![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 8, 2019, 3:07 AM IST
ಹುಬ್ಬಳ್ಳಿ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಜೆಡಿಎಸ್ ಪಾಲಿನ ನಿಗಮ-ಮಂಡಳಿಗಳಿಗೆ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡದಿರುವುದಕ್ಕೆ ಅಸಮಾಧಾನ-ಆಕ್ರೋಶ ಕಟ್ಟೆಯೊಡೆಯುವ ಹಂತಕ್ಕೆ ಬಂದಿದೆ. ಪಕ್ಷದ ವರಿಷ್ಠರ ನಿಲುವಿಗೆ ಜೆಡಿಎಸ್ನಲ್ಲಿ ಕುದಿಮೌನ ಹೆಚ್ಚತೊಡಗಿದೆ.
ನಿಗಮ-ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ 70:30 ಅನುಪಾತದಲ್ಲಿ ಹಂಚಿಕೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ಅನೇಕ ನಿಗಮ-ಮಂಡಳಿಗೆ ನೇಮಕ ಕೈಗೊಂಡಿದ್ದರೂ, ಜೆಡಿಎಸ್ನಲ್ಲಿ ನೇಮಕ ಪ್ರಕ್ರಿಯೆ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ-ಆಕ್ರೋಶ ಸ್ಫೋಟದ ಹಂತಕ್ಕೆ ಬಂದಿದೆ ಎನ್ನಲಾಗಿದೆ.
ಅಧಿಕಾರ ಬೇಡವೆ?: ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್, ತನ್ನ ಪಾಲಿನ ಎರಡೂ ಸಚಿವ ಸ್ಥಾನಗಳನ್ನು ಖಾಲಿ ಇರಿಸಿಕೊಂಡಿದೆ. ಜತೆಗೆ, ನಿಗಮ-ಮಂಡಳಿಯ ಯಾವುದೇ ನೇಮಕ ಕೈಗೊಂಡಿಲ್ಲ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಿಗೆ ಸರಕಾರ ಇದ್ದರೂ ಅಧಿಕಾರದ ಅವಕಾಶ ನೀಡದಿರುವ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎರಡು ಸಚಿವ ಸ್ಥಾನವನ್ನು ಯಾರಿಗಾದರೂ ಕೊಡಲಿ, ಕೊಟ್ಟರೆ ಕನಿಷ್ಠ ಅವರಾದರೂ ಅಧಿಕಾರ ಹೊಂದುತ್ತಾರೆ. ಅದು ಬಿಟ್ಟು ಖಾಲಿ ಇರಿಸಿಕೊಂಡು, ನಿಮಗೇ ಸಚಿವ ಸ್ಥಾನ ಎಂದು ಶಾಸಕರ ಮೂಗಿಗೆ ತುಪ್ಪ ಸವರುವ ಯತ್ನವನ್ನು ಇನ್ನೆಷ್ಟು ದಿನ ಮುಂದುವರಿಸುತ್ತೀರಿ ಎಂಬ ಪ್ರಶ್ನೆಯನ್ನು ಜೆಡಿಎಸ್ನವರು ಆಂತರಿಕವಾಗಿ ಕೇಳತೊಡಗಿದ್ದಾರೆ. ಅನೇಕ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ವರಿಷ್ಠರು ಯಾರಿಗಾದರೂ ಕೊಡಲಿ, ಅದು ಬಿಟ್ಟು ದಿನದೂಡುತ್ತ ಹೋಗುವುದರಿಂದ ಏನು ಪ್ರಯೋಜನವಿದೆ ಎಂಬ ಅಸಮಾಧಾನ ಹಲವು ಶಾಸಕರದ್ದಾಗಿದೆ ಎಂದು ಹೇಳಲಾಗುತ್ತಿದೆ.
2006ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದಲ್ಲೂ ಜೆಡಿಎಸ್ ಹಾಗೂ ಬಿಜೆಪಿ ನಡುವೆ ನಿಗಮ-ಮಂಡಳಿ ಪಾಲು ಹಂಚಿಕೆಯಾಗಿತ್ತು. ಬಿಜೆಪಿಯವರು ತಮ್ಮ ಪಾಲಿನ ನಿಗಮ-ಮಂಡಳಿ ಆಯ್ಕೆ ಕೈಗೊಂಡರೂ, 20 ತಿಂಗಳ ಅಧಿಕಾರಾವಧಿಯಲ್ಲಿ ಜೆಡಿಎಸ್ ನಿಗಮ-ಮಂಡಳಿ ಆಯ್ಕೆ ಕೈಗೊಳ್ಳದೆ ಕಾರ್ಯಕರ್ತರಿಗೆ ನಿರಾಸೆ ಉಂಟು ಮಾಡಿತ್ತು.
