ಇಂದಿನಿಂದ ಸೈಯದ್‌ ಮುಷ್ತಾಖ್‌ ಟಿ20 ಆರಂಭ

ಮನೀಷ್‌ ಪಾಂಡೆ ನಾಯಕತ್ವದ ಕರ್ನಾಟಕಕ್ಕೆ ಮುಂಬೈ ಎದುರಾಳಿ

Team Udayavani, Nov 4, 2021, 5:30 AM IST

ಇಂದಿನಿಂದ ಸೈಯದ್‌ ಮುಷ್ತಾಖ್‌ ಟಿ20 ಆರಂಭ

ಮುಂಬೈ: ಗುರುವಾರದಿಂದ ಕೋವಿಡ್ ಒಡ್ಡಿರುವ ಅಡೆತಡೆಗಳನ್ನು ಮೀರಿ ಸೈಯದ್‌ ಮುಷ್ತಾಖ್‌ ಅಲಿ ಟಿ20 ಕ್ರಿಕೆಟ್‌ ಕೂಟ ಆರಂಭವಾಗಲಿದೆ.

ಇದು ಭಾರತದ ಬಹುಮುಖ್ಯ ದೇಶೀಯ ಟಿ20 ಕೂಟಗಳಲ್ಲೊಂದು. ಇಲ್ಲಿನ ಪ್ರದರ್ಶನ ಆಟಗಾರರ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಬಹಳ ನೆರವಾಗುತ್ತದೆ. ಆದ್ದರಿಂದ ಆಟಗಾರರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಗುರುವಾರ ಕರ್ನಾಟಕ ತಂಡ ಬಲಿಷ್ಠ ಮುಂಬೈ ವಿರುದ್ಧ ಪಂದ್ಯವಾಡಲಿದೆ.

ಎರಡೂ ತಂಡಗಳ ಪಾಲಿಗೆ ಇದು ಬಹುಮುಖ್ಯವಾದ ಪಂದ್ಯ. ಎರಡರಲ್ಲೂ ಖ್ಯಾತ ಅಂತಾರಾಷ್ಟ್ರೀಯ ತಾರೆಯರಿದ್ದಾರೆ. ಇಲ್ಲಿ ಎರಡು ರೀತಿಯ ಲಾಭಗಳಿವೆ. ಕೆಲವರು ಉದಯೋನ್ಮುಖ, ಛಾಪು ಮೂಡಿಸಿರುವ ಅಂತಾರಾಷ್ಟ್ರೀಯ ಆಟಗಾರರು ಇಲ್ಲಿದ್ದಾರೆ. ಇವರಿಗೆ ಅಂತಾರಾಷ್ಟ್ರೀಯ ತಂಡದಲ್ಲಿ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳಲು ಇದೊಂದು ಅತ್ಯುತ್ತಮ ಅವಕಾಶ. ಇನ್ನೊಂದು ಕಡೆ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟಿ20 ಆಡುವುದು ಸಾಧ್ಯವಿಲ್ಲದ ಮಾತು. ಆದರೆ ಅದ್ಭುತ ಪ್ರತಿಭಾವಂತರಾದ ಅವರಿಂದ ಯುವ ಆಟಗಾರರು ಕಲಿಯಲು ಸಾಕಷ್ಟು ವಿಷಯಗಳಿವೆ. ಉದಾಹರಣೆಗೆ ಅಜಿಂಕ್ಯ ರಹಾನೆ ವಿಶ್ವಶ್ರೇಷ್ಠ ಟೆಸ್ಟ್‌ ಆಟಗಾರ. ಅವರು ಅಂತಾರಾಷ್ಟ್ರೀಯ ಟಿ20 ತಂಡದಲ್ಲಿ ಆಡುವುದು ಬಹಳ ಕಷ್ಟ. ಆದರೆ ಅವರ ಬ್ಯಾಟಿಂಗ್‌ ಪರಿಣತಿ, ಅನುಭವ ಇತರೆ ಆಟಗಾರರ ಕಲಿಕೆಗೆ ಬಹಳ ನೆರವಾಗುತ್ತದೆ.

