Chitradurga: ಜಲಮೂಲ ಸ್ವತ್ಛತೆ ಪಾಠ ಹೇಳಿ ಕೊಟ್ಟ ಕವಾಡಿಗರಹಟ್ಟಿ ದುರಂತ


Team Udayavani, Aug 11, 2023, 12:00 AM IST

water supply

ಚಿತ್ರದುರ್ಗ: ಕುಡಿಯುವ ನೀರಿನ ಮೂಲಗಳ ಬಗ್ಗೆ ಪ್ರತಿಯೊಬ್ಬರೂ ಸದಾ ಜಾಗೃತರಾಗಿರಬೇಕು, ಕಾಲ ಕಾಲಕ್ಕೆ ಸ್ವತ್ಛಗೊಳಿಸಬೇಕು, ಮನೆಗಳಲ್ಲಿ ನೀರು ಉಪಯೋಗಿಸುವಾ ಗಲೂ ಬಹಳ ಎಚ್ಚರಿಕೆ ವಹಿಸಬೇಕು ಎನ್ನುವ ಸ್ಪಷ್ಟ ಪಾಠ ಹೇಳಿ ಕೊಟ್ಟ ಪ್ರಕರಣ ಚಿತ್ರದುರ್ಗದ ಕವಾಡಿಗರಹಟ್ಟಿ ಕಲುಷಿತ ನೀರಿನ ದುರಂತ.

ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿದ್ದು, ಬರೋಬ್ಬರಿ 214 ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಮೃತಪಟ್ಟವರಲ್ಲಿ ಇಬ್ಬರ ಮರಣೋತ್ತರ ಪರೀಕ್ಷೆ ವರದಿ ಹಾಗೂ ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಅನೇಕರ ವರದಿಗಳನ್ನು ಆರೋಗ್ಯ ಇಲಾಖೆ ಪರಿಶೀಲಿಸಿದೆ. ಮೂವರ ವರದಿಯಲ್ಲಿ ಕಾಲರಾ ಹರಡುವ ಸೂಕ್ಷ್ಮಾಣು ಪತ್ತೆಯಾಗಿದೆ. ಜು.30 ಹಾಗೂ 31ರಂದು ಕವಾಡಿಗರಹಟ್ಟಿ ದಲಿತ ಕಾಲನಿಯ ನಾಲ್ಕು ಬೀದಿಗಳಲ್ಲಿ ಸರಬರಾಜಾದ ನೀರಿನಿಂದ ಈ ದುರಂತ ಸಂಭವಿಸಿದೆ. ಆರಂಭದ ನಾಲ್ಕು ದಿನ ಇದೇ ನಾಲ್ಕು ಬೀದಿಯ ನಿವಾಸಿಗಳೇ ಆಸ್ಪತ್ರೆಗೆ ದಾಖ ಲಾಗುತ್ತಿದ್ದರು. ಆದರೆ ಆ.6ರ ಅನಂತರ ಪಕ್ಕದ ಬೀದಿಗಳಲ್ಲೂ ವಾಂತಿ-ಭೇದಿ ಲಕ್ಷಣ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ವಾಂತಿ-ಭೇದಿ ಮೂಲ ಪತ್ತೆ ಮಾಡುವಲ್ಲಿ ಪರಿಣತಿ ಹೊಂದಿರುವ ಉಡುಪಿಯ

