Karnataka: ಇಂದಿನಿಂದ ಮುಖ್ಯ ಶಿಕ್ಷಕರ ಭಡ್ತಿ ಪ್ರಕ್ರಿಯೆ ಆರಂಭ

- ಅಂಗವಿಕಲರ ಭಡ್ತಿ ಬಗ್ಗೆ ಗೊಂದಲ - ಇನ್ನೂ ಪ್ರಕಟಗೊಳ್ಳದ ಕೌನ್ಸೆಲಿಂಗ್‌ ವೇಳಾಪಟ್ಟಿ

Team Udayavani, Aug 17, 2023, 11:07 PM IST

teacher students

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಶಿಕ್ಷಣ ಇಲಾಖೆ ಈಗ ಸಹ ಶಿಕ್ಷಕರ ಭಡ್ತಿ ಪ್ರಕ್ರಿಯೆಗೆ ಕೈ ಹಾಕಿದೆ. ಶುಕ್ರವಾರ ಭಡ್ತಿಗೆ ಅರ್ಹರಿರುವ ಸಹಶಿಕ್ಷಕರ ಮತ್ತು ಮುಖ್ಯ ಸಹ ಶಿಕ್ಷಕರ ವೃಂದದ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟಗೊಳ್ಳಲಿದ್ದು, ಭಡ್ತಿ ಪ್ರಕ್ರಿಯೆಯ ಪೂರ್ವಭಾವಿ ಸಿದ್ಧತೆ ಆರಂಭಗೊಳ್ಳಲಿದೆ. ಆದರೆ ಅಂಗವಿಕರ ಭಡ್ತಿ ಬಗ್ಗೆ ಗೊಂದಲದ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್‌ನ ವೇಳಾಪಟ್ಟಿ ಇನ್ನೂ ಪ್ರಕಟಗೊಂಡಿಲ್ಲ.

ವರ್ಗಾವಣೆ ಪ್ರಕ್ರಿಯೆ ನಡೆದು ಕೆಲವು ಶಾಲೆಗಳಲ್ಲಿ ಶೂನ್ಯ ಶಿಕ್ಷಕರು ಮತ್ತು ಶಿಕ್ಷಕರ ಭಾರೀ ಕೊರತೆಯ ಪರಿಸ್ಥಿತಿ ಸೃಷ್ಟಿಯಾಗಿದ್ದರೂ ಭಡ್ತಿ ಪ್ರಕ್ರಿಯೆಗೆ ಸರಕಾರ ಮುಂದಾಗಿರುವುದರಿಂದ ಇಂತಹ ಶಾಲೆಗಳಿಗೆ ಮುಖ್ಯೋಪಾಧ್ಯಾಯರು ಅಥವಾ ಮುಖ್ಯ ಗುರುಗಳು ಶೀಘ್ರವಾಗಿ ಲಭಿಸುವ ನಿರೀಕ್ಷೆಯಿದೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಪ್ರಮುಖ ಭೂಮಿಕೆ ನಿಭಾಯಿಸಲಿರುವುದರಿಂದ ಭಡ್ತಿ ಪ್ರಕ್ರಿಯೆಗೆ ನಿಯಮಾನುಸಾರ, ಏಕರೂಪದಲ್ಲಿ ಚಾಲನೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

13 ದಿನದಲ್ಲಿ ಪ್ರಕ್ರಿಯೆ ಪೂರ್ಣ
ಆ.18ರಿಂದ 23ರ ವರೆಗೆ ಪ್ರಕಟಿತ ಜ್ಯೇಷ್ಠತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ. 24ರಂದು ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪನಿರ್ದೇಶಕರಿಗೆ ದಾಖಲೆಗಳನ್ನು ಸಲ್ಲಿಸಬೇಕು. ಆ. 25ರಿಂದ 29ರ ವರೆಗೆ ಜ್ಯೇಷ್ಠತಾ ಪಟ್ಟಿಗೆ ಬಂದಿರುವ ಆಕ್ಷೇಪಣೆಗಳನ್ನು ಜಿಲ್ಲಾ ಕಚೇರಿಯಲ್ಲಿ ಪರಿಶೀಲಿಸಿ ಇತ್ಯರ್ಥಪಡಿಸಲು ಸಮಯಾವಕಾಶ ನೀಡಲಾಗಿದೆ. ಆ. 30ಕ್ಕೆ ಅಂತಿಮ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಆ. 31ಕ್ಕೆ ವೃಂದವಾರು ಖಾಲಿ ಹುದ್ದೆಗಳ ಪ್ರಕಟನೆ ನಡೆಯಲಿದೆ.

