ತಟ್ಟೆಯಲ್ಲಿದ್ದ ತುತ್ತು ಬಾಯಿಗೆ ಸೇರಲು ಪ್ರವಾಹ ಬಿಡಲಿಲ್ಲ


Team Udayavani, Aug 26, 2019, 3:07 AM IST

tatteyalli

ಬೆಳ್ತಂಗಡಿ: ಮಳೆಗಾಲ, ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸಮಯ. ಆದರೆ, ಆ ದಿನ ಮಾತ್ರ ಅಪ್ಪಳಿಸಿದ ಪ್ರವಾಹ ನಾವೀಗ ಒಪ್ಪೊತ್ತು ಊಟಕ್ಕೂ ಪರದಾಡುವಂತೆ ಮಾಡಿದೆ, ನಮ್ಮ ಕೃಷಿಯ ಬದುಕನ್ನೇ ಕಸಿದಿದೆ… ಇತ್ತೀಚಿನ ನೆರೆ-ಪ್ರವಾಹ ಸಂತ್ರಸ್ತರ ಮನದಾಳದ ನೋವಿನ ನುಡಿಗಳಿವು. “ನಾನು ಅಂದು ಮನೆಯಲ್ಲಿರಲಿಲ್ಲ. ನೆರೆಮನೆಯವರನ್ನು ಆಸ್ಪತ್ರೆಗೆ ಕರೆದುಕೊಂಡು ಮಂಗಳೂರಿಗೆ ತೆರಳಿದ್ದೆ. ಮನೆಯಲ್ಲಿ ಅಮ್ಮ, ಅಪ್ಪ ಇಬ್ಬರೇ ಇದ್ದರು.

ಹತ್ತಿರದ ಇನ್ನೊಂದು ಮನೆಯಲ್ಲಿರುವ ಅಣ್ಣ ಮತ್ತವರ ಮನೆ ಮಂದಿ ಅಂದು ದೇವರಂತೆ ನಮ್ಮ ಮನೆಗೆ ಊಟಕ್ಕೆ ಬಂದಿದ್ದರು. ಇನ್ನೇನು ಅನ್ನ ಕಲಸಿ ಬಾಯಿಗಿಡಬೇಕು ಎನ್ನುವಷ್ಟರಲ್ಲಿ ಭೀಕರ ಸ್ಫೋಟದಂತಹ ಸದ್ದು ಕೇಳಿಸಿತು. ಕಣ್ಣು ಮಿಟುಕಿಸುವಷ್ಟರಲ್ಲಿ ನೀರು ಮನೆಯೊಳಗೆ ನುಗ್ಗಿತ್ತು. ಹೊರ ಧಾವಿಸಿ ನೋಡಿದರೆ ಮನೆಯೆದುರಿನ ತೋಡು ಹೊಳೆಯಾಗಿತ್ತು. ಭಾರೀ ಮರಗಳು ಪರಸ್ಪರ ಲಟಲಟನೆ ಹೊಡೆದುಕೊಳ್ಳುತ್ತ, ಬೆಂಕಿಕಡ್ಡಿಗಳಂತೆ ತೇಲಿ ಬರುತ್ತಿದ್ದವು.

ಅಣ್ಣಂದಿರು ಅಪ್ಪ, ಅಮ್ಮನನ್ನು ಹೊತ್ತುಕೊಂಡೇ ಓಡಿ ಸಂಬಂಧಿಕರ ಮನೆ ಸೇರಿದರು’ ಎಂದು ಮಿತ್ತಬಾಗಿಲು ಕಲ್ಲೊಲೆಯ ಸತೀಶ್‌ ಗೌಡ ಆ ದಿನದ ಘಟನೆಯ ಭೀಕರತೆಯನ್ನು ನೆನೆದರು. ತಂದೆಗೆ ಹೃದಯ ಸಂಬಂಧಿ ಕಾಯಿಲೆಯಿದೆ, ಹೀಗಾಗಿ ಪ್ರವಾಹ ಅಪ್ಪಳಿಸುವುದಕ್ಕೆ ನಾಲ್ಕು ದಿನ ಹಿಂದೆಯಷ್ಟೇ ನಮ್ಮ ಮನೆಗೆ ಬಂದಿದ್ದರು. ಅಂದು ಅಣ್ಣಂದಿರಿಲ್ಲದೇ ಹೋಗಿದ್ದರೆ ಅಥವಾ ರಾತ್ರಿ ಸಮಯದಲ್ಲಿ ಪ್ರವಾಹ ಅಪ್ಪಳಿಸಿದ್ದರೆ ನಾನೀಗ ನಿಮಗೆ ಮಾತಿಗೆ ಸಿಗುತ್ತಿರಲೇ ಇಲ್ಲ… ಎಂದು ದುಃಖೀಸಿದರು ಸತೀಶ್‌.