ಡಾ| ಪ್ರಶಾಂತ್‌ ಭಟ್‌ ಅವರಿಂದ ತನಿಖೆ ಮಾಡಿಸುತ್ತಿದೆ. ರಾಜ್ಯದ ವಿವಿಧ ವೈದ್ಯರ ತಂಡ ಅಧ್ಯಯನ ನಡೆಸುತ್ತಿದೆ. ಕವಾಡಿಗರಹಟ್ಟಿಯ ನೀರಿನ ಮೂಲ, ವಾಂತಿ-ಭೇದಿಗೆ ನೀರು ಕಾರಣವೇ ಅಥವಾ ಬೇರೆ ಯಾವುದಾದರೂ ಪದಾರ್ಥ ಕಾರಣವೇ ಎನ್ನುವ ಎಲ್ಲ ಅಂಶಗಳ ಆಯಾಮದಲ್ಲೂ ತನಿಖೆ ನಡೆಯುತ್ತಿದ್ದು, ವರದಿ ಬರಬೇಕಿದೆ.
ಸ್ಥಳೀಯರ ಅನುಮಾನವೇ ಬೇರೆ: ಈ ಪ್ರಕರಣದಲ್ಲಿ ಕವಾಡಿಗರಹಟ್ಟಿಯ ಪರಿಶಿಷ್ಟ ಜಾತಿಯ ಕಾಲನಿಯ ಜನರಲ್ಲಿ ಬೇರೆಯದ್ದೇ ಅನುಮಾನ ಮೂಡಿದೆ. ಈ ಗ್ರಾಮದಲ್ಲಿ ಸವರ್ಣೀಯ ಜಾತಿಗೆ ಸೇರಿದ ಯುವತಿಯನ್ನು ದಲಿತ ಯುವಕ ಕರೆದೊಯ್ದು ಮದುವೆಯಾಗಿದ್ದ. ಈ ದ್ವೇಷಕ್ಕೆ ವಿಷ ಬೆರೆಸಲಾಗಿದೆ ಎಂದು ಬಲವಾಗಿ ಆರೋಪಿ ಸಲಾಗುತ್ತಿದೆ. ಆದರೆ ಇದಕ್ಕೆ ಪೂರಕ ಸಾಕ್ಷಾÂಧಾರ ಅಥವಾ ನೀರಿನ ಪರೀಕ್ಷೆಯಲ್ಲಿ ಅಂತಹ ವಿಷಕಾರಿ ಅಂಶಗಳು ಪತ್ತೆಯಾಗದಿರುವುದು ಸಮಾಧಾನಕರ ಸಂಗತಿ. ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣ ಇಲಾಖೆಯಿಂದ ಮಾಡಿದ ನೀರಿನ ಪರೀಕ್ಷೆಯಲ್ಲಿ ಕಾಲರಾ ಅಂಶ ಮಾತ್ರ ಪತ್ತೆಯಾಗಿದೆ. ಜತೆಗೆ ಈ ನೀರು ಕುಡಿಯಲು ಯೋಗ್ಯವಾಗಿಲ್ಲ. ಕಲುಷಿತವಾಗಿದೆ ಎನ್ನುವ ವರದಿ ಲಭ್ಯವಾಗಿದೆ.

ಇನ್ನು ಪೊಲೀಸ್‌ ಇಲಾಖೆ ವಿಷಕಾರಿ ಅಂಶ ಬೆರೆತಿರಬ ಹುದೇ ಎನ್ನುವ ಅನುಮಾನದಲ್ಲಿ ನೀರು, ಮೃತರ ಮಲದ ಮಾದರಿಗಳನ್ನು ಎಫ್‌ಎಸ್‌ಎಲ್‌ ಪ್ರಯೋಗಾಲ ಯಕ್ಕೆ ರವಾನೆ ಮಾಡಿತ್ತು. ಈ ವರದಿ ಕೂಡ ಬಹಿರಂ ಗವಾಗಿದ್ದು, ನೀರಿನಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್‌ ತಿಳಿಸಿದ್ದಾರೆ.

ನೀರಿನ ಟ್ಯಾಂಕ್‌-ಪೈಪ್‌ಲೈನ್‌ ಸ್ವತ್ಛತೆಗೆ ಸೂಚನೆ
ಕವಾಡಿಗರಹಟ್ಟಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಇಡೀ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಎಲ್ಲ ಕುಡಿಯುವ ನೀರಿನ ಮೂಲಗಳನ್ನು ಸ್ವತ್ಛಗೊಳಿಸಬೇಕು, ಪೈಪ್‌ಲೈನ್‌ ಮಾರ್ಗವನ್ನು ಪರಿಶೀಲಿಸಿ ಸರಿಪಡಿಸಬೇಕು. ನಿಯಮಿತವಾಗಿ ನೀರಿನ ಟ್ಯಾಂಕ್‌ಗಳನ್ನು ಸ್ವತ್ಛಗೊಳಿಸಲು ಪ್ರತ್ಯೇಕ ಏಜೆನ್ಸಿ ನೇಮಿಸಿ ಸೂಕ್ತ ದಾಖಲೆ ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ ನೀಡಿದ್ದಾರೆ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.