ಇದನ್ನೂ ಓದಿ:ಟಿ20 ವಿಶ್ವಕಪ್‌: ಸೆಮಿಫೈನಲ್‌ನತ್ತ ಕಿವೀಸ್‌ ದಾಪುಗಾಲು

ಕರ್ನಾಟಕ ತಂಡದಲ್ಲಿರುವ ಮನೀಷ್‌ ಪಾಂಡೆ, ದೇವದತ್ತ ಪಡಿಕ್ಕಲ್‌, ಮಾಯಾಂಕ್‌ ಅಗರ್ವಾಲ್‌, ಕೆ.ಗೌತಮ್‌, ಪ್ರಸಿದ್ಧಕೃಷ್ಣ ಅಂತಾರಾಷ್ಟ್ರೀಯ ಆಟಗಾರರು. ಅವರಿಗೆಲ್ಲ ಈ ಕೂಟ, ಅಂತಾರಾಷ್ಟ್ರೀಯ ತಂಡಕ್ಕೆ ತಮ್ಮ ಅಗತ್ಯವಿದೆ ಎಂದು ತೋರಿಸಿಕೊಳ್ಳಲು ವೇದಿಕೆಯಾಗಿದೆ. ಪಡಿಕ್ಕಲ್‌, ಮಾಯಾಂಕ್‌ ಇವರೆಲ್ಲ ಇನ್ನೂ ಅಂತಾರಾಷ್ಟ್ರೀಯ ತಂಡದಲ್ಲಿ ಭದ್ರ ನೆಲೆ ಕಂಡುಕೊಂಡಿಲ್ಲ. ಪಡಿಕ್ಕಲ್‌ಗ‌ಂತೂ ಬಹಳ ಅವಕಾಶಗಳೇ ಸಿಕ್ಕಿಲ್ಲ. ಮುಂಬೈ ತಂಡದ ನಾಯಕ ಅಜಿಂಕ್ಯ ರಹಾನೆಗೆ ಟಿ20 ವೇಗಕ್ಕೆ ಹೊಂದಿಕೊಳ್ಳಲು ಉತ್ತಮ ಅವಕಾಶವಾಗಿದೆ. ಕನಿಷ್ಠ ಪಕ್ಷ ಐಪಿಎಲ್‌ನಲ್ಲಾದರೂ ಅವರಿಗೆ ಇದು ಉಪಯೋಗಕ್ಕೆ ಬರುತ್ತದೆ.

ಮುಂಬೈ ಉಪನಾಯಕ ಪೃಥ್ವಿ ಶಾ ಆಕ್ರಮಣಕಾರಿ ಆಟಗಾರ, ಪ್ರತಿಭಾವಂತ ಎನ್ನುವುದೇನೋ ಸತ್ಯ. ಆದರೆ ಅದೇಕೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರೀಕ್ಷೆಗೆ ತಕ್ಕ ಸಾಧನೆ ಮಾಡಿಲ್ಲ. ಜೊತೆಗೆ ಅನಗತ್ಯ ವಿವಾದಗಳಿಗೂ ಕಾರಣವಾಗಿದ್ದಾರೆ. ಅವರೊಮ್ಮೆ ಭಾರತೀಯ ತಂಡದಿಂದ ಬೇರ್ಪಡಲು ಅಶಿಸ್ತೇ ಕಾರಣ ಎಂಬ ಮಾತುಗಳೂ ಇವೆ. ಅವರಿಗಂತೂ ಈ ಕೂಟ ಮಹತ್ವದ್ದಾಗಿದೆ. ಎರಡೂ ತಂಡಗಳ ಬೌಲಿಂಗ್‌, ಬ್ಯಾಟಿಂಗ್‌ ಅತ್ಯುತ್ತಮವಾಗಿದೆ. ಪ್ರತಿಭಾವಂತ ವೇಗಿಗಳಿದ್ದಾರೆ. ಇವರೆಲ್ಲರಿಗೂ ಪ್ರತೀ ಪಂದ್ಯವೂ ಮುಖ್ಯವಾಗಿದೆ.

ಕರ್ನಾಟಕ-ಮುಂಬೈ
ಪಂದ್ಯಾರಂಭ: ಮ.12.30
ಸ್ಥಳ: ಗುವಾಹಟಿ, ಅಸ್ಸಾಂ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.