ಕೋವಿಡ್‌ ಮೊದಲ ಡೋಸ್‌ ಗುರಿ ಸಾಧನೆಗೆ ಶೇ. 1 ಕಗ್ಗಂಟು


Team Udayavani, Feb 10, 2022, 7:55 AM IST

ಕೋವಿಡ್‌ ಮೊದಲ ಡೋಸ್‌ ಗುರಿ ಸಾಧನೆಗೆ ಶೇ. 1 ಕಗ್ಗಂಟುಕೋವಿಡ್‌ ಮೊದಲ ಡೋಸ್‌ ಗುರಿ ಸಾಧನೆಗೆ ಶೇ. 1 ಕಗ್ಗಂಟು

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 99ರಷ್ಟು ಮಂದಿಗೆ ಕೊರೊನಾ ಲಸಿಕೆಯ ಮೊದಲ ಡೋಸ್‌ ನೀಡಲಾಗಿದ್ದು, ಬಾಕಿ ಇರುವ ಶೇ. 1ರಷ್ಟು ಜನರಿಗೆ ನೀಡುವುದೇ ಕಗ್ಗಂಟಾಗಿದೆ.

ಉಡುಪಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 9,99,000 ಮಂದಿ ಲಸಿಕೆ ಗುರಿ ನಿಗದಿಪಡಿಸಲಾಗಿತ್ತು. ಇದರಲ್ಲಿ 9,88,476 (ಶೇ. 99) ಜನರು ಮೊದಲ ಡೋಸ್‌ ಹಾಗೂ 8,87,100 (ಶೇ. 89) ಜನರು ದ್ವಿತೀಯ ಡೋಸ್‌ ಪಡೆದಿದ್ದಾರೆ. ದ.ಕ.ದಲ್ಲಿ ನಿಗದಿಪಡಿಸಿದ 17,15,000 ಜನರಲ್ಲಿ 17,01,128 (ಶೇ. 99) ಮಂದಿ ಪ್ರಥಮ ಡೋಸ್‌, 14,95,618 (ಶೇ. 87) ಜನರು ದ್ವಿತೀಯ ಡೋಸ್‌ ಹಾಕಿಸಿಕೊಂಡಿದ್ದಾರೆ. ಪ್ರಥಮ ಡೋಸ್‌ ಪಡೆದು ನಿರ್ದಿಷ್ಟ ದಿನಗಳ ಅನಂತರ ಎರಡನೇ ಡೋಸ್‌ ಪಡೆಯಲು ಜನರು ಸ್ವತಃ ಬರುತ್ತಿದ್ದಾರೆ. ಆದರೆ ಅನೇಕರು ಮೊದಲ ಡೋಸ್‌ ಪಡೆಯಲು ಇನ್ನೂ ಹಿಂದೇಟು ಹಾಕುತ್ತಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ರಾಯಚೂರು ಹಾಗೂ ಕಲಬುರಗಿ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳು ಮೊದಲ ಡೋಸ್‌ನಲ್ಲಿ ನಿಗದಿತ ಗುರಿ ಸಾಧಿಸಿವೆ. ಕೆಲವು ಜಿಲ್ಲೆಗಳು ಹೆಚ್ಚುವರಿ ಗುರಿಸಾಧನೆ ಮಾಡಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೊದಲ ಡೋಸ್‌ ಪಡೆಯದವರು ಯಾರು ಎಂಬ ಪಟ್ಟಿ ಜಿಲ್ಲಾಡಳಿತ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದೆ. ಆದರೆ ಅವರಿಗೆ ನೀಡಲು ಸಾಧ್ಯವಾಗುತ್ತಿಲ್ಲ.

ಅಧಿಕಾರಿಗಳೇ ರಂಗಕ್ಕೆ
ಉಭಯ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹ
ಶೀಲ್ದಾರ್‌ ಸಹಿತವಾಗಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಲಸಿಕೆ ಪಡೆಯದವರ ಮನೆಗೆ ಹೋಗಿ, ಮನವೊಲಿಸಿ ಲಸಿಕೆ ನೀಡುವ ಪ್ರಯತ್ನ ನಡೆಸುತ್ತಿದ್ದಾರೆ. ಗ್ರಾ.ಪಂ.ಗಳ ಕಾರ್ಯಪಡೆಗಳೂ ಸಕ್ರಿಯವಾಗಿವೆ.

