ಮನುಷ್ಯನ ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು : ಪೇಜಾವರ ಶ್ರೀ

ಕೈಪುಂಜಾಲು ಶಾಲೆ ಶತಮಾನೋತ್ಸವ, ವಿಶ್ವೇಶತೀರ್ಥ ವಿದ್ಯಾಲಯ ಉದ್ಘಾಟನೆ

Team Udayavani, Dec 1, 2023, 12:38 AM IST

kaip

ಕಾಪು: ಮನುಷ್ಯನ ಪರಿಪೂರ್ಣ ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ಯಾವುದೇ ಒಂದು ಶಾಲೆಯನ್ನು ಕಟ್ಟುವುದು ದೊಡ್ಡ ಸಂಗತಿಯಲ್ಲ. ಉತ್ತಮ ರೀತಿಯಲ್ಲಿ ಮುನ್ನಡೆಸುವುದು ಬಹಳಷ್ಟು ಜವಾಬ್ದಾರಿಯ ಕೆಲಸವಾಗಿರುತ್ತದೆ. ಶಾಲೆಗಳಲ್ಲಿ ನೀಡುವ ಉತ್ತಮ ಶಿಕ್ಷಣ ಮಕ್ಕಳ ಬದುಕು ಬೆಳಗುತ್ತದೆ. ಅದು ಶಾಲೆ ಕಟ್ಟಲು ಸಹಕರಿಸಿದವರು, ದೇಹ ದಣಿಸಿದವರಲ್ಲಿಯೂ ಸಾರ್ಥಕ್ಯ ಭಾವ ಮೂಡಲು ಕಾರಣ ವಾಗುತ್ತದೆ ಎಂದು ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಹೇಳಿದರು.

ಅವರು ಗುರುವಾರ ಕೈಪುಂಜಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪ್ರಯುಕ್ತ ಕೈಪುಂಜಾಲು ವಿದ್ಯಾಸಾಗರ ಎಜುಕೇಶನ್‌ ಟ್ರಸ್ಟ್‌ ನೇತೃತ್ವದಲ್ಲಿ ಕೈಪುಂಜಾಲು ಚೆನ್ನಪ್ಪ ಸಾಹುಕಾರ್‌ ಸ್ಮರಣಾರ್ಥ ನಿರ್ಮಾಣಗೊಂಡ ವಿಶ್ವೇಶತೀರ್ಥ ವಿದ್ಯಾಲಯದ ಕಟ್ಟಡವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಶಿಕ್ಷಕರ ಜವಾಬ್ದಾರಿ ಸಭಾಭವನ ಉದ್ಘಾಟಿಸಿದ ಡಾ| ಜಿ. ಶಂಕರ್‌ ಮಾತನಾಡಿ, ಮೊಗವೀರ ಸಮಾಜದ ಹಿರಿಯರ ಪರಿಶ್ರಮದ ಫಲವಾಗಿ ಕರಾವಳಿಯಲ್ಲಿ ಮಂದಿರಗಳು, ಶಾಲೆಗಳು ಆರಂಭ ಗೊಂಡಿವೆ. ಹಿರಿಯರು ಕಟ್ಟಿ ಬೆಳೆಸಿದ ಸಂಸ್ಥೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಿರಿಯರು ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ. ಇಲ್ಲಿ ಉತ್ತಮ ಸಂಸ್ಕಾರಯುತ ಶಿಕ್ಷಣ ನೀಡುವ ಜವಾ ಬ್ದಾರಿ ಶಿಕ್ಷಕ ವರ್ಗದ್ದಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಬೆಂಗಳೂರು ಏಸ್‌ ಸಂಸ್ಥೆಯ ಅಧ್ಯಕ್ಷ ರಾಮದಾಸ್‌ ಪುತ್ತಿಗೆ ಶುಭಾಶಂಸನೆಗೈದರು.

ಸಮ್ಮಾನ: ಪೇಜಾವರ ಶ್ರೀಗಳನ್ನು ಫ‌ಲವಸ್ತುಗಳನ್ನು ನೀಡಿ, ಪುಷ್ಪಾರ್ಚ ನೆಯೊಂದಿಗೆ ಗೌರವಿಸಲಾಯಿತು. ದಾನಿಗಳು, ಗುತ್ತಿಗೆದಾರರು, ನಿವೃತ್ತ ಶಿಕ್ಷಕರು, ಸ್ಥಳದಾನಿಗಳು ಮತ್ತು ಕಟ್ಟಡ ಸಮಿತಿ ಪ್ರಮುಖರನ್ನು, ಟ್ರಸ್ಟ್‌ನ ಪ್ರಮುಖರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಉದ್ಯಮಿಗಳಾದ ಸಾಧು ಸಾಲ್ಯಾನ್‌, ಹರಿಯಪ್ಪ ಸಾಲ್ಯಾನ್‌, ಕೆ. ವಾಸುದೇವ ಶೆಟ್ಟಿ, ಮನೋಹರ್‌ ಎಸ್‌. ಶೆಟ್ಟಿ, ಪ್ರದೀಪ್‌ ಕುಮಾರ್‌ ಕಲ್ಕೂರ, ಆನಂದ ತೀರ್ಥ ವಿದ್ಯಾಲಯದ ಕಾರ್ಯದರ್ಶಿ ಬಿ. ಸುಬ್ರಹ್ಮಣ್ಯ ಸಾಮಗ, ಶಿಕ್ಷಣ ತಜ್ಞ ವಾಸುದೇವ ಭಟ್‌ ಮೈಸೂರು, ದಂಡತೀರ್ಥ ಪ್ರತಿಷ್ಠಾನದ ಅಧ್ಯಕ್ಷ ಸೀತಾರಾಮ ಭಟ್‌, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೈಪುಂಜಾಲು ಮೊಗವೀರ ಮಹಾಸಭಾದ ಅಧ್ಯಕ್ಷ ಪ್ರವೀಣ್‌ ಶ್ರೀಯಾನ್‌, ಪ್ರಮುಖರಾದ ನಾಗರಾಜ ಸುವರ್ಣ, ಚಂದ್ರಶೇಖರ ಅಮೀನ್‌, ದಯಾವತಿ ಎಸ್‌. ಕುಂದರ್‌, ಸಂತೋಷ್‌ ಕುಂದರ್‌, ಸಾಕ್ಷತ್‌ ಯು.ಕೆ., ಆಶಾಲತಾ ವೇದಿಕೆಯಲ್ಲಿದ್ದರು.

ವಿದ್ಯಾಸಾಗರ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಸತೀಶ್‌ ಕುಂದರ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಟ್ರಸ್ಟ್‌ ಕಾರ್ಯದರ್ಶಿ ರಮೇಶ್‌ ಪೂಜಾರಿ ಕೈಪುಂಜಾಲು, ವಿದ್ಯಾಧರ ಪುರಾಣಿಕ್‌ ಸಮ್ಮಾನಿತರನ್ನು ಪರಿಚಯಿಸಿದರು. ಕಟ್ಟಡ ನಿರ್ಮಾಣ ಸಮಿತಿ ಜತೆ ಕಾರ್ಯದರ್ಶಿ ರಾಘವೇಂದ್ರ ಆಚಾರ್ಯ ವಂದಿಸಿದರು. ಸಚ್ಚೇಂದ್ರ ಅಂಬಾಗಿಲು ನಿರ್ವಹಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.