Mangaluru ಅಡ್ಯಾರ್ನಲ್ಲೂ ಕುಸಿದ ಮನೆಯ ಆವರಣ ಗೋಡೆ
Team Udayavani, Jun 26, 2024, 11:47 PM IST
ಮಂಗಳೂರು: ನಗರದ ಕಣ್ಣೂರು ಗ್ರಾಮದ ಕುಂಡಾಲದಲ್ಲಿ ಮುದಾಸಿರ್ ಅವರ ಮನೆಯ ಆವರಣ ಗೋಡೆ ಬುಧವಾರ ಮಧ್ಯಾಹ್ನ ಕುಸಿದಿದ್ದು, ಪಕ್ಕದ ಮನೆಗೂ ಹಾನಿಯಾಗಿದೆ. ಆ ವೇಳೆ ಮನೆಯ ಅಂಗಳದಲ್ಲಿ ಯಾರೂ ಇಲ್ಲದ ಕಾರಣ ಸಂಭವನೀಯ ಅಪಾಯ ತಪ್ಪಿದೆ.
ಘಟನೆ ಬಗ್ಗೆ ಮನೆ ಮಾಲಕ ಮುದಾಸಿರ್ ಅವರು “ಉದಯವಾಣಿ’ ಜತೆ ಮಾತನಾಡಿ, “ಬೆಳಗ್ಗಿನಿಂದಲೇ ಭಾರೀ ಮಳೆಯಾಗಿದ್ದು, ಮಧ್ಯಾಹ್ನ 12 ಗಂಟೆಗೆ ಮನೆಯ ಆವರಣ ಗೋಡೆ ಕುಸಿದಿದೆ. ಘಟನೆಯ ಐದು ನಿಮಿಷ ಹಿಂದೆ ನಾನು ಅದೇ ಜಾಗದಲ್ಲಿ ನಿಂತು ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡುತ್ತಿದ್ದೆ. ಸ್ನಾನಕ್ಕೆ ಹೋಗಿ ಬರುವಷ್ಟರಲ್ಲಿ ದೊಡ್ಡದಾಗಿ ಶಬ್ದವಾಗಿದ್ದು, ಆವರಣ ಗೋಡೆ ಬಿದ್ದಿತ್ತು. ಆ ವೇಳೆ ನಾವಿಬ್ಬರು ಮನೆಯೊಳಗೆ ಇದ್ದೆವು. ಮಕ್ಕಳು ಶಾಲೆಗೆ ಹೋಗಿದ್ದರು. ಆವರಣ ಗೋಡೆ ಕಟ್ಟಿ ಸುಮಾರು ಒಂದು ವರ್ಷ ಆಯಿತು’ ಎಂದು ತಿಳಿಸಿದ್ದಾರೆ.
ಮನೆ ಬೀಳುವ ಭೀತಿ
ಆವರಣ ಗೋಡೆ ಬಿದ್ದಿರುವ ಕಾರಣ ಈಗ ಮನೆಗೂ ಅಪಾಯ ಎದುರಾಗಿದೆ. ಈ ಬಗ್ಗೆ ಪಾಲಿಕೆಗೆ ತಿಳಿಸಿದ್ದು, ಮಳೆ ನಿಲ್ಲದೆ ಏನೂ ಮಾಡಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದರು. ಸ್ಥಳಕ್ಕೆ ಪಾಲಿಕೆ ಆಯುಕ್ತ ಆನಂದ್, ಮನಪಾ ಸದಸ್ಯೆ ಚಂದ್ರಾವತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ
Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ
Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’
BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು
Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ
MUST WATCH
ಹೊಸ ಸೇರ್ಪಡೆ
Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
Sandalwood; ಟ್ರೇಲರ್ನಲ್ಲಿ ‘ತಾಜ್’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ
Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.