ಇದೀಗ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಹೆಚ್ಚಿನ ಪೈಪೋಟಿ, ಗೊಂದಲದ ನಡುವೆಯೂ ಕಾಂಗ್ರೆಸ್ನವರೇ ಅನೇಕ ನಿಗಮ-ಮಂಡಳಿಗಳಿಗೆ ನೇಮಕ ಮಾಡಿ, ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಿದ್ದಾರೆ. ಆದರೆ, ಇದುವರೆಗೂ ಜೆಡಿಎಸ್ನಿಂದ ಯಾವುದೇ ನಿಗಮ-ಮಂಡಳಿಗಳಿಗೆ ನೇಮಕ ಮಾಡದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
1994-1999ರ ಅವಧಿಯಲ್ಲಿ ಜನತಾದಳ ಅಧಿಕಾರದಲ್ಲಿತ್ತು. ನಂತರ, 2004ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ, 2006ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರಗಳು ಅಧಿಕಾರ ನಡೆಸಿದವು. 2006ರಿಂದ ಇಲ್ಲಿವರೆಗೆ ಜೆಡಿಎಸ್ ಕಾರ್ಯಕರ್ತರು ಯಾವುದೇ ನಿಗಮ-ಮಂಡಳಿಗಳಲ್ಲಿ ಅಧಿಕಾರ ಅನುಭವಿಸದೇ ಚಡಪಡಿಸುತ್ತಿದ್ದಾರೆ. 2018ರಲ್ಲಿ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಾದರೂ ವನವಾಸ ಮುಗಿದು ಯಾವುದಾದರೂ ನಿಗಮ-ಮಂಡಳಿಗಳಲ್ಲಿ ಅಧಿಕಾರ ಸ್ಥಾನ ಪಡೆಯಬಹುದೆಂಬ ಜೆಡಿಎಸ್ ಕಾರ್ಯಕರ್ತರ ನಿರೀಕ್ಷೆ, ನಿರೀಕ್ಷೆಯಾಗಿಯೇ ಮುಂದುವರಿದಿದೆ.
23ರ ನಂತರ ಸ್ಫೋಟ ಸಾಧ್ಯತೆ?: ಕಾರ್ಯಕರ್ತರ ಕಡೆಗಣನೆ, ಪಕ್ಷದ ಪಾಲಿಗೆ ಬಂದ ನಿಗಮ-ಮಂಡಳಿ ಹಾಗೂ ಸಚಿವ ಸ್ಥಾನ ಭರ್ತಿ ಮಾಡದಿರುವ ವರಿಷ್ಠರ ಕ್ರಮದ ಬಗ್ಗೆ ಜೆಡಿಎಸ್ ಕಾರ್ಯಕರ್ತರು, ಮುಖಂಡರದಲ್ಲಿ ಕುದಿಯುತ್ತಿರುವ ಅಸಮಾಧಾನ-ಆಕ್ರೋಶ ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಪಕ್ಷದಲ್ಲಿ ಕಾರ್ಯಕರ್ತರ ನಿರ್ಲಕ್ಷ್ಯದ ಬಗ್ಗೆ ಧ್ವನಿ ಎತ್ತೋಣ, ಅಗತ್ಯವಾದರೆ ರಾಜಕೀಯವಾಗಿ ಬೇರೆ ನಿರ್ಣಯಕ್ಕೂ ಗಂಭೀರ ಚಿಂತನೆ ನಡೆಸೋಣ ಎಂಬ ಕೂಗು ಎದ್ದಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಿಗಮ-ಮಂಡಳಿಗಳಿಗೆ ನೇಮಕ ಮಾಡುವಲ್ಲಿ ಆಗಿರುವ ವಿಳಂಬದಿಂದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನ ಇರುವುದು ನಿಜ. ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ಅಧಿಕಾರದಲ್ಲಿದ್ದರೂ ಅವಕಾಶ ದೊರೆಯದಿದ್ದರೆ ಹೇಗೆಂಬ ನೋವು ತೋಡಿಕೊಂಡಿದ್ದಾರೆ. ಶೀಘ್ರವೇ ಮುಖ್ಯಮಂತ್ರಿ ಭೇಟಿ ಮಾಡಿ ಕಾರ್ಯಕರ್ತರ ಭಾವನೆ ತಿಳಿಸುತ್ತೇನೆ.
-ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ.
* ಅಮರೇಗೌಡ ಗೋನವಾರ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.