ಮಳೆಗೆ ಮರ ಬಿದ್ದು ಮಹಿಳೆ ದುರ್ಮರಣ


Team Udayavani, May 12, 2019, 3:05 AM IST

male

ಬೆಂಗಳೂರು: ಕೋಲಾರ, ಮುಳಬಾಗಿಲು, ಚಾಮರಾಜನಗರ, ಕೊಡಗು ಸೇರಿ ರಾಜ್ಯದ ಕೆಲವೆಡೆ ಮಳೆಯಾಗಿದ್ದು, ಮುಳಬಾಗಿಲು ತಾಲೂಕಿನಲ್ಲಿ ಬಿರುಗಾಳಿ ಮಳೆಗೆ ಅರಳಿ ಮರ ಮುರಿದು ಬಿದ್ದು ಮಹಿಳೆಯೊಬ್ಬಳು ಮೃತಪಟ್ಟಿದ್ದಾಳೆ.

ಈ ಮಧ್ಯೆ, ಇನ್ನೂ ಎರಡು ದಿನಗಳ ಕಾಲ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಳಬಾಗಿಲು ತಾಲೂಕಿನ ತೊರಡಿ ಗ್ರಾಮದ ಪಾರ್ವತಮ್ಮ (50) ಮೃತ ದುರ್ದೈವಿ. ಗ್ರಾಮದ ಮತ್ತೂಬ್ಬ ಮಹಿಳೆ ಮಮತಾ (35) ಎಂಬುವರ ಜತೆ ಹಸುಗಳನ್ನು ಮೇಯಿಸಲು ಹೋಗಿದ್ದಳು.

ಸಂಜೆ ಮಳೆ ಆರಂಭವಾಗುತ್ತಿದ್ದಂತೆ ಪಕ್ಕದಲ್ಲಿಯೇ ಇದ್ದ ವರಾಂಡದ ಕೆಳಗೆ ನಿಂತಿದ್ದರು. ಕೆಲವೇ ಅಡಿಗಳ ದೂರದಲ್ಲಿದ್ದ ಅಶ್ವಥ್‌ ಕಟ್ಟೆಯ ಮೇಲಿನ ಅರಳಿ ಮರ ಮುರಿದು ಬಿತ್ತು. ತೀವ್ರವಾಗಿ ಗಾಯಗೊಂಡ ಪಾರ್ವತಮ್ಮ ಸ್ಥಳದಲ್ಲಿಯೇ ಕೊನೆಯುಸಿರೆಳೆದರು. ಮಮತಾರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿದ ತಾಪಮಾನ: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸಾಮಾನ್ಯ ದಿನಗಳಿಗಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿನ ತಾಪಮಾನ ದಾಖಲಾಗಿದೆ. ರಾಯಚೂರಿನಲ್ಲಿ ರಾಜ್ಯದಲ್ಲಿಯೇ ಗರಿಷ್ಠ 42 ಡಿ.ಸೆ. ತಾಪಮಾನ ದಾಖಲಾಯಿತು. ಇದರಿಂದಾಗಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ತೇವಾಂಶ ಭರಿತ ಮೋಡಗಳು ಚಲಿಸಿದ ಕಡೆಗಳಲ್ಲಿ ಮಳೆಯಾಗಿದೆ.

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಕೆಲವೆಡೆಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ. ಹೆಚ್ಚಿನ ಭಾಗಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಶನಿವಾರ ಉತ್ತಮ ಮಳೆಯಾಗಿದ್ದು, ಕೋಲಾರದಲ್ಲಿ 41.50 ಮಿ.ಮೀ. ಮಳೆಯಾಗಿದೆ. ಉಳಿದಂತೆ ಉತ್ತರ ಕನ್ನಡ 38, ಚಾಮರಾಜನಗರ 37.50, ಮೈಸೂರು 26.50, ಬಳ್ಳಾರಿ 26, ಕೊಡಗು 26, ಹಾಸನ 24, ಮಂಡ್ಯ 16, ಬೆಂಗಳೂರು ಗ್ರಾಮಾಂತರ 11.50, ರಾಮನಗರ 8.50, ಬೆಂಗಳೂರು ನಗರ 7.50, ಚಿಕ್ಕಬಳ್ಳಾಪುರ 5, ಧಾರವಾಡ 3.50, ಚಿತ್ರದುರ್ಗ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ತಲಾ 2 ಮಿ.ಮೀ.ಮಳೆಯಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.