ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಕ್ಷೇತ್ರದಲ್ಲಿ ಶೇ. 76.40ರಷ್ಟು ಮತದಾನ

Team Udayavani, May 8, 2024, 6:45 AM IST

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೆ ಶೇ. 76.40 ರಷ್ಟು ಮತದಾರರು ಮತ ಚಲಾಯಿಸಿದರು.

246 ಮತಗಟ್ಟೆಗಳಲ್ಲಿ ಒಟ್ಟು 2,40,500 ಮತದಾರರ ಪೈಕಿ 1,83,733 ಮಂದಿ ಮತ ಚಲಾಯಿಸಿದ್ದಾರೆ. 1,17,711 ಪುರುಷರ ಪೈಕಿ 85,381 ಮಂದಿ (ಶೇ.72.53) ಮತ ಚಲಾಯಿಸಿದ್ದು, 1, 22,786 ಮಹಿಳೆಯರ ಪೈಕಿ 98,349 ( ಶೇ.80.10) ಹಾಗೂ ಮೂವರು ತೃತೀಯ ಲಿಂಗಿಗಳು ಮತ ಚಲಾಯಿಸಿದ್ದಾರೆ.

ನಕ್ಸಲ್‌ ಬಾಧಿತ ಹಳ್ಳಿಹೊಳೆ ಗ್ರಾ.ಪಂ. ಮತಗಟ್ಟೆಯಲ್ಲಿ ಗರಿಷ್ಠ ಶೇ. 88 ಹಾಗೂ ಶಿರೂರು ಮೇಲ್ಪಂಕ್ತಿ ಹಿ.ಪ್ರಾ. ಶಾಲೆ ಮತಗಟ್ಟೆಯಲ್ಲಿ ಕನಿಷ್ಠ ಶೇ. 60.67 ಮತದಾನವಾಗಿದೆ.ಬಹುತೇಕ ಎಲ್ಲ ಮತಗಟ್ಟೆಗಳಲ್ಲಿಯೂ ಸುಡುವ ಬಿಸಿಲಿನ ಮಧ್ಯೆಯೂ ಮತದಾರರು ಮತ ಚಲಾಯಿಸಿದರು. ಬೆಳಗ್ಗೆ ಹಾಗ ಸಂಜೆ ವೇಳೆ ಮತಗಟ್ಟೆಗಳಲ್ಲಿ ಹೆಚ್ಚಿನ ಸರತಿ ಸಾಲುಗಳು ಕಂಡು ಬಂದವು. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಗುಜ್ಜಾಡಿಯ ನಾಯಕವಾಡಿಯಲ್ಲಿ ಅನುಮತಿ ಪಡೆಯದೇ, ಹಾಕಲಾಗಿದ್ದ ಅನಧಿಕೃತ ಬೂತನ್ನು ತೆರವು ಮಾಡಲಾಯಿತು. ಈ ವೇಳೆ ಕೆಲ ಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಗರಿಷ್ಠ ಮತದಾನ
2014 ರ ಲೋಕಸಭೆ ಚುನಾವಣೆಯಲ್ಲಿ ಬೈಂದೂರಲ್ಲಿ ಶೇ. 72.31, 2018ರ ಉಪ ಚುನಾವಣೆಯಲ್ಲಿ ಶೇ.57.98, 2019ರಲ್ಲಿ ಶೇ. 75.23 ಮತದಾನವಾಗಿತ್ತು. ಈ ಹಿಂದಿನ ಮೂರು ಚುನಾವಣೆಗೆ ಹೋಲಿಸಿದರೆ ಈ ಬಾರಿ ಗರಿಷ್ಠ ಶೇ. 76.40 ರಷ್ಟು ಮತದಾನ ಆಗಿರುವುದಾಗಿದೆ. ಇನ್ನು 2013 ರ ವಿಧಾನಸಭಾ ಚುನಾವಣೆಯಲ್ಲಿ ಶೇ.75.68, 2018ರಲ್ಲಿ ಶೇ.77.76 ಹಾಗೂ ಕಳೆದ ವರ್ಷದ ಚುನಾವಣೆಯಲ್ಲಿ ಶೇ. 77.86 ಪ್ರತಿಶತ ಮತದಾನ ನಡೆದಿತ್ತು.

ನಕ್ಸಲ್‌ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ
ಹಳ್ಳಿಹೊಳೆ, ಅಮಾಸೆಬೈಲು, ಯಡಮೊಗೆ, ಇರಿಗೆ ಸಹಿತ ನಕ್ಸಲ್‌ ಬಾಧಿತ 19 ಮತಗಟ್ಟೆಗಳು ಸೇರಿದಂತೆ ಒಟ್ಟು 43 ಸೂಕ್ಷ್ಮ ಮತಗಟ್ಟೆಗಳಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಸಹಿತ 15 ಕೇಂದ್ರಿಯ ಮೀಸಲು ಪಡೆ, ಅರ್ಧ ತುಕಡಿ, 2 ಕೆಎಸ್‌ಆರ್‌ಪಿ, 3 ಜಿಲ್ಲಾ ಮೀಸಲು ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ನಕ್ಸಲ್‌ ಮತಗಟ್ಟೆಗಳಲ್ಲಿಯೂ ಉತ್ತಮ ಮತದಾನ ಕಂಡುಬಂತು. ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್ಪಿ ಅರುಣ್‌ ಕುಮಾರ್‌ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಮುಖರಿಂದ ಮತದಾನ
ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಮಚ್ಚಟ್ಟು, ಗುರುರಾಜ್‌ ಗಂಟಿಹೊಳೆ ಕಂಚಿಕಾನ್‌, ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಕೆರಾಡಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ ಕನ್ಯಾನ, ಬಿ.ಎಂ. ಸುಕುಮಾರ್‌ ಶೆಟ್ಟಿ ಬೆಳ್ಳಾಲದಲ್ಲಿ ಮತ ಚಲಾಯಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.