Karkala ಅಂತಃಕರಣ ಮಿಡಿಯುವ ಶಿಕ್ಷಣ ಸಾರ್ಥಕ: ಪುರಾಣಿಕ್‌

ಜ್ಞಾನಸುಧಾ ಸಂಸ್ಥಾಪಕ ದಿ| ಗೋಪ ಶೆಟ್ಟರ103ನೇ ಜನ್ಮದಿನಾಚರಣೆ, ರಕ್ತದಾನ ಶಿಬಿರ

Team Udayavani, Aug 23, 2024, 12:50 AM IST

Karkala ಅಂತಃಕರಣ ಮಿಡಿಯುವ ಶಿಕ್ಷಣ ಸಾರ್ಥಕ: ಪುರಾಣಿಕ್‌

ಕಾರ್ಕಳ: ವ್ಯಕ್ತಿಯ ಅಂತಃಕರಣ ಮಿಡಿಯುವ, ಮಾನವೀಯತೆ ಬೆಳೆಸುವ ಶಿಕ್ಷಣ ಲಭಿಸಿದರೆ ಸಾರ್ಥಕ. ಇಂದು ಅನಕ್ಷ ರಸ್ಥರಲ್ಲಿರುವ ಮಾನವೀಯ ಗುಣ ವಿದ್ಯಾವಂತರು ಎನ್ನಿಸಿಕೊಂಡವರಲ್ಲಿ ಇರದಿರುವುದು ದುಃಖಕರ ಎಂದು ಮಂಗಳೂರಿನ ಶಾರದಾ ವಿದ್ಯಾಲಯಗಳ ಅಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್‌ ಹೇಳಿದರು.

ಅವರು ಅಜೆಕಾರು ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ವತಿಯಿಂದ ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆದ ಸಂಸ್ಥಾಪಕ ದಿ| ಗೋಪ ಶೆಟ್ಟಿಯವರ 103ನೇ ಜನ್ಮದಿನಾಚರಣೆ ಹಾಗೂ ಸಾಮಾಜಿಕ ನೆರವಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಶಕ್ತಿ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ| ಕೆ.ಸಿ.ನಾಯ್ಕ ಮಾತನಾಡಿ, ಇಂತಹ ಆದರ್ಶ ಕಾರ್ಯಕ್ರಮದ ರೂವಾರಿ ಡಾ| ಸುಧಾಕರ್‌ ಶೆಟ್ಟಿ ಅಭಿನಂದನೆಗೆ ಅರ್ಹರು ಎಂದರು.

ಕಾರ್ಕಳ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಕೀರ್ತಿನಾಥ್‌ ಬಲ್ಲಾಳ್‌ ಮಾತನಾಡಿ, ಇಂದು ಸಾಮಾಜಿಕ ಜಾಲತಾಣದ ಪ್ರಜ್ಞೆ ಜಾಸ್ತಿಯಾಗಿ, ಸಾಮಾಜಿಕ ಕಳಕಳಿ ಕುಂಠಿತವಾಗುತ್ತಿರುವುದು ದುಃಖಕರ. ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದ ಟ್ರಸ್ಟಿನ ಅಧ್ಯಕ್ಷ ಡಾ| ಸುಧಾಕರ್‌ ಶೆಟ್ಟಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲೂ ಸಂದೇಶವಿರುತ್ತದೆ. ಮಕ್ಕಳು ಮುಂದಿನ ಜೀವನದಲ್ಲಿ ಇಂಥ ಕಾರ್ಯ ಕ್ರಮ ಗಳಿಂದ ಪ್ರೇರಿತರಾದಾಗ ಸಮಾಜ ಮುಖೀ ಕಾರ್ಯ ಸಾರ್ಥಕ ಎಂದರು.ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್‌ ನಿರೂಪಿಸಿದರು.

23.70 ಲ. ರೂ. ನೆರವು
ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಿದ ಸಂಸ್ಥಾಪಕ ದಿ| ಗೋಪ ಶೆಟ್ಟಿಯವರ 103ನೇ ಜನ್ಮದಿನಾಚರಣೆಯ ಸಂದರ್ಭ ವಿವಿಧ ಸಾಮಾಜಿಕ ನೆರವಿನ ಕಾರ್ಯ ಕ್ರಮದಲ್ಲಿ ಟ್ರಸ್ಟ್‌ ವತಿಯಿಂದ 23.70 ಲಕ್ಷ ರೂ. ನೆರವು ನೀಡಲಾಯಿತು.

