಮ ಇರುತ್ತದೆ. ಪ್ರತಿ ಮಗುವೂ ನಗರದ ಹೆಮ್ಮೆ. ಜನನ ಪ್ರಮಾಣ ಪತ್ರವನ್ನು ನಗರಸಭೆ ಸಿಬಂದಿಯೇ ನೇರವಾಗಿ ಮಗುವಿನ ಮನೆಗೆ ತೆರಳಿ ಸ್ವೀಟ್‌ ಬಾಕ್ಸ್‌ ಹಾಗೂ ಶುಭ ಸಂದೇಶದೊಂದಿಗೆ ನೀಡಲಿದ್ದಾರೆ. ಇದರ ಜತೆಗೆ ಇನ್ನೇನಾದರೂ ಸೇರಬೇಕೆ ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿ ಆಸ್ಪತ್ರೆಗಳೇ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುತ್ತಿವೆ. ಆದರೂ ಮಗುವಿನ ಪಾಲಕ, ಪೋಷಕರು ಅರ್ಜಿ ಸಲ್ಲಿಸಿದ ಬಳಿಕ ನಿರ್ದಿಷ್ಟ ದಿನಗಳೊಳಗೆ ನಗರಸಭೆಗೆ ಬಂದು ಪ್ರಮಾಣ ಪತ್ರವನ್ನು ಪಡೆಯಬೇಕಿತ್ತು.

ಸಿಬಂದಿ ನಿರ್ವಹಣೆ ಸವಾಲು
ಯೋಜನೆ ಅನುಷ್ಠಾನಕ್ಕೆ ಸಿಬಂದಿ ನಿರ್ವಹಣೆಯೇ ಸವಾಲು. ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಯೋಜನೆ ಅನುಷ್ಠಾನದ ನಿಟ್ಟಿನಲ್ಲಿ ನಗರಸಭೆ ರೂಪುರೇಷೆ ಸಿದ್ಧಪಡಿಸಲಿದೆ. ಇದಕ್ಕೆ ನಿರ್ದಿಷ್ಟ ಸಿಬಂದಿಯನ್ನು ನಿಯೋಜಿಸಿದಾಗ ಮಾತ್ರ ಯೋಜನೆಯ ಸಮರ್ಪಕ ಅನುಷ್ಠಾನ ಸಾಧ್ಯ.

ನಗರ ವ್ಯಾಪ್ತಿಯ ನಾಗರಿಕರಿಗೆ ನಗರಸಭೆಯಿಂದ ಸುಲಭವಾಗಿ ಸೇವೆ ದೊರೆಯಬೇಕು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸುತ್ತಿದ್ದೇವೆ. ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಇದಕ್ಕೊಂದು ಸ್ಪಷ್ಟ ರೂಪ ನೀಡಿ, ಅನುಷ್ಠಾನ ಮಾಡಲಿದ್ದೇವೆ. ನಗರಸಭೆ ವ್ಯಾಪ್ತಿಯಿಂದ ಹೊರಗಿರುವವರಿಗೆ ಇದು ಅನ್ವಯವಾಗುವುದಿಲ್ಲ.
– ಪ್ರಭಾಕರ ಪೂಜಾರಿ, ಅಧ್ಯಕ್ಷರು ನಗರಸಭೆ ಉಡುಪಿ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.