ಬೀದರ್ ಶೀಘ್ರ ವಿಮಾನಯಾನ ಆರಂಭ : ಪ್ರಭು ಚವ್ಹಾಣ್
Team Udayavani, Aug 29, 2019, 5:26 PM IST
ಬೀದರ: ನೆನೆಗುದಿಗೆ ಬಿದ್ದಿರುವ ಬೀದರ ನಾಗರಿಕ ವಿಮಾನಯಾನ ಆರಂಭಕ್ಕೆ ಹೆಚ್ಚಿನ ಕಾಳಜಿ ವಹಿಸುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದ್ದಾರೆ.
ನೂತನ ಸಚಿವರಾದ ನಂತರ ಪ್ರಥಮಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಅಲ್ಲದೆ, ಜಿಲ್ಲೆಯ ಬಿಜೆಪಿ ಸಂಸದ ಭಗವಂತ ಖೂಬಾ ಜತೆಗೂಡಿ ಸರ್ಕಾರದ ಗಮನ ಸೆಳೆದು ಕೂಡಲೇ ವಿಮಾನಯಾನ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲೆಯ ಈ ಹಿಂದಿನ ಮೈತ್ರಿ ಸರ್ಕಾರದ ಸಚಿವರು ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಕೆಲಸಗಳು ಮಾಡಿಲ್ಲ. ಈ ಹಿಂದೆ ಘೊಷಣೆಯಾದ ವಿವಿಧ ಕಾಮಗಾರಿಗೆಳು ನೆನೆಗುದಿಗೆ ಬಿದ್ದಿದ್ದು, ಕೂಡಲೇ ಅವುಗಳ ಕಾಮಗಾರಿ ಪೂರ್ಣಗೊಳ್ಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ನಾನು ಗೋ ಗಳನ್ನು ತಾಯಿ ಹಾಗೂ ದೇವರೆಂದು ಭಾವಿಸುತ್ತೆನೆ. ಆ ಕಾರಣ ನನ್ನಗೆ ಪಶು ಇಲಾಖೆ ಬಂದಿದೆ ಎಂದ ಅವರು, ಪಶು ಇಲಾಖೆಯ ಮೂಲಕ ಅಭಿವೃದ್ಧಿ ಕಾರ್ಯಗಳು ಮಾಡುವ ಯೋಜನೆಗಳು ರೂಪಿಸಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ನೆಪ ಹೇಳುವಂತೆ ಇಲ್ಲ. ಇದೀಗ ಎಲ್ಲಾ ಅಧಿಕಾರಿಗಳು ಚುರುಕುತನದಿಂದ ಕೆಲಸ ನಿರ್ವಹಿಸುವಂತೆ ಸೂಚಿಸಲಾಗುವುದು. ತಪ್ಪು ಮಾಡುವ ಅಧಿಕಾರಿಗಳ ವಿರುದ್ದ ಕ್ರಮ ಕೂಡ ಕೈಗೊಳ್ಳುತ್ತೆನೆ ಎಂದು ಎಚ್ಚರಿಸಿದರು.
ಬಾಯಿ ತಪ್ಪಿದ ಸಚಿವ: ರಾಜ್ಯದ ಬಿಜೆಪಿ ಸರ್ಕಾರ ಮುಂದಿನ ಮೂರುವರೆ ವರ್ಷ ಸರ್ಕಾರ ನಡೆಸಲ್ಲಿದೆ ಎಂದು ಹೇಳುವ ಭರದಲ್ಲಿ ಮುಂದಿನ ಮೂರುವರೆ ತಿಂಗಳು ಸರ್ಕಾರ ಯಾವುದೇ ಸಮಸ್ಯೆ ಇಲ್ಲದೆ ನಡೆಯಲ್ಲಿದೆ ಎಂದು ನೂತನ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಯಿತಪ್ಪಿನಿಂದ ಹೇಳಿದ ಮಾತು ಸರಿ ಪಡಿಸಿಕೊಂಡು ಮುಂದಿನ ಮೂರುವರೆ ವರ್ಷಗಳ ಕಾಲ ಸರ್ಕಾರ ಸುಭ್ರವಾಗಿರುತ್ತೆ ಎಂದು ಹೇಳುವ ಮೂಲಕ ಸರಿಪಡಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.