ಸಾಮಾಜಿಕ ನೆರವು
ಟ್ರಸ್ಟಿನ ವತಿಯಿಂದ ಸ್ಥಳೀಯ ಡಾ| ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಕಣ್ಣಿನ ವಿಭಾಗಕ್ಕೆ 20 ಲ. ರೂ. ಅನ್ನು ವಿಭಾಗದ ಮುಖ್ಯಸ್ಥ ಡಾ| ಚಿದಾನಂದ ಕುಲಕರ್ಣಿಯವರಿಗೆ ಹಸ್ತಂತರಿಸಲಾಯಿತು. ಮಂಗಳೂರಿನ ಶಕ್ತಿ ಎಜುಕೇಶನ್‌ ಟ್ರಸ್ಟ್‌ಗೆ 1 ಲಕ್ಷ ರೂ.ಗಳ ವಿದ್ಯಾರ್ಥಿ ವೇತನವನ್ನು ಆಡಳಿತಾಧಿಕಾರಿ ರಮೇಶ್‌ ಹಾಗೂ ಪ್ರಾಂಶುಪಾಲ ವೆಂಕಟೇಶ್‌ ಅವರಿಗೆ ಹಸ್ತಾಂತರಿಸಲಾಯಿತು. ಬೆಂಗಳೂರಿನ ಪರಿವರ್ತನ್‌ ಟ್ರಸ್ಟ್‌ಗೆ 1 ಲ. ರೂ. ಅನ್ನು ಟ್ರಸ್ಟಿನ ರವಿರಾಜ್‌ ಅವರಿಗೆ ನೀಡಲಾಯಿತು. ಮಣಿಪಾಲದ ಮೇಘಾ ಇವರಿಗೆ ಮನೆ ನಿರ್ಮಾಣದ ಪ್ರಯುಕ್ತ 10 ಸಾ. ರೂ., ಸ್ವತ್ಛಪಾಲಕ ದಿವ್ಯಚೇತನ ನೀಲಾಧರ್‌ ಶೆಟ್ಟಿಗಾರ್‌ಗೆ 10 ಸಾ.ರೂ., ಸ.ಪ್ರೌ.ಶಾಲೆ ತೊರೆಹಡ್ಲಿಗೆ 10 ಸಾ. ರೂ. ನೆರವು ಹಸ್ತಂತರಿಸಲಾಯಿತು.

ಸಮ್ಮಾನ ಕಾರ್ಯಕ್ರಮ
ಖ್ಯಾತ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ 10 ಸಾ.ರೂ. ನೀಡಿ ಗೌರವಿಸಲಾಯಿತು. ಹಾಗೂ ಕಾರ್ಕಳ ಮೆಸ್ಕಾಂನ ಎ ಮತ್ತು ಬಿ ವಿಭಾಗದ 26 ಪವರ್‌ ಮೆನ್‌ಗಳಿಗೆ ತಲಾ 5 ಸಾವಿರದಂತೆ 1.30 ಲಕ್ಷ ರೂ. ನೀಡಿ ಗೌರವಿಸಲಾಯಿತು.

ರಕ್ತದಾನ ಶಿಬಿರ
ಕೆ.ಎಂ.ಸಿ. ಬ್ಲಿಡ್‌ ಸೆಂಟರ್‌ ಹಾಗೂ ಜ್ಞಾನಸುಧಾ ಹಳೆ ವಿದ್ಯಾರ್ಥಿ ಸಂಘ ಮತ್ತು ಎನ್ನೆಸೆಸ್‌ ನೆರವಿನೊಂದಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಬ್ಲಿಡ್‌ ಸೆಂಟರ್‌ – ಕೆ.ಎಂ.ಸಿ.ಯ ನಿರ್ದೇಶಕರಾದ ಡಾ| ಶಮೀ ಶಾಸ್ತ್ರಿ ಉದ್ಘಾಟಿಸಿದರು.

ಶಿಬಿರದಿಂದ 103 ಯುನಿಟ್‌ ರಕ್ತವನ್ನು ಸಂಗ್ರಹಿಸಲಾಯಿತು.ಟ್ರಸ್ಟಿಗಳಾದ ವಿದ್ಯಾವತಿ ಎಸ್‌. ಶೆಟ್ಟಿ, ಅನಿಲ್‌ ಕುಮಾರ್‌ ಜೈನ್‌, ಸಿ.ಎ. ನಿತ್ಯಾನಂದ ಪ್ರಭು, ಆಡಳಿತ ಮಂಡಳಿ ಸದಸ್ಯರಾದ ಶಾಂತಿರಾಜ್‌ ಹೆಗ್ಡೆ, ಕಾರ್ಕಳ ಜ್ಞಾನಸುಧಾ ಕ್ಯಾಂಪಸ್‌ನ ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್‌ ಎಂ. ಕೊಡವೂರು ಪಿ.ಆರ್‌.ಒ. ಜ್ಯೋತಿ ಪದ್ಮನಾಭ ಭಂಡಿ, ಕಾರ್ಕಳ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಶಿಲ್ಪಾ ಹಾಗೂ ರೂಪಕಲಾ ಕಾಮತ್‌ ಮತ್ತು ಜ್ಞಾನಸುಧಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನ್ಯಾಯವಾದಿ ಭವಿಷ್‌ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.