ಸೊಸೆ ನನ್ನನ್ನು ಎಳೆದುಕೊಂಡೇ ಓಡಿದಳು: ನಾನು, ಮಗನ ಸಂಸಾರದ ಜತೆ ಮನೆಯಲ್ಲಿದ್ದೆವು. ನನಗೆ ನಡೆಯಲು ಸಾಧ್ಯವಿಲ್ಲ. ಮೊನ್ನೆ ಬಂದ ನೀರು ಯಾವ ಕಾಡಿನ ಒಳಗಿತ್ತೋ! ಅಬ್ಟಾ, ನನಗಂತೂ ಸೊಂಟದ ವರೆಗೆ ನೀರು ಬಂದಾಗ ನಾನು ಎಲ್ಲಿದ್ದೇನೆ ಎಂಬುದೇ ಗೊತ್ತಾಗಲಿಲ್ಲ. ನಮ್ಮ ಮನೆಗೆ ಬರಬೇಕಾದರೆ ಗುಡ್ಡ ಏರಿ ಬರಬೇಕು. ಆದರೆ, ಮೊನ್ನೆ ನೀರು ನಮ್ಮನ್ನೇ ಗುಡ್ಡ ಹತ್ತುವಂತೆ ಮಾಡಿತು. ಕಣ್ಣೆದುರೇ ಮನೆಯ ಮುಂದಿನ ಭಾಗ ಬಿದ್ದು ಹೋಯಿತು.

ಸೊಸೆ ನನ್ನನ್ನು ಎಳೆದುಕೊಂಡೇ ಓಡಿದಳು. ಒಂದು ವರ್ಷದ ಮಗು ಕೈಯಲ್ಲಿತ್ತು. ಮಗ ಮನೆಯಲ್ಲಿ ಇರಲಿಲ್ಲ, ನಾವು ಜೀವದಾಸೆ ಬಿಟ್ಟಿದ್ದೆವು. ಇದೆಲ್ಲ ತಾಸುಗಟ್ಟಲೆಯ ಮಾತಲ್ಲ; 5 ನಿಮಿಷದೊಳಗಿನ ಕತೆ. ನಮ್ಮ ಮನೆಯಲ್ಲಿದ್ದ 20 ಪವನ್‌ ಚಿನ್ನ ಸಹಿತ ಸೊತ್ತುಗಳೆಲ್ಲ ನೀರಿನಲ್ಲಿ ಕೊಚ್ಚಿ ಹೋಗಿವೆ. ಬಾಡಿಗೆ ಮನೆಯೇ ನಮಗೀಗ ಗತಿ’ ಎಂದರು ಮಾಪಲ್ದಡಿ ಸೀತಮ್ಮ. ತಮ್ಮ ಸಂಕಷ್ಟ ಹೇಳಿಕೊಳ್ಳುವಾಗ ಅವರ ಕಣ್ಣುಗಳಲ್ಲಿ ನೀರು ತುಂಬಿತ್ತು.

ಅಡಿಕೆ ಮರಗಳಿಲ್ಲದಿದ್ದರೆ ಮನೆಯೇ ಇರುತ್ತಿರಲಿಲ್ಲ: “ಸಾಗರವಾಗಿ ಹರಿದು ಬಂದ ನೀರಿನೊಂದಿಗೆ ತೇಲಿ ಬಂದದ್ದು ಮರಗಳ ರಾಶಿ. ನಮ್ಮ ತೋಟದ ಅಡಿಕೆ ಮರಗಳು ತಾವು ಮುರಿದು ಹೋದರೂ ಆ ಮರಗಳ ರಾಶಿಯನ್ನು ತಡೆದವು. ಇಲ್ಲದಿದ್ದರೆ ನಮ್ಮ ಮನೆಯ ಅವಶೇಷವೂ ಸಿಗುತ್ತಿರಲಿಲ್ಲ’ ಎಂದು ವಿಠಲ ಗೌಡ ಕಲ್ಲೊಲೆ ಕಣ್ಣಲ್ಲೇ ನೆರೆ-ಪ್ರವಾಹದ ಭೀಕರತೆಯನ್ನು ತೆರೆದಿಟ್ಟರು.