ಇನ್ನೂ ಕನಿಷ್ಠ 15 ದಿನ ಬೇಕು
ರಾಜ್ಯ ಲಸಿಕೆ ಪಟ್ಟಿಯಲ್ಲಿ ಎರಡು ಜಿಲ್ಲೆಗಳು ಮೊದಲ ಮತ್ತು ಎರಡನೇ ಡೋಸ್‌ ನೀಡಿಕೆಯಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆಯಿದೆ. ಮೊದಲ ಡೋಸ್‌ ನೀಡಿಕೆಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಲು ಇನ್ನೂ ಕನಿಷ್ಠ 15 ದಿನ ಅಗತ್ಯವಿದೆ. ಉಡುಪಿಯಲ್ಲಿ ಸುಮಾರು 10 ಸಾವಿರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಸಾವಿರ ಮಂದಿ ಮೊದಲ ಡೋಸ್‌ ಪಡೆಯಲು ಬಾಕಿಯಿದ್ದಾರೆ. ಅವರಲ್ಲಿ ಬಹುತೇಕರನ್ನು ಜಿಲ್ಲಾಡಳಿತ ತಲುಪಿದೆ. ಅವರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡಲು ಇನ್ನೂ ಕನಿಷ್ಠ 15 ದಿನ ಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹಲವು ಕಾರಣ
ಉಭಯ ಜಿಲ್ಲೆಯಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮೊದಲ ಡೋಸ್‌ ಪಡೆಯದೇ ಇರುವವರು ಇದ್ದಾರೆ. 60ರಿಂದ 70 ವರ್ಷ ಮೇಲ್ಪಟ್ಟವರೂ ಇದ್ದಾರೆ. ಹಿರಿಯ ನಾಗರಿಕರಲ್ಲಿ ಬಹುತೇಕರು ದೀರ್ಘ‌ಕಾಲದ ಅನಾರೋಗ್ಯ, ವೈದ್ಯರ ಸಲಹೆ ಹಾಗೂ ನಿರಂತರ ಆರೋಗ್ಯ ಸಮಸ್ಯೆ ಇತ್ಯಾದಿ ಕಾರಣಗಳಿಂದ ಕೊರೊನಾ ಲಸಿಕೆ ಪಡೆದಿಲ್ಲ. ಇನ್ನು ಅರ್ಹ ಯುವ ಮತ್ತು ಮಧ್ಯವಯಸ್ಕರು ಉದಾಸೀನ, ಲಸಿಕೆ ಧಿಕ್ಕಾರ ಮನೋಭಾವದಿಂದ ತೆಗೆದುಕೊಳ್ಳುತ್ತಿಲ್ಲ. ಅನೇಕ ಕಡೆಗಳಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ವಲಸೆ ಹೋಗಿರುವವರ ಬಗ್ಗೆ ಸರಿಯಾದ ಮಾಹಿತಿಯನ್ನು ಕುಟುಂಬದವರು ನೀಡಿಲ್ಲ. ಹೊರಜಿಲ್ಲೆ, ರಾಜ್ಯಕ್ಕೆ ಹೋಗಿರುವವರು ಅಲ್ಲಿ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಸಿಗದೆ ಇರುವುದು ಸೇರಿ ಅನೇಕ ಅಂಶಗಳು ಗಮನಕ್ಕೆ ಬಂದಿವೆ.

ಜನಸಂಖ್ಯೆಯ ಆಧಾರದಲ್ಲಿ ಗುರಿನಿಗದಿ ಮಾಡಲಾಗಿದೆ. ಶೇ. 99ರಷ್ಟು ಗುರಿಸಾಧನೆ ಮಾಡಿದ್ದೇವೆ ಮತ್ತು ಉಳಿದ ಶೇ. 1ರಷ್ಟು ಜನರಿಗೆ ಮೊದಲ ಡೋಸ್‌ ನೀಡಲು ಬೇಕಾದ ಎಲ್ಲ ರೀತಿಯ ಕ್ರಮವನ್ನು ತೆಗೆದುಕೊಂಡಿದ್ದೇವೆ. ಅಧಿಕಾರಿಗಳು ಮನೆ ಮನೆಗೆ ಹೋಗುತ್ತಿದ್ದಾರೆ.
– ಡಾ| ಕಿಶೋರ್‌ ಕುಮಾರ್‌,
– ಡಾ| ನಾಗಭೂಷಣ ಉಡುಪ,
ದ.ಕ., ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳು

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.