ಕೌನ್ಸೆಲಿಂಗ್‌ಗೆ ವಿಕಲಚೇತನರ ಭಡ್ತಿ ಸಮಸ್ಯೆ ಅಡ್ಡಿ
ವಿಕಲ ಚೇತನ ಅಭ್ಯರ್ಥಿಗಳ ಮೀಸಲಾತಿ ಪ್ರಕ್ರಿಯೆ ಇತ್ಯರ್ಥದ ಬಳಿಕ ಹಾಗೂ ಜ್ಯೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಬೇಕಿರುವುದರಿಂದ ಉಪನಿರ್ದೇಶಕರು ಭಡ್ತಿ ನೀಡಿ ಸ್ಥಳ ನಿಯುಕ್ತಿ ಆದೇಶ ನೀಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಗ್ರೂಪ್‌ ಡಿ ಮತ್ತು ಗ್ರೂಪ್‌ ಸಿ ವೃಂದದ ಹುದ್ದೆಗಳಲ್ಲಿ ಬೋಧಕ ಮತ್ತು ಬೋಧಕೇತರ ವೃಂದದ ಹಲವು ಹುದ್ದೆಗಳಿವೆ. ಇದರಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಾಲಾ ಶಿಕ್ಷಕರ ಹುದ್ದೆಗಳು ಒಳಗೊಂಡಿರುತ್ತವೆ. ಈ ಹುದ್ದೆಗಳಿಗೆ ಮೀಸಲಾತಿಗೆ ಪರಿಗಣಿಸಬಹುದಾದ ಮತ್ತು ಯಾವ ಅಂಗವೈಕಲ್ಯವುಳ್ಳ ಸಿಬಂದಿಗೆ ಯಾವೆಲ್ಲ ಹುದ್ದೆಗಳನ್ನು ಪರಿಗಣಿಸಬಹುದಾಗಿದೆ ಎಂಬ ಬಗ್ಗೆ ಆಡಳಿತ ಮತ್ತು ಸಿಬಂದಿ ಇಲಾಖೆಗೆ ಪತ್ರ ಬರೆಯಲಾಗಿದೆ. ಸರಕಾರದಿಂದ ಸೂಕ್ತ ನಿರ್ದೇಶನ ಬಂದ ಬಳಿಕ ಭಡ್ತಿ ಕೌನ್ಸೆಲಿಂಗ್‌ ನಡೆಸಲು ಸೂಚನೆ ನೀಡುವುದಾಗಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ. ಬಿ. ಕಾವೇರಿ ತಿಳಿಸಿದ್ದಾರೆ.
2021ರಲ್ಲಿ 5,600 ಶಿಕ್ಷಕರಿಗೆ ಭಡ್ತಿ ಸಿಕ್ಕಿತ್ತು. ಈ ಬಾರಿ ನಾಲ್ಕರಿಂದ ಐದು ಸಾವಿರ ಶಿಕ್ಷಕರಿಗೆ ಭಡ್ತಿ ಸಿಗುವ ಸಾಧ್ಯತೆಯಿದೆ.

2021ರಲ್ಲಿ ಭಡ್ತಿ ಪ್ರಕ್ರಿಯೆ ನಡೆದಿತ್ತು. ಆ ಬಳಿಕ ಭಡ್ತಿ ಪ್ರಕ್ರಿಯೆ ನಡೆದಿರಲಿಲ್ಲ. ಶಿಕ್ಷಕರ ಭಡ್ತಿ ಪ್ರಕ್ರಿಯೆ ಸಮಯಕ್ಕೆ ಸರಿಯಾಗಿ ನಡೆಯಬೇಕು. ಸೆಪ್ಟಂಬರ್‌ 5ರೊಳಗೆ ಭಡ್ತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರಕಾರಕ್ಕೆ ಮನವಿ ಮಾಡುತ್ತೇವೆ.
-ಚಂದ್ರಶೇಖರ ನುಗ್ಗಲಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ

ಭಡ್ತಿ ನಿರೀಕ್ಷೆಯಲ್ಲಿರುವವರಿಗೆ ಅತಂಕ
ಜಿಲ್ಲಾ ಮಟ್ಟದಲ್ಲಿ ಭಡ್ತಿ ಪ್ರಕ್ರಿಯೆ ನಡೆಯುವುದರಿಂದ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಭಡ್ತಿಯ ಮೂಲಕ ಶಿಕ್ಷಕರನ್ನು ವರ್ಗಾಯಿಸುವ ಅವಕಾಶ ಉಪನಿರ್ದೇಶಕರಿಗೆ ಲಭಿಸಿದೆ. ಆದರೆ ಇದು ಭಡ್ತಿ ನಿರೀಕ್ಷೆಯಲ್ಲಿರುವ ಕೆಲವು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. ತಮ್ಮನ್ನು ಮೂಲಸೌಲಭ್ಯಗಳಿಲ್ಲದ, ದೂರದ ಶಾಲೆಗೆ ಭಡ್ತಿ ನೀಡಿ ವರ್ಗಾಯಿಸಬಹುದು ಎಂಬುದು ಚಿಂತೆಗೆ ಕಾರಣ.

 

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.