“ನನಗೆ ತಿಳಿದಿರುವಂತೆ ನಮ್ಮ ತಂದೆಯ ಕಾಲದಿಂದಲೇ ಇಲ್ಲಿ ವಾಸವಾಗಿದ್ದೇವೆ. ಎಷ್ಟೇ ಮಳೆ ಬಂದರೂ ಎರಡು ಬಾರಿ ನೀರು ಉಕ್ಕೇರುತ್ತದೆ, ಬಳಿಕ ಶಾಂತವಾಗುತ್ತದೆ. ಈ ಬಾರಿಯೂ ಅದೇ ರೀತಿ ಅಂದುಕೊಂಡಿದ್ದೆವು. ಆದರೆ ಹಾಗಾಗಲಿಲ್ಲ. ನೀರು ತೋಟದೊಳಗೆ ನುಗ್ಗಿದ ಮರುಕ್ಷಣವೇ ಮನೆಯನ್ನು ಬಿಡಲಿಲ್ಲ. ನಮ್ಮದು ಮಣ್ಣಿನ ಇಟ್ಟಿಗೆ ಮನೆ, ಕೊಟ್ಟಿಗೆಯಲ್ಲಿದ್ದ ಗೊಬ್ಬರ ನೀರಲ್ಲಿ ಕೊಚ್ಚಿ ಹೋಗಿ ಮರಳಿನ ರಾಶಿ ಬಿದ್ದಿವೆ. ಮನೆಯಲ್ಲಿ ವಾಸವಿರಲು ಸಾಧ್ಯವಿಲ್ಲ. ನಾನು ಅಂಗಡಿಯಲ್ಲೇ ರಾತ್ರಿ ಕಳೆಯುತ್ತಿದ್ದೇನೆ. ಇರುವ ಒಂದೆಕರೆ ಜಾಗದಲ್ಲಿ ಎಲ್ಲಿ ನೊಡಿದರಲ್ಲಿ ಮರಳೇ ತುಂಬಿದೆ. ಏನು ಮಾಡುವುದು ಎಂಬುದು ತೋಚುತ್ತಿಲ್ಲ’ ಎಂದು ಕಣ್ಣೀರಿಟ್ಟರು ವಿಠಲ ಗೌಡ.

ನೆರೆ ಆವರಿಸಿದ ಪ್ರದೇಶ ಮರು ನಿರ್ಮಾಣ: ಮಿತ್ತಬಾಗಿಲು ಗ್ರಾಮದ ಕುಕ್ಕಾವು ಪ್ರದೇಶ ಮರು ನಿರ್ಮಾಣದೆಡೆಗೆ ಸಾಗುತ್ತಿದೆ. ಸೇತುವೆ ಸಂಪರ್ಕ ಕಡಿದು 20 ಕಿ.ಮೀ.ಸುತ್ತಿ ಬರಬೇಕಿತ್ತು. ಸದ್ಯ ಸೇತುವೆ ಕಾಮಗಾರಿ ವೇಗದಿಂದ ಸಾಗುತ್ತಿದೆ. ಎಂಜಿನಿಯರ್‌ ಪರಿಶೀಲಿಸಿದ ಬಳಿಕ ಬಸ್‌ ಓಡಾಟಕ್ಕೆ ಅವಕಾಶ ಲಭಿಸಲಿದೆ. ಕೆಸರು ನುಗ್ಗಿದ ಮನೆಗಳೆಲ್ಲ ಸ್ವತ್ಛವಾಗುತ್ತಿವೆ. ವಿಸ್ತರಿಸಿದ ಹೊಳೆಯನ್ನು ಎರಡು ಬದಿ ಕಲ್ಲು ರಾಶಿ ಹಾಕಿ ಕುಗ್ಗಿಸುವ ಪ್ರಯತ್ನ ಮಾಡಲಾಗಿದೆ. ಆಹಾರ ಸಾಮಗ್ರಿಯ ಕಿಟ್‌ ವಿತರಿಸಲಾಗಿದ್ದು, ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕಾಮಗಾರಿ ಹಮ್ಮಿಕೊಂಡಿದೆ. ಗ್ರಾ.ಪಂ.ನಿಂದ ನಷ್ಟದ ಕುರಿತು ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಕುಕ್ಕಾವು ಗ್ರಾಮದಂಚಿನ 20ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಸದ್ಯ ಅವರು ಬಾಡಿಗೆ ಮನೆಯಲ್ಲಿ ವಾಸಿಸಲು ನಿರ್ಧರಿಸಿದ್ದಾರೆ.

* ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.